<p><strong>ಕಲಬುರ್ಗಿ:</strong> ಈಶಾನ್ಯ ಪದವೀಧರರ ಕ್ಷೇತ್ರದಿಂದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಬೆಂಬಲಿಗರೊಂದಿಗೆ ಮಿನಿ ವಿಧಾನಸೌಧದಲ್ಲಿ ಮಂಗಳವಾರ ನಾಮಪತ್ರ ಸಲ್ಲಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಏಕೀಕರಣದ ಉದ್ದೇಶ ಇನ್ನೂ ಈಡೇರಿಲ್ಲ. ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳು ಈಗಲೂ ಹಿಂದುಳಿದಿವೆ. ಇದುವರೆಗೆ ಆಡಳಿತ ನಡೆಸಿರುವ ಎಲ್ಲಾ ಪಕ್ಷಗಳೂ ಈ ಭಾಗವನ್ನು ಕಡೆಗಣಿಸಿವೆ. ಈ ಭಾಗ ಅಭಿವೃದ್ಧಿ ಆಗಬೇಕಾದರೆ ವಿಧಾನಸಭೆ ಅಥವಾ ವಿಧಾನ ಪರಿಷತ್ನಲ್ಲಿ ಗಟ್ಟಿಯಾಗಿ ಹೋರಾಟ ಮಾಡಬೇಕಾಗಿದೆ. ಈ ಕಾರಣಕ್ಕಾಗಿ ಈಶಾನ್ಯ ಪದವೀಧರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.</p>.<p>‘ನಾಡು, ನುಡಿ ಮತ್ತು ಗಡಿ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದ್ದೇನೆ. ಅಧಿಕಾರದ ಆಸೆಗಾಗಿ ಎಂದೂ ರಾಜಿಯಾಗಿಲ್ಲ. 371 (ಜೆ) ಕಾಯ್ದೆ, ಮಹದಾಯಿಗೆ ಸಂಬಂಧಿಸಿದಂತೆಯೂ ಹೋರಾಟ ಮಾಡಿದ್ದೇನೆ. ಪದವೀಧರ ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿದರೆ ನನ್ನ ಹೋರಾಟಕ್ಕೆ<br /> ಶಕ್ತಿ ಬರುತ್ತದೆ’ ಎಂದು ಹೇಳಿದರು.</p>.<p>ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದ ಮಾತನಾಡಿ, ‘ವಾಟಾಳ್ ನಾಗರಾಜ್ ಕನ್ನಡದ ಕೂಗು. ವಿಧಾನಸಭೆ, ವಿಧಾನ ಪರಿಷತ್ಗೆ ಇಂತಹವರು ಬೇಕು. ಆದ್ದರಿಂದ ಮತದಾರರು ಅವರಿಗೆ ಆಶೀರ್ವಾದ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಪ್ರವೀಣಶೆಟ್ಟಿ, ಕೆ.ಆರ್.ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಈಶಾನ್ಯ ಪದವೀಧರರ ಕ್ಷೇತ್ರದಿಂದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಬೆಂಬಲಿಗರೊಂದಿಗೆ ಮಿನಿ ವಿಧಾನಸೌಧದಲ್ಲಿ ಮಂಗಳವಾರ ನಾಮಪತ್ರ ಸಲ್ಲಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಏಕೀಕರಣದ ಉದ್ದೇಶ ಇನ್ನೂ ಈಡೇರಿಲ್ಲ. ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳು ಈಗಲೂ ಹಿಂದುಳಿದಿವೆ. ಇದುವರೆಗೆ ಆಡಳಿತ ನಡೆಸಿರುವ ಎಲ್ಲಾ ಪಕ್ಷಗಳೂ ಈ ಭಾಗವನ್ನು ಕಡೆಗಣಿಸಿವೆ. ಈ ಭಾಗ ಅಭಿವೃದ್ಧಿ ಆಗಬೇಕಾದರೆ ವಿಧಾನಸಭೆ ಅಥವಾ ವಿಧಾನ ಪರಿಷತ್ನಲ್ಲಿ ಗಟ್ಟಿಯಾಗಿ ಹೋರಾಟ ಮಾಡಬೇಕಾಗಿದೆ. ಈ ಕಾರಣಕ್ಕಾಗಿ ಈಶಾನ್ಯ ಪದವೀಧರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.</p>.<p>‘ನಾಡು, ನುಡಿ ಮತ್ತು ಗಡಿ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದ್ದೇನೆ. ಅಧಿಕಾರದ ಆಸೆಗಾಗಿ ಎಂದೂ ರಾಜಿಯಾಗಿಲ್ಲ. 371 (ಜೆ) ಕಾಯ್ದೆ, ಮಹದಾಯಿಗೆ ಸಂಬಂಧಿಸಿದಂತೆಯೂ ಹೋರಾಟ ಮಾಡಿದ್ದೇನೆ. ಪದವೀಧರ ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿದರೆ ನನ್ನ ಹೋರಾಟಕ್ಕೆ<br /> ಶಕ್ತಿ ಬರುತ್ತದೆ’ ಎಂದು ಹೇಳಿದರು.</p>.<p>ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದ ಮಾತನಾಡಿ, ‘ವಾಟಾಳ್ ನಾಗರಾಜ್ ಕನ್ನಡದ ಕೂಗು. ವಿಧಾನಸಭೆ, ವಿಧಾನ ಪರಿಷತ್ಗೆ ಇಂತಹವರು ಬೇಕು. ಆದ್ದರಿಂದ ಮತದಾರರು ಅವರಿಗೆ ಆಶೀರ್ವಾದ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಪ್ರವೀಣಶೆಟ್ಟಿ, ಕೆ.ಆರ್.ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>