<p>ಬೆಂಗಳೂರು: `ವಕ್ಫ್ ಆಸ್ತಿ ಬಚಾವೋ~ ಆಂದೋಲನವನ್ನು ಈ ತಿಂಗಳ ಅಂತ್ಯದೊಳಗೆ ಬೀದರ್ನಿಂದ ಬೆಂಗಳೂರು ವರೆಗೆ ಕೈಗೊಳ್ಳಲು ಅಲ್ಪಸಂಖ್ಯಾತ ಮೋರ್ಚಾವು ಮುಂದಾಗಿದೆ.<br /> <br /> ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಅಧ್ಯಕ್ಷ ಡಾ.ನಿಜಾಮುದ್ದೀನ್ ಎಫ್. ಮೌಸೀನ್ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, `ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾನಿಪ್ಪಾಡಿ ನೀಡಿರುವ ವರದಿ ಅನ್ವಯ ರಾಜ್ಯ ವಕ್ಫ್ ಮಂಡಳಿಯ 2 ಲಕ್ಷ ಕೋಟಿಗಳ ಆಸ್ತಿ ಕಬಳಿಕೆಯ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕು~ ಎಂದು ಒತ್ತಾಯಿಸಿದರು.<br /> <br /> `ಈ ಕೂಡಲೇ ಮುಖ್ಯಮಂತ್ರಿ ಅವರು ಪ್ರಕರಣವನ್ನು ಸದನದಲ್ಲಿ ಚರ್ಚಿಸಲು ಅವಕಾಶ ನೀಡಿ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.<br /> <br /> `ಜನರಿಗೆ ವಕ್ಫ್ ಮಂಡಳಿಯಲ್ಲಿ ನಡೆದಿರುವ ಅಕ್ರಮಗಳನ್ನು ತಿಳಿಸಲು ಆಂದೋಲನ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಲಾಗುವುದು~ ಎಂದರು.<br /> <br /> `ವಕ್ಫ್ ಮಂಡಳಿ ಆದಾಯ ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಉಪಯೋಗವಾಗಬೇಕಿತ್ತು. ಕೇಂದ್ರ ಮತ್ತು ರಾಜ್ಯ ಸಚಿವರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ~ ಎಂದು ಅವರು ಆರೋಪಿಸಿದರು.<br /> <br /> `ವಕ್ಫ್ ಆಸ್ತಿ ಕಬಳಿಕೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳ ಬಣ್ಣ ಬಯಲಾಗಿದೆ. ಬಡ ಮುಸಲ್ಮಾನರಿಗೆ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ದ್ರೋಹ ಮಾಡಲಾಗಿದೆ. ಇದನ್ನು ಬೃಹತ್ ಮಟ್ಟದಲ್ಲಿ ಪ್ರತಿಭಟಿಸಲಾಗುವುದು~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ವಕ್ಫ್ ಆಸ್ತಿ ಬಚಾವೋ~ ಆಂದೋಲನವನ್ನು ಈ ತಿಂಗಳ ಅಂತ್ಯದೊಳಗೆ ಬೀದರ್ನಿಂದ ಬೆಂಗಳೂರು ವರೆಗೆ ಕೈಗೊಳ್ಳಲು ಅಲ್ಪಸಂಖ್ಯಾತ ಮೋರ್ಚಾವು ಮುಂದಾಗಿದೆ.<br /> <br /> ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಅಧ್ಯಕ್ಷ ಡಾ.ನಿಜಾಮುದ್ದೀನ್ ಎಫ್. ಮೌಸೀನ್ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, `ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾನಿಪ್ಪಾಡಿ ನೀಡಿರುವ ವರದಿ ಅನ್ವಯ ರಾಜ್ಯ ವಕ್ಫ್ ಮಂಡಳಿಯ 2 ಲಕ್ಷ ಕೋಟಿಗಳ ಆಸ್ತಿ ಕಬಳಿಕೆಯ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕು~ ಎಂದು ಒತ್ತಾಯಿಸಿದರು.<br /> <br /> `ಈ ಕೂಡಲೇ ಮುಖ್ಯಮಂತ್ರಿ ಅವರು ಪ್ರಕರಣವನ್ನು ಸದನದಲ್ಲಿ ಚರ್ಚಿಸಲು ಅವಕಾಶ ನೀಡಿ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.<br /> <br /> `ಜನರಿಗೆ ವಕ್ಫ್ ಮಂಡಳಿಯಲ್ಲಿ ನಡೆದಿರುವ ಅಕ್ರಮಗಳನ್ನು ತಿಳಿಸಲು ಆಂದೋಲನ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಲಾಗುವುದು~ ಎಂದರು.<br /> <br /> `ವಕ್ಫ್ ಮಂಡಳಿ ಆದಾಯ ಅಲ್ಪಸಂಖ್ಯಾತರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಉಪಯೋಗವಾಗಬೇಕಿತ್ತು. ಕೇಂದ್ರ ಮತ್ತು ರಾಜ್ಯ ಸಚಿವರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ~ ಎಂದು ಅವರು ಆರೋಪಿಸಿದರು.<br /> <br /> `ವಕ್ಫ್ ಆಸ್ತಿ ಕಬಳಿಕೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳ ಬಣ್ಣ ಬಯಲಾಗಿದೆ. ಬಡ ಮುಸಲ್ಮಾನರಿಗೆ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ದ್ರೋಹ ಮಾಡಲಾಗಿದೆ. ಇದನ್ನು ಬೃಹತ್ ಮಟ್ಟದಲ್ಲಿ ಪ್ರತಿಭಟಿಸಲಾಗುವುದು~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>