27ರಂದು ದಾವಣಗೆರೆಯಲ್ಲಿ ಏರ್ಪಡಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಶಾ, ಸಿರಿಗೆರೆ ಬೃಹನ್ಮಠಕ್ಕೆ ಭೇಟಿ ನೀಡುವರು. ಅಲ್ಲಿಂದ ಚಿತ್ರದುರ್ಗಕ್ಕೆ ತೆರಳಿ ಮುರುಘಾಮಠ ಹಾಗೂ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ಕೊಡುವರು. ಬಳಿಕ, ಚಳ್ಳಕೆರೆಯಲ್ಲಿ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ, ಪಂಗಡದವರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.