<p><strong>ಬೆಂಗಳೂರು:</strong> ಅಗ್ನಿಶಾಮಕದಳದ ಸಿಬ್ಬಂದಿಯೊಬ್ಬರ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಸಮೀಪದ ಬೈರಸಂದ್ರದಲ್ಲಿ ಶುಕ್ರವಾರ ನಡೆದಿದೆ.<br /> <br /> `ನಗರದ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಸಿಬ್ಬಂದಿಯಾದ ಮಂಜುನಾಥ ಅವರ ಪತ್ನಿ ಶಿಲ್ಪಾ(20) ಆತ್ಮಹತ್ಯೆ ಮಾಡಿಕೊಂಡವರು. ಅವರ ವಿವಾಹವಾಗಿ ಒಂದು ವರ್ಷವಾಗಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಯಲ್ಲಿಯೇ ನೇಣು ಹಾಕಿಕೊಂಡಿದ್ದಾರೆ. ಶಿಲ್ಪಾ ಅವರ ತಂದೆ ಬಾಲಕೃಷ್ಣ ಹಾಗೂ ತಾಯಿ ಪ್ರಭಾ ಜೆ.ಪಿ. ನಗರದಲ್ಲಿ ವಾಸಿಸುತ್ತಿದ್ದಾರೆ~ ಎಂದು ಸಿದ್ದಾಪುರ ಠಾಣೆಯ ಇನ್ಸ್ಪೆಕ್ಟರ್ ಸಿ.ಆರ್.ರವಿಶಂಕರ್ ತಿಳಿಸಿದರು.<br /> <br /> `ಮಂಜುನಾಥ ಹಾಗೂ ಆತನ ತಾಯಿ ಪುಷ್ಪಾ ನನ್ನ ಮಗಳಿಗೆ ಐದು ಲಕ್ಷ ರೂಪಾಯಿ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು. ನನ್ನ ಮಗಳನ್ನು ಅವರೇ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡುತ್ತಿದ್ದಾರೆ~ ಎಂದು ಶಿಲ್ಪಾ ಪೋಷಕರು ದೂರಿದ್ದಾರೆ.<br /> <br /> ಪುಷ್ಪಾ ಅವರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶೀಘ್ರಲಿಪಿಗಾರರಾಗಿ (ಟೈಪಿಸ್ಟ್) ಕೆಲಸ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಲಾಯಿತು. <br /> ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಮಂಜುನಾಥ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಗ್ನಿಶಾಮಕದಳದ ಸಿಬ್ಬಂದಿಯೊಬ್ಬರ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಸಮೀಪದ ಬೈರಸಂದ್ರದಲ್ಲಿ ಶುಕ್ರವಾರ ನಡೆದಿದೆ.<br /> <br /> `ನಗರದ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಸಿಬ್ಬಂದಿಯಾದ ಮಂಜುನಾಥ ಅವರ ಪತ್ನಿ ಶಿಲ್ಪಾ(20) ಆತ್ಮಹತ್ಯೆ ಮಾಡಿಕೊಂಡವರು. ಅವರ ವಿವಾಹವಾಗಿ ಒಂದು ವರ್ಷವಾಗಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಯಲ್ಲಿಯೇ ನೇಣು ಹಾಕಿಕೊಂಡಿದ್ದಾರೆ. ಶಿಲ್ಪಾ ಅವರ ತಂದೆ ಬಾಲಕೃಷ್ಣ ಹಾಗೂ ತಾಯಿ ಪ್ರಭಾ ಜೆ.ಪಿ. ನಗರದಲ್ಲಿ ವಾಸಿಸುತ್ತಿದ್ದಾರೆ~ ಎಂದು ಸಿದ್ದಾಪುರ ಠಾಣೆಯ ಇನ್ಸ್ಪೆಕ್ಟರ್ ಸಿ.ಆರ್.ರವಿಶಂಕರ್ ತಿಳಿಸಿದರು.<br /> <br /> `ಮಂಜುನಾಥ ಹಾಗೂ ಆತನ ತಾಯಿ ಪುಷ್ಪಾ ನನ್ನ ಮಗಳಿಗೆ ಐದು ಲಕ್ಷ ರೂಪಾಯಿ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು. ನನ್ನ ಮಗಳನ್ನು ಅವರೇ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡುತ್ತಿದ್ದಾರೆ~ ಎಂದು ಶಿಲ್ಪಾ ಪೋಷಕರು ದೂರಿದ್ದಾರೆ.<br /> <br /> ಪುಷ್ಪಾ ಅವರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶೀಘ್ರಲಿಪಿಗಾರರಾಗಿ (ಟೈಪಿಸ್ಟ್) ಕೆಲಸ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಲಾಯಿತು. <br /> ವರದಕ್ಷಿಣೆ ಕಿರುಕುಳದ ಆರೋಪದ ಮೇಲೆ ಮಂಜುನಾಥ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>