<p><strong>ಬೆಂಗಳೂರು: </strong>ವಿಧಾನ ಮಂಡಲಕ್ಕೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದೇ 18ರಂದು ವಜ್ರ ಮಹೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಗುವುದು.<br /> <br /> ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸೇರಿದಂತೆ ಉಭಯ ಸದನಗಳಲ್ಲಿನ ಸದನ ನಾಯಕರೊಂದಿಗೆ ಮಂಗಳವಾರ ಸಮಾಲೋಚನೆ ನಡೆಸಿದ ನಂತರ ಸ್ಪೀಕರ್ ಕೆ.ಜಿ.ಬೋಪಯ್ಯ, ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.<br /> <br /> ರಾಜ್ಯಪಾಲ ಎಚ್. ಆರ್.ಭಾರದ್ವಾಜ್ ಸಮಾರಂಭ ಉದ್ಘಾಟಿಸಲಿದ್ದಾರೆ. ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಮುಖ್ಯಭಾಷಣ ಮಾಡಲಿದ್ದಾರೆ ಎಂದರು. 1952ರ ಜೂನ್ 18ರಂದು ಪ್ರಥಮ ಬಾರಿಗೆ ವಿಧಾನ ಮಂಡಲದ ಅಧಿವೇಶನ ನಡೆದಿತ್ತು.<br /> <br /> ಮೊದಲ ವಿಧಾನಸಭೆ ಶಾಸಕರಾಗಿದ್ದ ಯು.ಎಂ. ಮಾದಪ್ಪ (ಚಾಮರಾಜನಗರ), ಡಿ.ಜಿ. ತಿಮ್ಮೇಗೌಡ (ತಿಪಟೂರು) ಹಾಗೂ ಮುಲ್ಕಾ ಗೋವಿಂದ ರೆಡ್ಡಿ (ಚಿತ್ರದುರ್ಗ) ಅವರನ್ನು ಸನ್ಮಾನಿಸಲಾಗುವುದು. ಆರು ಜನ ಮಾಜಿ ಮುಖ್ಯಮಂತ್ರಿಗಳು, ಎಂಟು ಮಂದಿ ಮಾಜಿ ಸ್ಪೀಕರ್ಗಳನ್ನು ಗೌರವಿಸಲಾಗುವುದು ಎಂದು ವಿವರಿಸಿದರು.<br /> <br /> ವಿಧಾನಸಭೆ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದೆ. 120 ಪುಟಗಳ `ಸವಿ ನೆನಪು~ ಕಿರು ಹೊತ್ತಿಗೆ ಹೊರತರಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಧಾನ ಮಂಡಲಕ್ಕೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇದೇ 18ರಂದು ವಜ್ರ ಮಹೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಗುವುದು.<br /> <br /> ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸೇರಿದಂತೆ ಉಭಯ ಸದನಗಳಲ್ಲಿನ ಸದನ ನಾಯಕರೊಂದಿಗೆ ಮಂಗಳವಾರ ಸಮಾಲೋಚನೆ ನಡೆಸಿದ ನಂತರ ಸ್ಪೀಕರ್ ಕೆ.ಜಿ.ಬೋಪಯ್ಯ, ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.<br /> <br /> ರಾಜ್ಯಪಾಲ ಎಚ್. ಆರ್.ಭಾರದ್ವಾಜ್ ಸಮಾರಂಭ ಉದ್ಘಾಟಿಸಲಿದ್ದಾರೆ. ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಮುಖ್ಯಭಾಷಣ ಮಾಡಲಿದ್ದಾರೆ ಎಂದರು. 1952ರ ಜೂನ್ 18ರಂದು ಪ್ರಥಮ ಬಾರಿಗೆ ವಿಧಾನ ಮಂಡಲದ ಅಧಿವೇಶನ ನಡೆದಿತ್ತು.<br /> <br /> ಮೊದಲ ವಿಧಾನಸಭೆ ಶಾಸಕರಾಗಿದ್ದ ಯು.ಎಂ. ಮಾದಪ್ಪ (ಚಾಮರಾಜನಗರ), ಡಿ.ಜಿ. ತಿಮ್ಮೇಗೌಡ (ತಿಪಟೂರು) ಹಾಗೂ ಮುಲ್ಕಾ ಗೋವಿಂದ ರೆಡ್ಡಿ (ಚಿತ್ರದುರ್ಗ) ಅವರನ್ನು ಸನ್ಮಾನಿಸಲಾಗುವುದು. ಆರು ಜನ ಮಾಜಿ ಮುಖ್ಯಮಂತ್ರಿಗಳು, ಎಂಟು ಮಂದಿ ಮಾಜಿ ಸ್ಪೀಕರ್ಗಳನ್ನು ಗೌರವಿಸಲಾಗುವುದು ಎಂದು ವಿವರಿಸಿದರು.<br /> <br /> ವಿಧಾನಸಭೆ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದೆ. 120 ಪುಟಗಳ `ಸವಿ ನೆನಪು~ ಕಿರು ಹೊತ್ತಿಗೆ ಹೊರತರಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>