<p><strong>ಬೆಂಗಳೂರು: </strong>ರಾಜ್ಯ ವಕೀಲರ ಪರಿಷತ್ನ 25 ಪದಾಧಿಕಾರಿಗಳ ಆಯ್ಕೆಗೆ ಕಳೆದ ತಿಂಗಳ 27ರಂದು ನಡೆದ ಚುನಾವಣೆಯ ಮತ ಎಣಿಕೆಗೆ ಭಾರತೀಯ ವಕೀಲರ ಪರಿಷತ್ ಚುನಾವಣಾ ನ್ಯಾಯಮಂಡಳಿ ಮಧ್ಯಂತರ ತಡೆ ನೀಡಿದೆ.</p>.<p>‘ಚುನಾವಣೆ ಕ್ರಮಬದ್ಧವಾಗಿ ನಡೆದಿಲ್ಲ ಹಾಗೂ ಮತ ಎಣಿಕೆಗೆ ಸರಿಯಾದ ಪೂರ್ವ ಸಿದ್ಧತೆ ಇಲ್ಲ’ ಎಂದು ಆಕ್ಷೇಪಿಸಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದ ದುರ್ಗಾಪ್ರಸಾದ್ ಎಂಬುವರು ಸಲ್ಲಿಸಿದ್ದ ಅರ್ಜಿ ಆಧರಿಸಿ ಈ ತಡೆ ನೀಡಲಾಗಿದೆ.</p>.<p>ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನೇತೃತ್ವದ ನ್ಯಾಯಮಂಡಳಿ ಈ ಅರ್ಜಿಯ ವಿಚಾರಣೆ ನಡೆಸಿ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿಗೆ ಆದೇಶಿಸಿದೆ. ಅಂತೆಯೇ ಮತ ಎಣಿಕೆ ಪೆಟ್ಟಿಗೆಗಳನ್ನು ಪರಿಶೀಲಿಸಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆಯೂ ನಿರ್ದೇಶಿಸಲಾಗಿದೆ. ಈ ಸಂಬಂಧ ವೀಕ್ಷಕರನ್ನಾಗಿ ನಿವೃತ್ತ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರನ್ನು ನೇಮಿಸಿ ನ್ಯಾಯಮಂಡಳಿ ಆದೇಶಿಸಿದೆ.</p>.<p>ಪರಿಶೀಲನೆ: ನ್ಯಾಯಮಂಡಳಿ ನಿರ್ದೇಶನದ ಅನುಸಾರ ಆನಂದ ಬೈರಾರೆಡ್ಡಿ ಅವರು ಗುರುವಾರ ಪರಿಷತ್ ಕಚೇರಿಗೆ ಬಂದು ಚುನಾವಣಾ ಅಧಿಕಾರಿಯೂ ಆದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ ಅವರನ್ನು ಭೇಟಿ ಮಾಡಿ ವಿವರ ಪಡೆದರು. ಅಂತೆಯೇ ಮತಪಟ್ಟಿಗೆ ಇರಿಸಿರುವ ಸ್ಥಳ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ವಕೀಲರ ಪರಿಷತ್ನ 25 ಪದಾಧಿಕಾರಿಗಳ ಆಯ್ಕೆಗೆ ಕಳೆದ ತಿಂಗಳ 27ರಂದು ನಡೆದ ಚುನಾವಣೆಯ ಮತ ಎಣಿಕೆಗೆ ಭಾರತೀಯ ವಕೀಲರ ಪರಿಷತ್ ಚುನಾವಣಾ ನ್ಯಾಯಮಂಡಳಿ ಮಧ್ಯಂತರ ತಡೆ ನೀಡಿದೆ.</p>.<p>‘ಚುನಾವಣೆ ಕ್ರಮಬದ್ಧವಾಗಿ ನಡೆದಿಲ್ಲ ಹಾಗೂ ಮತ ಎಣಿಕೆಗೆ ಸರಿಯಾದ ಪೂರ್ವ ಸಿದ್ಧತೆ ಇಲ್ಲ’ ಎಂದು ಆಕ್ಷೇಪಿಸಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದ ದುರ್ಗಾಪ್ರಸಾದ್ ಎಂಬುವರು ಸಲ್ಲಿಸಿದ್ದ ಅರ್ಜಿ ಆಧರಿಸಿ ಈ ತಡೆ ನೀಡಲಾಗಿದೆ.</p>.<p>ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನೇತೃತ್ವದ ನ್ಯಾಯಮಂಡಳಿ ಈ ಅರ್ಜಿಯ ವಿಚಾರಣೆ ನಡೆಸಿ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿಗೆ ಆದೇಶಿಸಿದೆ. ಅಂತೆಯೇ ಮತ ಎಣಿಕೆ ಪೆಟ್ಟಿಗೆಗಳನ್ನು ಪರಿಶೀಲಿಸಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆಯೂ ನಿರ್ದೇಶಿಸಲಾಗಿದೆ. ಈ ಸಂಬಂಧ ವೀಕ್ಷಕರನ್ನಾಗಿ ನಿವೃತ್ತ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರನ್ನು ನೇಮಿಸಿ ನ್ಯಾಯಮಂಡಳಿ ಆದೇಶಿಸಿದೆ.</p>.<p>ಪರಿಶೀಲನೆ: ನ್ಯಾಯಮಂಡಳಿ ನಿರ್ದೇಶನದ ಅನುಸಾರ ಆನಂದ ಬೈರಾರೆಡ್ಡಿ ಅವರು ಗುರುವಾರ ಪರಿಷತ್ ಕಚೇರಿಗೆ ಬಂದು ಚುನಾವಣಾ ಅಧಿಕಾರಿಯೂ ಆದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಜಿ.ಶಿವಣ್ಣ ಅವರನ್ನು ಭೇಟಿ ಮಾಡಿ ವಿವರ ಪಡೆದರು. ಅಂತೆಯೇ ಮತಪಟ್ಟಿಗೆ ಇರಿಸಿರುವ ಸ್ಥಳ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>