<p><strong>ಬೆಂಗಳೂರು: </strong>`ವೃದ್ಧಾಪ್ಯವು ಜೈವಿಕ ಬದಲಾವಣೆಯೇ ಹೊರತು ರೋಗವಲ್ಲ. ವೃದ್ಧಾಪ್ಯದ ಜೀವನವನ್ನೂ ವ್ಯವಸ್ಥಿತವಾಗಿ ರೂಪಿಸಿಕೊಳ್ಳಲು ಸಾಧ್ಯವಿದೆ~ ಎಂದು ಹಿರಿಯ ವೈದ್ಯ ಡಾ.ಬಿ.ಜಿ.ಚಂದ್ರಶೇಖರ್ ಹೇಳಿದರು.<br /> <br /> ನಗರದಲ್ಲಿ ಶನಿವಾರ ಸ್ಪಂದನ ಆಸ್ಪತ್ರೆಯು ವಿಶ್ವ ಆರೋಗ್ಯ ದಿನದ ಅಂಗವಾಗಿ ಆಯೋಜಿಸಿದ್ದ ಪುಸ್ತಕ ಮಳಿಗೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ವೈದ್ಯಲೋಕದ ಆವಿಷ್ಕಾರಗಳಿಂದಾಗಿ ವಯಸ್ಸಾದ ಕಾರಣದಿಂದ ಮರಣ ಹೊಂದುವವರ ಪ್ರಮಾಣವು ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ 60 ವರ್ಷ ಮೀರಿದವರ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗಲಿದೆ.<br /> <br /> ಆಗ ವೃದ್ಧರ ಸೇವೆಯನ್ನೇ ಪಡೆದುಕೊಳ್ಳುವುದು ಸಮಾಜಕ್ಕೆ ಅನಿವಾರ್ಯವಾಗಲಿದೆ. ಹೀಗಾಗಿ ವೃದ್ಧಾಪ್ಯವನ್ನೂ ಸರಿಯಾಗಿ ನಿಭಾಯಿಸುವುದನ್ನು ಜನರು ಈಗಿಂದಲೇ ಅರಿಯಬೇಕು~ ಎಂದು ಅವರು ತಿಳಿಸಿದರು.<br /> ವೈದ್ಯರಾದ ಡಾ.ವಿಶ್ವರೂಪಾಚಾರ್ ಮಾತನಾಡಿ, `ವೈದ್ಯರು ಚಿಕಿತ್ಸೆ ನೀಡುವ ಜೊತೆಗೇ ವೈದ್ಯ ಸಾಹಿತ್ಯ ರಚನೆಯ ಬಗ್ಗೆಯೂ ಆಸಕ್ತಿ ವಹಿಸಬೇಕು. <br /> <br /> ರೋಗಗಳು ಹಾಗೂ ಚಿಕಿತ್ಸೆಗಳ ಬಗ್ಗೆ ರೋಗಿಗಳಲ್ಲಿ ಅರಿವು ಮೂಡಿಸಲು ವೈದ್ಯರು ವೈದ್ಯ ಸಾಹಿತ್ಯದ ಓದು ಮತ್ತು ಬರವಣೆಗೆಯನ್ನು ರೂಡಿಸಿಕೊಳ್ಳಬೇಕು~ ಎಂದರು. ಕಾರ್ಯಕ್ರಮದಲ್ಲಿ ಕನ್ನಡ ವೈದ್ಯ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ವೈದ್ಯ ವಿಜ್ಞಾನಕ್ಕೆ ಸಂಬಂಧಿಸಿದ ನಾಲ್ಕು ಕಿರು ಪುಸ್ತಿಕೆಗಳನ್ನು ಬಿಡುಗಡೆ ಮಾಡಲಾಯಿತು. ಆಸ್ಪತ್ರೆಯ ನಿರ್ದೇಶಕ ಡಾ.ಶ್ರೀನಿವಾಸ್, ವೈದ್ಯರಾದ ಡಾ.ಪ್ರಿಯ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ವೃದ್ಧಾಪ್ಯವು ಜೈವಿಕ ಬದಲಾವಣೆಯೇ ಹೊರತು ರೋಗವಲ್ಲ. ವೃದ್ಧಾಪ್ಯದ ಜೀವನವನ್ನೂ ವ್ಯವಸ್ಥಿತವಾಗಿ ರೂಪಿಸಿಕೊಳ್ಳಲು ಸಾಧ್ಯವಿದೆ~ ಎಂದು ಹಿರಿಯ ವೈದ್ಯ ಡಾ.ಬಿ.ಜಿ.ಚಂದ್ರಶೇಖರ್ ಹೇಳಿದರು.<br /> <br /> ನಗರದಲ್ಲಿ ಶನಿವಾರ ಸ್ಪಂದನ ಆಸ್ಪತ್ರೆಯು ವಿಶ್ವ ಆರೋಗ್ಯ ದಿನದ ಅಂಗವಾಗಿ ಆಯೋಜಿಸಿದ್ದ ಪುಸ್ತಕ ಮಳಿಗೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ವೈದ್ಯಲೋಕದ ಆವಿಷ್ಕಾರಗಳಿಂದಾಗಿ ವಯಸ್ಸಾದ ಕಾರಣದಿಂದ ಮರಣ ಹೊಂದುವವರ ಪ್ರಮಾಣವು ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ 60 ವರ್ಷ ಮೀರಿದವರ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗಲಿದೆ.<br /> <br /> ಆಗ ವೃದ್ಧರ ಸೇವೆಯನ್ನೇ ಪಡೆದುಕೊಳ್ಳುವುದು ಸಮಾಜಕ್ಕೆ ಅನಿವಾರ್ಯವಾಗಲಿದೆ. ಹೀಗಾಗಿ ವೃದ್ಧಾಪ್ಯವನ್ನೂ ಸರಿಯಾಗಿ ನಿಭಾಯಿಸುವುದನ್ನು ಜನರು ಈಗಿಂದಲೇ ಅರಿಯಬೇಕು~ ಎಂದು ಅವರು ತಿಳಿಸಿದರು.<br /> ವೈದ್ಯರಾದ ಡಾ.ವಿಶ್ವರೂಪಾಚಾರ್ ಮಾತನಾಡಿ, `ವೈದ್ಯರು ಚಿಕಿತ್ಸೆ ನೀಡುವ ಜೊತೆಗೇ ವೈದ್ಯ ಸಾಹಿತ್ಯ ರಚನೆಯ ಬಗ್ಗೆಯೂ ಆಸಕ್ತಿ ವಹಿಸಬೇಕು. <br /> <br /> ರೋಗಗಳು ಹಾಗೂ ಚಿಕಿತ್ಸೆಗಳ ಬಗ್ಗೆ ರೋಗಿಗಳಲ್ಲಿ ಅರಿವು ಮೂಡಿಸಲು ವೈದ್ಯರು ವೈದ್ಯ ಸಾಹಿತ್ಯದ ಓದು ಮತ್ತು ಬರವಣೆಗೆಯನ್ನು ರೂಡಿಸಿಕೊಳ್ಳಬೇಕು~ ಎಂದರು. ಕಾರ್ಯಕ್ರಮದಲ್ಲಿ ಕನ್ನಡ ವೈದ್ಯ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ವೈದ್ಯ ವಿಜ್ಞಾನಕ್ಕೆ ಸಂಬಂಧಿಸಿದ ನಾಲ್ಕು ಕಿರು ಪುಸ್ತಿಕೆಗಳನ್ನು ಬಿಡುಗಡೆ ಮಾಡಲಾಯಿತು. ಆಸ್ಪತ್ರೆಯ ನಿರ್ದೇಶಕ ಡಾ.ಶ್ರೀನಿವಾಸ್, ವೈದ್ಯರಾದ ಡಾ.ಪ್ರಿಯ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>