<p><strong>ಯಲಹಂಕ:</strong> `ಸಮಯಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ವಾಸ್ತವವನ್ನು ಅರ್ಥ ಮಾಡಿಕೊಂಡು ವರ್ತಮಾನದಲ್ಲಿ ಬದುಕುವುದನ್ನು ರೂಢಿಸಿಕೊಳ್ಳಬೇಕು' ಎಂದು ಬೇಲಿಮಠದ ಶಿವರುದ್ರ ಸ್ವಾಮೀಜಿ ಹೇಳಿದರು.<br /> <br /> ವಿದ್ಯಾರಣ್ಯಪುರ ವೀರಶೈವ ಸೇವಾ ಸಮಿತಿ ವತಿಯಿಂದ ವಿದ್ಯಾರಣ್ಯಪುರದಲ್ಲಿ ಆಯೋಜಿಸಿದ್ದ ಬಸವಣ್ಣ ಅವರ 880ನೇ ಜಯಂತಿ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಬಸವಣ್ಣ ಅವರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಸುಂದರವಾದ ಬದುಕು ಕಟ್ಟಿಕೊಳ್ಳಬಹುದು' ಎಂದರು.<br /> <br /> ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, `ಗುರು ಬಸವಣ್ಣ, ಅಕ್ಕಮಹಾದೇವಿ, ಕನಕದಾಸ ಅವರಂತಹ ದಾರ್ಶನಿಕರು ನೀಡಿದ ಹಿತವಚನಗಳನ್ನು ಪಾಲಿಸುವಲ್ಲಿ ನಾವು ಎಡವಿದ್ದೇವೆ. ಇದರಿಂದ ಸಮಾಜದ ಆರೋಗ್ಯ ನಿರೀಕ್ಷಿತ ಮಟ್ಟದಲ್ಲಿಲ್ಲ' ಎಂದರು.<br /> ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.<br /> <br /> ಬಿಬಿಎಂಪಿ ಸದಸ್ಯರಾದ ನಂದಿನಿ ಕೆ.ಶ್ರೀನಿವಾಸ್, ಇ.ಪಿಳ್ಳಪ್ಪ, ಯಶೋದಮ್ಮ ಇ.ಕೃಷ್ಣಪ್ಪ, ಸಮಿತಿಯ ಅಧ್ಯಕ್ಷ ಬಸವರಾಜ ಕೋಣೆ, ಪ್ರಧಾನ ಕಾರ್ಯದರ್ಶಿ ಎಂ.ಜಿ.ಶರಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> `ಸಮಯಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ವಾಸ್ತವವನ್ನು ಅರ್ಥ ಮಾಡಿಕೊಂಡು ವರ್ತಮಾನದಲ್ಲಿ ಬದುಕುವುದನ್ನು ರೂಢಿಸಿಕೊಳ್ಳಬೇಕು' ಎಂದು ಬೇಲಿಮಠದ ಶಿವರುದ್ರ ಸ್ವಾಮೀಜಿ ಹೇಳಿದರು.<br /> <br /> ವಿದ್ಯಾರಣ್ಯಪುರ ವೀರಶೈವ ಸೇವಾ ಸಮಿತಿ ವತಿಯಿಂದ ವಿದ್ಯಾರಣ್ಯಪುರದಲ್ಲಿ ಆಯೋಜಿಸಿದ್ದ ಬಸವಣ್ಣ ಅವರ 880ನೇ ಜಯಂತಿ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಬಸವಣ್ಣ ಅವರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಸುಂದರವಾದ ಬದುಕು ಕಟ್ಟಿಕೊಳ್ಳಬಹುದು' ಎಂದರು.<br /> <br /> ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, `ಗುರು ಬಸವಣ್ಣ, ಅಕ್ಕಮಹಾದೇವಿ, ಕನಕದಾಸ ಅವರಂತಹ ದಾರ್ಶನಿಕರು ನೀಡಿದ ಹಿತವಚನಗಳನ್ನು ಪಾಲಿಸುವಲ್ಲಿ ನಾವು ಎಡವಿದ್ದೇವೆ. ಇದರಿಂದ ಸಮಾಜದ ಆರೋಗ್ಯ ನಿರೀಕ್ಷಿತ ಮಟ್ಟದಲ್ಲಿಲ್ಲ' ಎಂದರು.<br /> ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.<br /> <br /> ಬಿಬಿಎಂಪಿ ಸದಸ್ಯರಾದ ನಂದಿನಿ ಕೆ.ಶ್ರೀನಿವಾಸ್, ಇ.ಪಿಳ್ಳಪ್ಪ, ಯಶೋದಮ್ಮ ಇ.ಕೃಷ್ಣಪ್ಪ, ಸಮಿತಿಯ ಅಧ್ಯಕ್ಷ ಬಸವರಾಜ ಕೋಣೆ, ಪ್ರಧಾನ ಕಾರ್ಯದರ್ಶಿ ಎಂ.ಜಿ.ಶರಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>