<p><strong>ವಜಾಕ್ಕೆ ಪರಿಷತ್ ಪಟ್ಟು</strong><br /> <br /> <strong>ಬೆಂಗಳೂರು: </strong>`ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹೇಶಪ್ಪ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ಹಾಗೂ ಈ ವಿಚಾರದಲ್ಲಿ ರಾಜ್ಯಪಾಲರ ನಿರ್ಲಿಪ್ತ ಧೋರಣೆಯನ್ನು ಖಂಡಿಸಿ ಇದೇ ಗುರುವಾರ (ಏ.5) ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜಭವನ್ ಚಲೋಗೆ ಕರೆನೀಡಿದೆ.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಕೆ.ರಮೇಶ್, `ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಏ.7 ರಂದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು~ ಎಂದರು.<br /> <br /> `ರಾಜ್ಯ ಹೈಕೋರ್ಟ್ ರಾಜ್ಯಪಾಲರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ ಇದುವರೆಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಇದು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ~ ಎಂದು ಹೇಳಿದರು.<br /> <br /> `ಇದೇ ಸಂದರ್ಭದಲ್ಲಿ ವಿಶ್ರಾಂತ ಕುಲಪತಿಗಳಾದ ಮಹಿಳಾ ವಿಶ್ವವಿದ್ಯಾಲಯದ ಡಾ.ಸಯೀದಾ ಅಖ್ತರ್, ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಡಾ.ಪ್ರಭಾಕರನ್, ಮೈಸೂರು ವಿಶ್ವವಿದ್ಯಾಲಯದ ಡಾ.ಶಶಿಧರ ಪ್ರಸಾದ್ ಅವರ ಭ್ರಷ್ಟತೆಯ ತನಿಖಾ ವರದಿಯನ್ನು ಬಹಿರಂಗಗೊಳಿಸುವಂತೆ ಆಗ್ರಹಿಸಲಾಗುವುದು~ ಎಂದು ಹೇಳಿದರು.<br /> <br /> `ಎಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯ ಪ್ರವೇಶ ಶುಲ್ಕವನ್ನು ಸರ್ಕಾರವು ಶೇ 10 ರಷ್ಟು ಹೆಚ್ಚಳ ಮಾಡಿರುವುದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪದವಿಗಳು ಗಗನ ಕುಸುಮಗಳಾಗಲಿವೆ~ ಎಂದು ಸರ್ಕಾರದ ನೀತಿಯನ್ನು ಖಂಡಿಸಿದರು. `ಕಾಮೆಡ್-ಕೆ ಯನ್ನು ಕೂಡಲೇ ರದ್ದುಗೊಳಿಸಿ, ಸರ್ಕಾರದ ಮುಖಾಂತರವೇ ಸಿಇಟಿ ಪರೀಕ್ಷೆಗಳನ್ನು ನಡೆಸಿ ಎಲ್ಲ ವೈದ್ಯಕೀಯ ಸೀಟುಗಳನ್ನು ಸರ್ಕಾರವೇ ಭರ್ತಿ ಮಾಡಿಕೊಳ್ಳಬೇಕು~ ಎಂದು ಒತ್ತಾಯಿಸಿದರು.<br /> <br /> <strong>ಅಹಿಂದ ಪ್ರತಿಪಟ್ಟು</strong><br /> <br /> <strong>ಬೆಂಗಳೂರು:</strong> `ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹೇಶಪ್ಪ ಅವರ ವಿರುದ್ಧ ಮಾಡುತ್ತಿರುವ ತೇಜೋವಧೆಯನ್ನು ಈ ಕೂಡಲೇ ನಿಲ್ಲಿಸಬೇಕು. ಹಾಗೂ ಈಗ ಕೈಗೊಂಡಿರುವ ಪ್ರತಿಭಟನೆಯನ್ನು ಕೈ ಬಿಡಬೇಕು~ ಎಂದು ಅಹಿಂದ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಒತ್ತಾಯಿಸಿದೆ.<br /> <br /> ಒಕ್ಕೂಟದ ಅಧ್ಯಕ್ಷ ಚಂದ್ರಪ್ಪ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ರಾಜ್ಯಪಾಲರು ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ತನಿಖೆಯು ಪ್ರಗತಿಯಲ್ಲಿರುವಾಗಲೇ ಎಬಿವಿಪಿ ಸಂಘಟನೆಗಳು ಡಾ.ಮಹೇಶಪ್ಪ ಅವರ ಮೇಲೆ ಆರೋಪ ಮಾಡುವುದನ್ನು ಖಂಡಿಸುತ್ತೇವೆ~ ಎಂದರು.<br /> <br /> `ತನಿಖೆಯ ವರದಿ ಬಂದ ನಂತರ ಆರೋಪದಲ್ಲಿ ಹುರುಳಿದೆಯೋ ಅಥವಾ ಇಲ್ಲವೋ ಎಂಬುದು ತಿಳಿಯುತ್ತದೆ. ನ್ಯಾಯ ಎಲ್ಲರಿಗೂ ಒಂದೇ ಇರುತ್ತದೆ. ತನಿಖೆಯ ವರದಿಗೆ ಎಲ್ಲರೂ ತಲೆಬಾಗಲೇಬೇಕು~ ಎಂದು ಹೇಳಿದರು.<br /> `ಬಾಲವೀರರೆಡ್ಡಿ ಅವರು ಕುಲಪತಿಗಳಾಗಿದ್ದಾಗ ತಮ್ಮ ಅಧಿಕಾರ ಅವಧಿಯಲ್ಲಿ ಸಾಕಷ್ಟು ಅವ್ಯವಹಾರಗಳನ್ನು ಮಾಡಿದ್ದಾರೆ. ಆಗ ಎಬಿವಿಪಿ ಸಂಘಟನೆಗಳು ಅವರ ಬಗ್ಗೆ ಚಕಾರ ಎತ್ತಲಿಲ್ಲ. ಈಗ ಹಿಂದುಳಿದ ವರ್ಗದಿಂದ ಬಂದಂತಹ ವ್ಯಕ್ತಿಯನ್ನು ಈ ರೀತಿ ಶೋಷಿಸುವುದು ಸರಿಯಲ್ಲ~ ಎಂದು ಹೇಳಿದರು.<br /> <br /> `ಎಬಿವಿಪಿ ಸಂಘಟನೆಗಳು ಇನ್ನು ಮುಂದೆ ಹೇಳಿಕೆ ನೀಡುವುದಾಗಲೀ ಅಥವಾ ಪ್ರತಿಭಟನೆ ಕೈಗೊಳ್ಳುವುದಾದರೆ, ಅವರ ವಿರುದ್ಧ ಅಹಿಂದ ಪ್ರಗತಿಪರ ಸಂಘಟನೆಗಳು ಉಗ್ರವಾದ ಹೋರಾಟ ನಡೆಸುತ್ತವೆ~ ಎಂದು ಎಚ್ಚರಿಸಿದರು.<br /> <br /> ಗೋಷ್ಠಿಯಲ್ಲಿ ಕುರುಬರ ಸೇನೆಯ ರಾಜ್ಯಾಧ್ಯಕ್ಷ ಸತ್ಯಪ್ರಕಾಶ್, ಕುರುಬರ ಸೇನೆಯ ಜಿಲ್ಲಾಧ್ಯಕ್ಷ ಗುರು ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಜಾಕ್ಕೆ ಪರಿಷತ್ ಪಟ್ಟು</strong><br /> <br /> <strong>ಬೆಂಗಳೂರು: </strong>`ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹೇಶಪ್ಪ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ಹಾಗೂ ಈ ವಿಚಾರದಲ್ಲಿ ರಾಜ್ಯಪಾಲರ ನಿರ್ಲಿಪ್ತ ಧೋರಣೆಯನ್ನು ಖಂಡಿಸಿ ಇದೇ ಗುರುವಾರ (ಏ.5) ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜಭವನ್ ಚಲೋಗೆ ಕರೆನೀಡಿದೆ.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಕೆ.ರಮೇಶ್, `ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಏ.7 ರಂದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು~ ಎಂದರು.<br /> <br /> `ರಾಜ್ಯ ಹೈಕೋರ್ಟ್ ರಾಜ್ಯಪಾಲರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ ಇದುವರೆಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಇದು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ~ ಎಂದು ಹೇಳಿದರು.<br /> <br /> `ಇದೇ ಸಂದರ್ಭದಲ್ಲಿ ವಿಶ್ರಾಂತ ಕುಲಪತಿಗಳಾದ ಮಹಿಳಾ ವಿಶ್ವವಿದ್ಯಾಲಯದ ಡಾ.ಸಯೀದಾ ಅಖ್ತರ್, ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಡಾ.ಪ್ರಭಾಕರನ್, ಮೈಸೂರು ವಿಶ್ವವಿದ್ಯಾಲಯದ ಡಾ.ಶಶಿಧರ ಪ್ರಸಾದ್ ಅವರ ಭ್ರಷ್ಟತೆಯ ತನಿಖಾ ವರದಿಯನ್ನು ಬಹಿರಂಗಗೊಳಿಸುವಂತೆ ಆಗ್ರಹಿಸಲಾಗುವುದು~ ಎಂದು ಹೇಳಿದರು.<br /> <br /> `ಎಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯ ಪ್ರವೇಶ ಶುಲ್ಕವನ್ನು ಸರ್ಕಾರವು ಶೇ 10 ರಷ್ಟು ಹೆಚ್ಚಳ ಮಾಡಿರುವುದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪದವಿಗಳು ಗಗನ ಕುಸುಮಗಳಾಗಲಿವೆ~ ಎಂದು ಸರ್ಕಾರದ ನೀತಿಯನ್ನು ಖಂಡಿಸಿದರು. `ಕಾಮೆಡ್-ಕೆ ಯನ್ನು ಕೂಡಲೇ ರದ್ದುಗೊಳಿಸಿ, ಸರ್ಕಾರದ ಮುಖಾಂತರವೇ ಸಿಇಟಿ ಪರೀಕ್ಷೆಗಳನ್ನು ನಡೆಸಿ ಎಲ್ಲ ವೈದ್ಯಕೀಯ ಸೀಟುಗಳನ್ನು ಸರ್ಕಾರವೇ ಭರ್ತಿ ಮಾಡಿಕೊಳ್ಳಬೇಕು~ ಎಂದು ಒತ್ತಾಯಿಸಿದರು.<br /> <br /> <strong>ಅಹಿಂದ ಪ್ರತಿಪಟ್ಟು</strong><br /> <br /> <strong>ಬೆಂಗಳೂರು:</strong> `ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಮಹೇಶಪ್ಪ ಅವರ ವಿರುದ್ಧ ಮಾಡುತ್ತಿರುವ ತೇಜೋವಧೆಯನ್ನು ಈ ಕೂಡಲೇ ನಿಲ್ಲಿಸಬೇಕು. ಹಾಗೂ ಈಗ ಕೈಗೊಂಡಿರುವ ಪ್ರತಿಭಟನೆಯನ್ನು ಕೈ ಬಿಡಬೇಕು~ ಎಂದು ಅಹಿಂದ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಒತ್ತಾಯಿಸಿದೆ.<br /> <br /> ಒಕ್ಕೂಟದ ಅಧ್ಯಕ್ಷ ಚಂದ್ರಪ್ಪ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ರಾಜ್ಯಪಾಲರು ತನಿಖೆಗೆ ಆದೇಶಿಸಿರುವ ಹಿನ್ನೆಲೆಯಲ್ಲಿ ತನಿಖೆಯು ಪ್ರಗತಿಯಲ್ಲಿರುವಾಗಲೇ ಎಬಿವಿಪಿ ಸಂಘಟನೆಗಳು ಡಾ.ಮಹೇಶಪ್ಪ ಅವರ ಮೇಲೆ ಆರೋಪ ಮಾಡುವುದನ್ನು ಖಂಡಿಸುತ್ತೇವೆ~ ಎಂದರು.<br /> <br /> `ತನಿಖೆಯ ವರದಿ ಬಂದ ನಂತರ ಆರೋಪದಲ್ಲಿ ಹುರುಳಿದೆಯೋ ಅಥವಾ ಇಲ್ಲವೋ ಎಂಬುದು ತಿಳಿಯುತ್ತದೆ. ನ್ಯಾಯ ಎಲ್ಲರಿಗೂ ಒಂದೇ ಇರುತ್ತದೆ. ತನಿಖೆಯ ವರದಿಗೆ ಎಲ್ಲರೂ ತಲೆಬಾಗಲೇಬೇಕು~ ಎಂದು ಹೇಳಿದರು.<br /> `ಬಾಲವೀರರೆಡ್ಡಿ ಅವರು ಕುಲಪತಿಗಳಾಗಿದ್ದಾಗ ತಮ್ಮ ಅಧಿಕಾರ ಅವಧಿಯಲ್ಲಿ ಸಾಕಷ್ಟು ಅವ್ಯವಹಾರಗಳನ್ನು ಮಾಡಿದ್ದಾರೆ. ಆಗ ಎಬಿವಿಪಿ ಸಂಘಟನೆಗಳು ಅವರ ಬಗ್ಗೆ ಚಕಾರ ಎತ್ತಲಿಲ್ಲ. ಈಗ ಹಿಂದುಳಿದ ವರ್ಗದಿಂದ ಬಂದಂತಹ ವ್ಯಕ್ತಿಯನ್ನು ಈ ರೀತಿ ಶೋಷಿಸುವುದು ಸರಿಯಲ್ಲ~ ಎಂದು ಹೇಳಿದರು.<br /> <br /> `ಎಬಿವಿಪಿ ಸಂಘಟನೆಗಳು ಇನ್ನು ಮುಂದೆ ಹೇಳಿಕೆ ನೀಡುವುದಾಗಲೀ ಅಥವಾ ಪ್ರತಿಭಟನೆ ಕೈಗೊಳ್ಳುವುದಾದರೆ, ಅವರ ವಿರುದ್ಧ ಅಹಿಂದ ಪ್ರಗತಿಪರ ಸಂಘಟನೆಗಳು ಉಗ್ರವಾದ ಹೋರಾಟ ನಡೆಸುತ್ತವೆ~ ಎಂದು ಎಚ್ಚರಿಸಿದರು.<br /> <br /> ಗೋಷ್ಠಿಯಲ್ಲಿ ಕುರುಬರ ಸೇನೆಯ ರಾಜ್ಯಾಧ್ಯಕ್ಷ ಸತ್ಯಪ್ರಕಾಶ್, ಕುರುಬರ ಸೇನೆಯ ಜಿಲ್ಲಾಧ್ಯಕ್ಷ ಗುರು ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>