<p>ಬೆಂಗಳೂರು: ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಮಗದಂ ಆನಂದ ಕುಮಾರ್ ಅಪ್ಪು ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಲಾಗಿದೆ.<br /> <br /> ಭಾನುವಾರ ನಡೆದ ಸಭೆಯಲ್ಲಿ ಪರಿಷತ್ತಿನ ಒಟ್ಟು 25 ಸದಸ್ಯರ ಪೈಕಿ 14 ಮಂದಿ ಮಗದಂ ಅವರ ವಿರುದ್ಧ ಮತ ಚಲಾಯಿಸಿದರು. ಈ ಕಾರಣಕ್ಕೆ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು.<br /> <br /> `ಪರಿಷತ್ತಿನ ನಿಯಮದ ಪ್ರಕಾರ ಕೊನೆಯ ಪಕ್ಷ ಎರಡು ತಿಂಗಳಿಗೆ ಒಮ್ಮೆ ಸಭೆ ಕರೆಯಬೇಕು. ಆದರೆ ಅವರು ಆ ಪ್ರಕಾರ ಒಂದೇ ಒಂದು ಸಭೆ ಕರೆಯಲಿಲ್ಲ. ಈ ಬಗ್ಗೆ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ~ ಎಂದು ಸದಸ್ಯರು ಅವಿಶ್ವಾಸ ಗೊತ್ತುವಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ.<br /> <br /> `ನ್ಯಾಯಮೂರ್ತಿ ಜೆ.ಎಸ್.ಕೇಹರ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಗದಂ ಅವರಿಗೆ ಸರಿಯಾಗಿ ಇಂಗ್ಲಿಷ್ನಲ್ಲಿದ್ದ ಬೀಳ್ಕೊಡುಗೆ ಭಾಷಣ ಓದಲು ಆಗಲಿಲ್ಲ. ಇಂತಹವರು ಪರಿಷತ್ತಿನ ಅಧ್ಯಕ್ಷರಾಗಿ ಇರುವುದು ಬೇಡ~ ಎಂದು ಸದಸ್ಯರು ಗೊತ್ತುವಳಿಯಲ್ಲಿ ಉಲ್ಲೇಖಿಸಿದ್ದಾರೆ.<br /> <br /> ಪರಿಷತ್ತಿನ 51 ವರ್ಷಗಳ ಇತಿಹಾಸದಲ್ಲಿ ಅಧ್ಯಕ್ಷರೊಬ್ಬರನ್ನು ಈ ರೀತಿ ಅವಿಶ್ವಾಸ ಗೊತ್ತುವಳಿ ಮೂಲಕ ಪದಚ್ಯುತಗೊಳಿಸಿದ್ದು ಇದೇ ಪ್ರಥಮ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಮಗದಂ ಆನಂದ ಕುಮಾರ್ ಅಪ್ಪು ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಲಾಗಿದೆ.<br /> <br /> ಭಾನುವಾರ ನಡೆದ ಸಭೆಯಲ್ಲಿ ಪರಿಷತ್ತಿನ ಒಟ್ಟು 25 ಸದಸ್ಯರ ಪೈಕಿ 14 ಮಂದಿ ಮಗದಂ ಅವರ ವಿರುದ್ಧ ಮತ ಚಲಾಯಿಸಿದರು. ಈ ಕಾರಣಕ್ಕೆ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು.<br /> <br /> `ಪರಿಷತ್ತಿನ ನಿಯಮದ ಪ್ರಕಾರ ಕೊನೆಯ ಪಕ್ಷ ಎರಡು ತಿಂಗಳಿಗೆ ಒಮ್ಮೆ ಸಭೆ ಕರೆಯಬೇಕು. ಆದರೆ ಅವರು ಆ ಪ್ರಕಾರ ಒಂದೇ ಒಂದು ಸಭೆ ಕರೆಯಲಿಲ್ಲ. ಈ ಬಗ್ಗೆ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ~ ಎಂದು ಸದಸ್ಯರು ಅವಿಶ್ವಾಸ ಗೊತ್ತುವಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ.<br /> <br /> `ನ್ಯಾಯಮೂರ್ತಿ ಜೆ.ಎಸ್.ಕೇಹರ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಗದಂ ಅವರಿಗೆ ಸರಿಯಾಗಿ ಇಂಗ್ಲಿಷ್ನಲ್ಲಿದ್ದ ಬೀಳ್ಕೊಡುಗೆ ಭಾಷಣ ಓದಲು ಆಗಲಿಲ್ಲ. ಇಂತಹವರು ಪರಿಷತ್ತಿನ ಅಧ್ಯಕ್ಷರಾಗಿ ಇರುವುದು ಬೇಡ~ ಎಂದು ಸದಸ್ಯರು ಗೊತ್ತುವಳಿಯಲ್ಲಿ ಉಲ್ಲೇಖಿಸಿದ್ದಾರೆ.<br /> <br /> ಪರಿಷತ್ತಿನ 51 ವರ್ಷಗಳ ಇತಿಹಾಸದಲ್ಲಿ ಅಧ್ಯಕ್ಷರೊಬ್ಬರನ್ನು ಈ ರೀತಿ ಅವಿಶ್ವಾಸ ಗೊತ್ತುವಳಿ ಮೂಲಕ ಪದಚ್ಯುತಗೊಳಿಸಿದ್ದು ಇದೇ ಪ್ರಥಮ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>