<p><strong>ಬೆಂಗಳೂರು:</strong> ‘ವಿಜಯಪುರದ ಬಿಎಲ್ಡಿ ಶಿಕ್ಷಣ ಸಂಸ್ಥೆಯು ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಸಹಕಾರದಲ್ಲಿ ₨2 ಕೋಟಿ ವೆಚ್ಚದಲ್ಲಿ ವಚನಗಳ ಭಾಷಾಂತರ ಯೋಜನೆ ಕೈಗೆತ್ತಿಕೊಂಡಿದೆ’ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.<br /> <br /> ಬಸವ ವೇದಿಕೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಬಸವಶ್ರೀ’ ಮತ್ತು ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ಎರಡು ಸಂಪುಟಗಳಲ್ಲಿ ಭಾಷಾಂತರ ಕೃತಿ ಹೊರಬರಲಿದೆ. ಮೊದಲ ಸಂಪುಟದಲ್ಲಿ ಬಸವಣ್ಣನವರ ಜೀವನ ಚರಿತ್ರೆ, ಇತಿಹಾಸ, ಆಯ್ದ ವಚನಗಳು ಹಾಗೂ ಎರಡನೇ ಸಂಪುಟದಲ್ಲಿ ಸಮಗ್ರ ವಚನಗಳು ಇರಲಿವೆ. ಹಿಂದಿ, ಇಂಗ್ಲಿಷ್, ಫ್ರೆಂಚ್, ಇಟಾಲಿಯನ್, ಸ್ಪ್ಯಾನಿಷ್ ಮೊದಲಾದ ಭಾಷೆಗಳಿಗೆ ವಚನಗಳನ್ನು ಭಾಷಾಂತರ ಮಾಡಲಾಗುವುದು’ ಎಂದರು.<br /> <br /> ‘ಸಮಾನತೆ, ಮೂಢನಂಬಿಕೆ, ಮಾನವೀಯ ಮೌಲ್ಯಗಳ ಬಗ್ಗೆ ಉದಾರವಾದ ಚಿಂತನೆ ಹೊಂದಿ, ಅನುಭವ ಮಂಟಪದ ಪರಿಕಲ್ಪನೆ ಮೂಲಕ ಸಾಮಾಜಿಕ ಶುದ್ಧೀಕರಣ ಮಾಡಲು ಬಸವಾದಿ ಶರಣರು ಬಯಸಿದ್ದರು. ಅವರ ಅಂದಿನ ಕನಸುಗಳು ಇಂದಿಗೂ ಸಾಕಾರಗೊಂಡಿಲ್ಲ. ಈ ಕುರಿತು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ’ ಎಂದು ಅನಿಸಿಕೆ ವ್ಯಕ್ತಪಡಿಸಿದರು.<br /> <br /> ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ಮಾತನಾಡಿ, ‘ಬಸವಣ್ಣನವರು ಸಾಮಾಜಿಕ ಸುಧಾರಣೆಯ ಮುಂಜಾವಿನ ಧ್ರುವತಾರೆ’ ಎಂದು ಬಣ್ಣಿಸಿದರು.<br /> <br /> ‘ಅವರು ಸಮ ಸಮಾಜದ ಕನಸು ಕಂಡಿದ್ದರು. 800 ವರ್ಷಗಳ ಹಿಂದೆಯೇ ಜಾಗತಿಕ ಸಂವಿಧಾನ ಕೊಟ್ಟಿದ್ದಾರೆ. ಅದರ ಆಧಾರದ ಮೇಲೆ ಸರ್ಕಾರಗಳನ್ನು ನಡೆಸುವ, ಸಮಾಜ ಮುನ್ನಡೆಸುವ ಹೊಣೆಗಾರಿಕೆ ನಮ್ಮ ಮೇಲಿದೆ’ ಎಂದು ಹೇಳಿದರು.<br /> <br /> ಹಿರಿಯ ಸಾಹಿತಿ ಕಮಲಾ ಹಂಪನಾ ಮಾತನಾಡಿ, ‘ವಚನ ಸಾಹಿತ್ಯ ಇದ್ದಕ್ಕಿದ್ದ ಹಾಗೇ ಮೂಡಿದ ಸಾಹಿತ್ಯವಲ್ಲ. ದೇಶದಲ್ಲಿ ಈ ಹಿಂದೆ ಇದ್ದ ಅನೇಕ ಧರ್ಮಗಳನ್ನು ಸ್ವೀಕರಿಸಿ ಅದು ಬೆಳೆಯಿತು. ಆಡುನುಡಿಯಲ್ಲಿ ಜನಸಾಮಾನ್ಯರ ಮನಸ್ಸು ಮುಟ್ಟಿ, ಅವರನ್ನು ಪರಿವರ್ತಿಸುವುದು ವಚನಗಳ ವೈಶಿಷ್ಟ್ಯ. ಇಂದಿಗೂ ವಚನ ಸಾಹಿತ್ಯದ ಪ್ರಭಾವ ದಟ್ಟವಾಗಿರುವ ಪರಿಸರದಲ್ಲಿ ಶಾಂತಿ, ನೆಮ್ಮದಿ, ಸುವ್ಯವಸ್ಥೆ, ಸಹಬಾಳ್ವೆ ಮತ್ತು ಸಮಾನತೆ ಚೆನ್ನಾಗಿದೆ’ ಎಂದು ಹೇಳಿದರು.<br /> <br /> ನಿಘಂಟುತಜ್ಞ ಜಿ.ವೆಂಕಟಸುಬ್ಬಯ್ಯ ಅವರಿಗೆ ‘ಬಸವಶ್ರೀ’ ಪ್ರಶಸ್ತಿ ಮತ್ತು ಸಾಹಿತಿ ಕೆ.ಸಿ.ಶಿವಪ್ಪ, ಗಾಯಕಿ ಸಂಗೀತಾ ಕಟ್ಟಿ ಅವರಿಗೆ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಜಯಪುರದ ಬಿಎಲ್ಡಿ ಶಿಕ್ಷಣ ಸಂಸ್ಥೆಯು ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಸಹಕಾರದಲ್ಲಿ ₨2 ಕೋಟಿ ವೆಚ್ಚದಲ್ಲಿ ವಚನಗಳ ಭಾಷಾಂತರ ಯೋಜನೆ ಕೈಗೆತ್ತಿಕೊಂಡಿದೆ’ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.<br /> <br /> ಬಸವ ವೇದಿಕೆ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಬಸವಶ್ರೀ’ ಮತ್ತು ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ‘ಎರಡು ಸಂಪುಟಗಳಲ್ಲಿ ಭಾಷಾಂತರ ಕೃತಿ ಹೊರಬರಲಿದೆ. ಮೊದಲ ಸಂಪುಟದಲ್ಲಿ ಬಸವಣ್ಣನವರ ಜೀವನ ಚರಿತ್ರೆ, ಇತಿಹಾಸ, ಆಯ್ದ ವಚನಗಳು ಹಾಗೂ ಎರಡನೇ ಸಂಪುಟದಲ್ಲಿ ಸಮಗ್ರ ವಚನಗಳು ಇರಲಿವೆ. ಹಿಂದಿ, ಇಂಗ್ಲಿಷ್, ಫ್ರೆಂಚ್, ಇಟಾಲಿಯನ್, ಸ್ಪ್ಯಾನಿಷ್ ಮೊದಲಾದ ಭಾಷೆಗಳಿಗೆ ವಚನಗಳನ್ನು ಭಾಷಾಂತರ ಮಾಡಲಾಗುವುದು’ ಎಂದರು.<br /> <br /> ‘ಸಮಾನತೆ, ಮೂಢನಂಬಿಕೆ, ಮಾನವೀಯ ಮೌಲ್ಯಗಳ ಬಗ್ಗೆ ಉದಾರವಾದ ಚಿಂತನೆ ಹೊಂದಿ, ಅನುಭವ ಮಂಟಪದ ಪರಿಕಲ್ಪನೆ ಮೂಲಕ ಸಾಮಾಜಿಕ ಶುದ್ಧೀಕರಣ ಮಾಡಲು ಬಸವಾದಿ ಶರಣರು ಬಯಸಿದ್ದರು. ಅವರ ಅಂದಿನ ಕನಸುಗಳು ಇಂದಿಗೂ ಸಾಕಾರಗೊಂಡಿಲ್ಲ. ಈ ಕುರಿತು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ’ ಎಂದು ಅನಿಸಿಕೆ ವ್ಯಕ್ತಪಡಿಸಿದರು.<br /> <br /> ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ಮಾತನಾಡಿ, ‘ಬಸವಣ್ಣನವರು ಸಾಮಾಜಿಕ ಸುಧಾರಣೆಯ ಮುಂಜಾವಿನ ಧ್ರುವತಾರೆ’ ಎಂದು ಬಣ್ಣಿಸಿದರು.<br /> <br /> ‘ಅವರು ಸಮ ಸಮಾಜದ ಕನಸು ಕಂಡಿದ್ದರು. 800 ವರ್ಷಗಳ ಹಿಂದೆಯೇ ಜಾಗತಿಕ ಸಂವಿಧಾನ ಕೊಟ್ಟಿದ್ದಾರೆ. ಅದರ ಆಧಾರದ ಮೇಲೆ ಸರ್ಕಾರಗಳನ್ನು ನಡೆಸುವ, ಸಮಾಜ ಮುನ್ನಡೆಸುವ ಹೊಣೆಗಾರಿಕೆ ನಮ್ಮ ಮೇಲಿದೆ’ ಎಂದು ಹೇಳಿದರು.<br /> <br /> ಹಿರಿಯ ಸಾಹಿತಿ ಕಮಲಾ ಹಂಪನಾ ಮಾತನಾಡಿ, ‘ವಚನ ಸಾಹಿತ್ಯ ಇದ್ದಕ್ಕಿದ್ದ ಹಾಗೇ ಮೂಡಿದ ಸಾಹಿತ್ಯವಲ್ಲ. ದೇಶದಲ್ಲಿ ಈ ಹಿಂದೆ ಇದ್ದ ಅನೇಕ ಧರ್ಮಗಳನ್ನು ಸ್ವೀಕರಿಸಿ ಅದು ಬೆಳೆಯಿತು. ಆಡುನುಡಿಯಲ್ಲಿ ಜನಸಾಮಾನ್ಯರ ಮನಸ್ಸು ಮುಟ್ಟಿ, ಅವರನ್ನು ಪರಿವರ್ತಿಸುವುದು ವಚನಗಳ ವೈಶಿಷ್ಟ್ಯ. ಇಂದಿಗೂ ವಚನ ಸಾಹಿತ್ಯದ ಪ್ರಭಾವ ದಟ್ಟವಾಗಿರುವ ಪರಿಸರದಲ್ಲಿ ಶಾಂತಿ, ನೆಮ್ಮದಿ, ಸುವ್ಯವಸ್ಥೆ, ಸಹಬಾಳ್ವೆ ಮತ್ತು ಸಮಾನತೆ ಚೆನ್ನಾಗಿದೆ’ ಎಂದು ಹೇಳಿದರು.<br /> <br /> ನಿಘಂಟುತಜ್ಞ ಜಿ.ವೆಂಕಟಸುಬ್ಬಯ್ಯ ಅವರಿಗೆ ‘ಬಸವಶ್ರೀ’ ಪ್ರಶಸ್ತಿ ಮತ್ತು ಸಾಹಿತಿ ಕೆ.ಸಿ.ಶಿವಪ್ಪ, ಗಾಯಕಿ ಸಂಗೀತಾ ಕಟ್ಟಿ ಅವರಿಗೆ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>