<p><strong>ತಲಘಟ್ಟಪುರ:</strong> ಕೆಲವು ನ್ಯಾಯ ಬೆಲೆ ಅಂಗಡಿ ಮಾಲೀಕರು ಪಡಿತರ ಚೀಟಿಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇಂಥವರಿಂದ ಪಡಿತರ ಚೀಟಿಗಳನ್ನು ವಶಪಡಿಸಿಕೊಂಡು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.<br /> <br /> ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯ ಬೈಯನಪಾಳ್ಯದಲ್ಲಿ ಬಿಬಿಎಂಪಿ ಮತ್ತು ಬಿಡಿಎ ವತಿಯಿಂದ ಸುಮಾರು ರೂ 25 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.<br /> ಯಶವಂತಪುರ ಕ್ಷೇತ್ರದಲ್ಲಿ ಮೂರೂವರೆ ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ 700 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಕುಡಿಯುವ ನೀರು ಹಾಗೂ ರಸ್ತೆ- ಒಳಚರಂಡಿ ಸಮಸ್ಯೆಯನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು ಎಂದರು.<br /> <br /> ಸ್ಥಳೀಯ ಪಾಲಿಕೆ ಸದಸ್ಯೆ ವೀಣಾ ನಾಗರಾಜು, ವಾರ್ಡ್ನಲ್ಲಿ 12 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಳೆ ಬಂದಾಗ ವೃಷಭಾವತಿ ನದಿ ಉಕ್ಕಿ ಹರಿದು ಕೆಂಗೇರಿ, ಮೈಲಸಂದ್ರ ಮುಂತಾದ ಬಡಾವಣೆಗಳಿಗೆ ನೀರು ನುಗ್ಗಿ ಭಾರಿ ಅನಾಹುತವಾಗುತ್ತಿತ್ತು. ಇದನ್ನು ತಡೆಯಲು ತಡೆಗೊಡೆ ನಿರ್ಮಿಸುವುದಕ್ಕೆ 7 ಕೋಟಿ ರೂಪಾಯಿ ಮಂಜೂರಾಗಿದೆ ಎಂದರು.<br /> <br /> ತಾ.ಪಂ.ಮಾಜಿ ಅಧ್ಯಕ್ಷ ಎಚ್. ನಾಗರಾಜು, ಪಾಲಿಕೆ ಜಂಟಿ ಆಯುಕ್ತ ಕೆ.ಎಂ.ರಾಮಚಂದ್ರನ್, ಜಿ.ಪಂ.ಸದಸ್ಯ ಎ.ಶಿವಕುಮಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಾಜರಹಳ್ಳಿ ಶಶಿಕುಮಾರ್, ಭೂ ಮಂಜೂರಾತಿ ಸಮಿತಿ ಅಧ್ಯಕ್ಷ ವೆಂಕಟಪ್ಪ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಲಘಟ್ಟಪುರ:</strong> ಕೆಲವು ನ್ಯಾಯ ಬೆಲೆ ಅಂಗಡಿ ಮಾಲೀಕರು ಪಡಿತರ ಚೀಟಿಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇಂಥವರಿಂದ ಪಡಿತರ ಚೀಟಿಗಳನ್ನು ವಶಪಡಿಸಿಕೊಂಡು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.<br /> <br /> ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯ ಬೈಯನಪಾಳ್ಯದಲ್ಲಿ ಬಿಬಿಎಂಪಿ ಮತ್ತು ಬಿಡಿಎ ವತಿಯಿಂದ ಸುಮಾರು ರೂ 25 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.<br /> ಯಶವಂತಪುರ ಕ್ಷೇತ್ರದಲ್ಲಿ ಮೂರೂವರೆ ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ 700 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಕುಡಿಯುವ ನೀರು ಹಾಗೂ ರಸ್ತೆ- ಒಳಚರಂಡಿ ಸಮಸ್ಯೆಯನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು ಎಂದರು.<br /> <br /> ಸ್ಥಳೀಯ ಪಾಲಿಕೆ ಸದಸ್ಯೆ ವೀಣಾ ನಾಗರಾಜು, ವಾರ್ಡ್ನಲ್ಲಿ 12 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಳೆ ಬಂದಾಗ ವೃಷಭಾವತಿ ನದಿ ಉಕ್ಕಿ ಹರಿದು ಕೆಂಗೇರಿ, ಮೈಲಸಂದ್ರ ಮುಂತಾದ ಬಡಾವಣೆಗಳಿಗೆ ನೀರು ನುಗ್ಗಿ ಭಾರಿ ಅನಾಹುತವಾಗುತ್ತಿತ್ತು. ಇದನ್ನು ತಡೆಯಲು ತಡೆಗೊಡೆ ನಿರ್ಮಿಸುವುದಕ್ಕೆ 7 ಕೋಟಿ ರೂಪಾಯಿ ಮಂಜೂರಾಗಿದೆ ಎಂದರು.<br /> <br /> ತಾ.ಪಂ.ಮಾಜಿ ಅಧ್ಯಕ್ಷ ಎಚ್. ನಾಗರಾಜು, ಪಾಲಿಕೆ ಜಂಟಿ ಆಯುಕ್ತ ಕೆ.ಎಂ.ರಾಮಚಂದ್ರನ್, ಜಿ.ಪಂ.ಸದಸ್ಯ ಎ.ಶಿವಕುಮಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಾಜರಹಳ್ಳಿ ಶಶಿಕುಮಾರ್, ಭೂ ಮಂಜೂರಾತಿ ಸಮಿತಿ ಅಧ್ಯಕ್ಷ ವೆಂಕಟಪ್ಪ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>