<p><strong>ಬೆಂಗಳೂರು:</strong> `ದೇಶದ ಜನಸಂಖ್ಯೆಗೆ ಅಗತ್ಯವಿರುವಷ್ಟು ವಿದ್ಯುತ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ~ ಎಂದು ಕೇಂದ್ರ ಸರ್ಕಾರದ ವಿದ್ಯುತ್ ತರಬೇತಿ ಸಂಸ್ಥೆಯ ನಿರ್ದೇಶಕ ಎಂ.ಎನ್.ಮೂರ್ತಿ ಅಭಿಪ್ರಾಯಪಟ್ಟರು.<br /> <br /> ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ `ವಿದ್ಯುತ್ ಉತ್ಪಾದನೆಯಲ್ಲಿರುವ ಸವಾಲುಗಳು: ಮತ್ತು ವಿತರಣಾ ವ್ಯವಸ್ಥೆ~ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> `ನವೀಕರಿಸಬಹುದಾದ ಸಂಪನ್ಮೂಲವನ್ನು ಸಮಪರ್ಕವಾಗಿ ಬಳಸಿಕೊಂಡರೇ ವಿದ್ಯುತ್ ಉತ್ಪಾದನಾ ವ್ಯವಸ್ಥೆಯಲ್ಲಿ ವಿವಿಧ ಆಯಾಮಗಳನ್ನು ಪಡೆಯಲು ಸಾಧ್ಯವಿದೆ. ಇನ್ನೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಹೊಸ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವ ಅಗತ್ಯವಿದೆ~ ಎಂದರು.<br /> <br /> `ಕೆಲವೊಮ್ಮೆ ಸಾಕಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ, ವಿತರಣಾ ವ್ಯವಸ್ಥೆಯಲ್ಲಿ ಲೋಪವು ಸಹ ವಿದ್ಯುತ್ ಅಭಾವದಂತಹ ಸಮಸ್ಯೆಗಳನ್ನು ಸೃಷ್ಟಿಸಿದೆ. ವಿದ್ಯುತ್ ಉತ್ಪಾದನೆ ಮಾತ್ರವಲ್ಲ ವಿತರಣೆಗೂ ಹೆಚ್ಚಿನ ಗಮನ ಹರಿಸಬೇಕು~ ಎಂದ ಅವರು, ` ವಿದ್ಯುತ್ ಉತ್ಪಾದನಾ ಮತ್ತು ವಿತರಣಾ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆಗಳು ನಡೆಯಬೇಕು. ಆಗ ಮಾತ್ರ ವ್ಯವಸ್ಥೆ ಸುಧಾರಿಸಲು ಸಾಧ್ಯವಿದೆ~ ಎಂದು ಹೇಳಿದರು.<br /> <br /> ಕಾಲೇಜಿನ ಕಾರ್ಯದರ್ಶಿ ಗಾಳಿಸ್ವಾಮಿ, ` ಬೇಸಿಗೆಯಲ್ಲಿ ತಲೆದೋರುವ ವಿದ್ಯುತ್ ಅಭಾವದಂತಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವಾಗಿ ಈ ವಿಚಾರ ಸಂಕಿರಣವನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ದೇಶದ ಜನಸಂಖ್ಯೆಗೆ ಅಗತ್ಯವಿರುವಷ್ಟು ವಿದ್ಯುತ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ~ ಎಂದು ಕೇಂದ್ರ ಸರ್ಕಾರದ ವಿದ್ಯುತ್ ತರಬೇತಿ ಸಂಸ್ಥೆಯ ನಿರ್ದೇಶಕ ಎಂ.ಎನ್.ಮೂರ್ತಿ ಅಭಿಪ್ರಾಯಪಟ್ಟರು.<br /> <br /> ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ `ವಿದ್ಯುತ್ ಉತ್ಪಾದನೆಯಲ್ಲಿರುವ ಸವಾಲುಗಳು: ಮತ್ತು ವಿತರಣಾ ವ್ಯವಸ್ಥೆ~ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> `ನವೀಕರಿಸಬಹುದಾದ ಸಂಪನ್ಮೂಲವನ್ನು ಸಮಪರ್ಕವಾಗಿ ಬಳಸಿಕೊಂಡರೇ ವಿದ್ಯುತ್ ಉತ್ಪಾದನಾ ವ್ಯವಸ್ಥೆಯಲ್ಲಿ ವಿವಿಧ ಆಯಾಮಗಳನ್ನು ಪಡೆಯಲು ಸಾಧ್ಯವಿದೆ. ಇನ್ನೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಹೊಸ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವ ಅಗತ್ಯವಿದೆ~ ಎಂದರು.<br /> <br /> `ಕೆಲವೊಮ್ಮೆ ಸಾಕಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ, ವಿತರಣಾ ವ್ಯವಸ್ಥೆಯಲ್ಲಿ ಲೋಪವು ಸಹ ವಿದ್ಯುತ್ ಅಭಾವದಂತಹ ಸಮಸ್ಯೆಗಳನ್ನು ಸೃಷ್ಟಿಸಿದೆ. ವಿದ್ಯುತ್ ಉತ್ಪಾದನೆ ಮಾತ್ರವಲ್ಲ ವಿತರಣೆಗೂ ಹೆಚ್ಚಿನ ಗಮನ ಹರಿಸಬೇಕು~ ಎಂದ ಅವರು, ` ವಿದ್ಯುತ್ ಉತ್ಪಾದನಾ ಮತ್ತು ವಿತರಣಾ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆಗಳು ನಡೆಯಬೇಕು. ಆಗ ಮಾತ್ರ ವ್ಯವಸ್ಥೆ ಸುಧಾರಿಸಲು ಸಾಧ್ಯವಿದೆ~ ಎಂದು ಹೇಳಿದರು.<br /> <br /> ಕಾಲೇಜಿನ ಕಾರ್ಯದರ್ಶಿ ಗಾಳಿಸ್ವಾಮಿ, ` ಬೇಸಿಗೆಯಲ್ಲಿ ತಲೆದೋರುವ ವಿದ್ಯುತ್ ಅಭಾವದಂತಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವಾಗಿ ಈ ವಿಚಾರ ಸಂಕಿರಣವನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>