<p><strong>ಬೆಂಗಳೂರು:</strong> `ಕಳೆದ 50 ವರ್ಷಗಳಲ್ಲಿ ದೇಶದಲ್ಲಿ ಅಗಾಧ ಪ್ರಗತಿ ಆಗಿದೆ. ಇದಕ್ಕೆ ಶಿಕ್ಷಣವೇ ಕಾರಣ. ವಿದ್ಯೆಯಿಂದ ಅವಕಾಶಗಳ ಸೃಷ್ಟಿ ಆಗುತ್ತದೆ' ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.<br /> <br /> ನಗರದ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಉಜಿರೆ ಎಸ್ಡಿಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಶಿಕ್ಷಣದಿಂದ ದೇಶದಲ್ಲಿ ಸಾಕಷ್ಟು ಅವಕಾಶಗಳ ಸೃಷ್ಟಿ ಆಗಿದೆ. ಈಗ ಪ್ರೌಢಶಾಲೆಗೆ ತೆರಳಲು 100 ಕಿ.ಮೀ. ಕ್ರಮಿಸಬೇಕಿಲ್ಲ. ಐದು ಕಿ.ಮೀ.ಗೊಂದು ಪ್ರಾಥಮಿಕ ಶಾಲೆ, 15 ಕಿ.ಮೀ.ಗೊಂದು ಪ್ರೌಢಶಾಲೆ ಇದೆ. ಹಳ್ಳಿಗಳಲ್ಲಿ ಈಗ ಸಮೃದ್ಧಿಯ ವಾತಾವರಣ ಕಂಡು ಬರುತ್ತಿದೆ' ಎಂದು ಅವರು ಹೇಳಿದರು.<br /> <br /> ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿ, `ಮಾನವ ಜೀವನ ಸಾಧನೆಯ ಜೀವನ. ಎಲ್ಲರೂ ವಿಚಾರವಂತರು, ಸಾಧಕರಾಗಬೇಕು. ಮಾನವತ್ವ ಸಂಪಾದನೆ ಮಾಡಬೇಕು' ಎಂದು ಕಿವಿಮಾತು ಹೇಳಿದರು.<br /> <br /> ಸಂಘದ ಅಧ್ಯಕ್ಷ ಎನ್.ಸತ್ಯನಾರಾಯಣ ಹೊಳ್ಳ, `ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ವಿದ್ಯಾರ್ಥಿವೇತನ ಹಾಗೂ ಪದವೀಧರರು ಉದ್ಯೋಗ ಹುಡುಕಲು ಮಾರ್ಗದರ್ಶನ ನೀಡಲಾಗುವುದು. ಉದ್ಯೋಗ ಅರಸಿ ನಗರಕ್ಕೆ ಬಂದ ಯುವಜನರಿಗೆ ವಸತಿ ಮತ್ತಿತರ ಸೌಕರ್ಯ ಕಲ್ಪಿಸಲಾಗುವುದು' ಎಂದರು.<br /> <br /> ಈ ಸಂದರ್ಭ ಕಾಲೇಜಿನ ನಿವೃತ್ತ ಉಪನ್ಯಾಸಕ ಟಿ.ಆರ್.ನಾವಡ ಅವರನ್ನು ಸನ್ಮಾನಿಸಲಾಯಿತು. ಎಸ್ಡಿಎಂ ಕಾಲೇಜು ಪ್ರಾಂಶುಪಾಲ ಡಾ.ಬಿ.ಯಶೋವರ್ಮ, ಸಂಘದ ಕಾರ್ಯದರ್ಶಿ ಅಶೋಕ್ ಎಂ. ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಎಸ್ಡಿಎಂ ಕಾಲೇಜು ವಿದ್ಯಾರ್ಥಿಗಳಿಂದ ಯಕ್ಷಗಾನ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕಳೆದ 50 ವರ್ಷಗಳಲ್ಲಿ ದೇಶದಲ್ಲಿ ಅಗಾಧ ಪ್ರಗತಿ ಆಗಿದೆ. ಇದಕ್ಕೆ ಶಿಕ್ಷಣವೇ ಕಾರಣ. ವಿದ್ಯೆಯಿಂದ ಅವಕಾಶಗಳ ಸೃಷ್ಟಿ ಆಗುತ್ತದೆ' ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.<br /> <br /> ನಗರದ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಉಜಿರೆ ಎಸ್ಡಿಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಶಿಕ್ಷಣದಿಂದ ದೇಶದಲ್ಲಿ ಸಾಕಷ್ಟು ಅವಕಾಶಗಳ ಸೃಷ್ಟಿ ಆಗಿದೆ. ಈಗ ಪ್ರೌಢಶಾಲೆಗೆ ತೆರಳಲು 100 ಕಿ.ಮೀ. ಕ್ರಮಿಸಬೇಕಿಲ್ಲ. ಐದು ಕಿ.ಮೀ.ಗೊಂದು ಪ್ರಾಥಮಿಕ ಶಾಲೆ, 15 ಕಿ.ಮೀ.ಗೊಂದು ಪ್ರೌಢಶಾಲೆ ಇದೆ. ಹಳ್ಳಿಗಳಲ್ಲಿ ಈಗ ಸಮೃದ್ಧಿಯ ವಾತಾವರಣ ಕಂಡು ಬರುತ್ತಿದೆ' ಎಂದು ಅವರು ಹೇಳಿದರು.<br /> <br /> ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿ, `ಮಾನವ ಜೀವನ ಸಾಧನೆಯ ಜೀವನ. ಎಲ್ಲರೂ ವಿಚಾರವಂತರು, ಸಾಧಕರಾಗಬೇಕು. ಮಾನವತ್ವ ಸಂಪಾದನೆ ಮಾಡಬೇಕು' ಎಂದು ಕಿವಿಮಾತು ಹೇಳಿದರು.<br /> <br /> ಸಂಘದ ಅಧ್ಯಕ್ಷ ಎನ್.ಸತ್ಯನಾರಾಯಣ ಹೊಳ್ಳ, `ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ವಿದ್ಯಾರ್ಥಿವೇತನ ಹಾಗೂ ಪದವೀಧರರು ಉದ್ಯೋಗ ಹುಡುಕಲು ಮಾರ್ಗದರ್ಶನ ನೀಡಲಾಗುವುದು. ಉದ್ಯೋಗ ಅರಸಿ ನಗರಕ್ಕೆ ಬಂದ ಯುವಜನರಿಗೆ ವಸತಿ ಮತ್ತಿತರ ಸೌಕರ್ಯ ಕಲ್ಪಿಸಲಾಗುವುದು' ಎಂದರು.<br /> <br /> ಈ ಸಂದರ್ಭ ಕಾಲೇಜಿನ ನಿವೃತ್ತ ಉಪನ್ಯಾಸಕ ಟಿ.ಆರ್.ನಾವಡ ಅವರನ್ನು ಸನ್ಮಾನಿಸಲಾಯಿತು. ಎಸ್ಡಿಎಂ ಕಾಲೇಜು ಪ್ರಾಂಶುಪಾಲ ಡಾ.ಬಿ.ಯಶೋವರ್ಮ, ಸಂಘದ ಕಾರ್ಯದರ್ಶಿ ಅಶೋಕ್ ಎಂ. ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಎಸ್ಡಿಎಂ ಕಾಲೇಜು ವಿದ್ಯಾರ್ಥಿಗಳಿಂದ ಯಕ್ಷಗಾನ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>