<p><strong>ಬೆಂಗಳೂರು:</strong> ವಿದೇಶ ಪ್ರವಾಸ ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ನಂತರವೂ ಮೂಲಸೌಲಭ್ಯ ಇಲಾಖೆ ಕಾರ್ಯದರ್ಶಿ ರಾಜಕುಮಾರ್ ಖತ್ರಿ ಸೇರಿದಂತೆ ಕೆಲ ಅಧಿಕಾರಿಗಳು ವಿದೇಶ ಪ್ರವಾಸ ತೆರಳಿದ್ದಾರೆ.<br /> <br /> ವಿಶ್ವ ಬಂಡವಾಳ ಹೂಡಿಕೆ ಸಮಾವೇಶದ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ವಿದೇಶ ಪ್ರವಾಸದಲ್ಲಿದ್ದು, ಅದರಲ್ಲಿ ಭಾಗವಹಿಸಲು ಖತ್ರಿ ತೆರಳಿದ್ದಾರೆ.<br /> ಬರ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿದೇಶ ಪ್ರವಾಸವನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ರದ್ದುಪಡಿಸಿದ್ದರು. ಇದಕ್ಕೆ ಪೂರಕವಾಗಿ ಸರ್ಕಾರವೂ ಸುತ್ತೋಲೆ ಹೊರಡಿಸಿತ್ತು. ಅದರ ಹೊರತಾಗಿಯೂ ಶನಿವಾರ ರಾತ್ರಿ ಖತ್ರಿ ಅವರು ತೈವಾನ್ಗೆ ತೆರಳಿದ್ದಾರೆ.<br /> <br /> ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಕೆ.ವಿ.ರಾಜು ಮತ್ತು ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ವಿ.ನಾಗರಾಜನ್ ಕೂಡ ವಿದೇಶ ಪ್ರವಾಸ ತೆರಳಿದ್ದಾರೆ ಎಂದು ಗೊತ್ತಾಗಿದೆ.<br /> <br /> <strong>ಸಚಿವರ ಪ್ರವಾಸ:</strong> ಸಚಿವ ಎ.ನಾರಾಯಣಸ್ವಾಮಿ ಅವರು ತಮ್ಮ ಕುಟುಂಬ ಸದಸ್ಯರ ಜತೆ ಇಟಲಿ ಮತ್ತು ಫ್ರಾನ್ಸ್ ದೇಶಕ್ಕೆ ತೆರಳಿದ್ದಾರೆ.ಇದು ಖಾಸಗಿ ಪ್ರವಾಸವಾದ ಕಾರಣ, ಅದಕ್ಕೆ ಮುಖ್ಯಮಂತ್ರಿ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿದೇಶ ಪ್ರವಾಸ ರದ್ದುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ನಂತರವೂ ಮೂಲಸೌಲಭ್ಯ ಇಲಾಖೆ ಕಾರ್ಯದರ್ಶಿ ರಾಜಕುಮಾರ್ ಖತ್ರಿ ಸೇರಿದಂತೆ ಕೆಲ ಅಧಿಕಾರಿಗಳು ವಿದೇಶ ಪ್ರವಾಸ ತೆರಳಿದ್ದಾರೆ.<br /> <br /> ವಿಶ್ವ ಬಂಡವಾಳ ಹೂಡಿಕೆ ಸಮಾವೇಶದ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ವಿದೇಶ ಪ್ರವಾಸದಲ್ಲಿದ್ದು, ಅದರಲ್ಲಿ ಭಾಗವಹಿಸಲು ಖತ್ರಿ ತೆರಳಿದ್ದಾರೆ.<br /> ಬರ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿದೇಶ ಪ್ರವಾಸವನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ರದ್ದುಪಡಿಸಿದ್ದರು. ಇದಕ್ಕೆ ಪೂರಕವಾಗಿ ಸರ್ಕಾರವೂ ಸುತ್ತೋಲೆ ಹೊರಡಿಸಿತ್ತು. ಅದರ ಹೊರತಾಗಿಯೂ ಶನಿವಾರ ರಾತ್ರಿ ಖತ್ರಿ ಅವರು ತೈವಾನ್ಗೆ ತೆರಳಿದ್ದಾರೆ.<br /> <br /> ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಕೆ.ವಿ.ರಾಜು ಮತ್ತು ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ವಿ.ನಾಗರಾಜನ್ ಕೂಡ ವಿದೇಶ ಪ್ರವಾಸ ತೆರಳಿದ್ದಾರೆ ಎಂದು ಗೊತ್ತಾಗಿದೆ.<br /> <br /> <strong>ಸಚಿವರ ಪ್ರವಾಸ:</strong> ಸಚಿವ ಎ.ನಾರಾಯಣಸ್ವಾಮಿ ಅವರು ತಮ್ಮ ಕುಟುಂಬ ಸದಸ್ಯರ ಜತೆ ಇಟಲಿ ಮತ್ತು ಫ್ರಾನ್ಸ್ ದೇಶಕ್ಕೆ ತೆರಳಿದ್ದಾರೆ.ಇದು ಖಾಸಗಿ ಪ್ರವಾಸವಾದ ಕಾರಣ, ಅದಕ್ಕೆ ಮುಖ್ಯಮಂತ್ರಿ ಅನುಮತಿ ನೀಡಿದ್ದಾರೆ ಎನ್ನಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>