<p><strong>ಬೆಂಗಳೂರು:</strong> ನಗರದಲ್ಲಿ ಶನಿವಾರವೂ ಜಿಟಿ ಜಿಟಿ ಮಳೆ ಸುರಿಯಿತು. ಚಳಿಯ ವಾತಾವರಣವೂ ಕೂಡ ಹೆಚ್ಚಿತ್ತು. ಎಡಬಿಡದೇ ಸುರಿದಿದ್ದರಿಂದ ಹದಗೆಟ್ಟ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರ ಅಸ್ತವ್ಯಸ್ತವಾಯಿತು.<br /> <br /> ಒಂದೆಡೆ ಪ್ರಯಾಣಿಕರು ಪರದಾಡುವಂತಾದರೆ, ಮತ್ತೊಂದೆಡೆ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನ ತೀವ್ರ ತೊಂದರೆ ಅನುಭವಿಸಿದರು. ನಗರದಲ್ಲಿ ಗರಿಷ್ಠ 4.4 ಮಿ.ಮೀ. ಮಳೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ 10.8 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.<br /> <br /> ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ನಗರದ ವಿವಿಧ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ತುಸು ತೊಂದೆಯಾಯಿತು.<br /> <br /> ಕಬ್ಬನ್ ಉದ್ಯಾನ ರಸ್ತೆ, ಬಸವೇಶ್ವರ ವೃತ್ತ, ಟ್ರಿನಿಟಿ ವೃತ್ತ, ಫ್ರೇಜರ್ ಟೌನ್, ಮೈಸೂರು ರಸ್ತೆ, ನಾಯಂಡಹಳ್ಳಿ ಜಂಕ್ಷನ್, ಕೋರಮಂಗಲ, ಬನಶಂಕರಿ ಸೇರಿದಂತೆ ಹಲವೆಡೆ ಮಳೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು.<br /> <br /> ಇದರಿಂದ ಕೆಲ ಕಾಲ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು. ಆನಂತರ ಪಾಲಿಕೆ ಮತ್ತು ಜಲಮಂಡಳಿಯ ಎಂಜಿನಿಯರ್ಗಳು ಕಾರ್ಯಾಚರಣೆ ನಡೆಸಿ ಸಂಚಾರ ಸುಗಮಗೊಳಿಸಿದರು ಎಂದು ಪಾಲಿಕೆಯ ನಿಯಂತ್ರಣಾ ಕಚೇರಿಯ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಶನಿವಾರವೂ ಜಿಟಿ ಜಿಟಿ ಮಳೆ ಸುರಿಯಿತು. ಚಳಿಯ ವಾತಾವರಣವೂ ಕೂಡ ಹೆಚ್ಚಿತ್ತು. ಎಡಬಿಡದೇ ಸುರಿದಿದ್ದರಿಂದ ಹದಗೆಟ್ಟ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರ ಅಸ್ತವ್ಯಸ್ತವಾಯಿತು.<br /> <br /> ಒಂದೆಡೆ ಪ್ರಯಾಣಿಕರು ಪರದಾಡುವಂತಾದರೆ, ಮತ್ತೊಂದೆಡೆ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನ ತೀವ್ರ ತೊಂದರೆ ಅನುಭವಿಸಿದರು. ನಗರದಲ್ಲಿ ಗರಿಷ್ಠ 4.4 ಮಿ.ಮೀ. ಮಳೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ 10.8 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.<br /> <br /> ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ನಗರದ ವಿವಿಧ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ತುಸು ತೊಂದೆಯಾಯಿತು.<br /> <br /> ಕಬ್ಬನ್ ಉದ್ಯಾನ ರಸ್ತೆ, ಬಸವೇಶ್ವರ ವೃತ್ತ, ಟ್ರಿನಿಟಿ ವೃತ್ತ, ಫ್ರೇಜರ್ ಟೌನ್, ಮೈಸೂರು ರಸ್ತೆ, ನಾಯಂಡಹಳ್ಳಿ ಜಂಕ್ಷನ್, ಕೋರಮಂಗಲ, ಬನಶಂಕರಿ ಸೇರಿದಂತೆ ಹಲವೆಡೆ ಮಳೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು.<br /> <br /> ಇದರಿಂದ ಕೆಲ ಕಾಲ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು. ಆನಂತರ ಪಾಲಿಕೆ ಮತ್ತು ಜಲಮಂಡಳಿಯ ಎಂಜಿನಿಯರ್ಗಳು ಕಾರ್ಯಾಚರಣೆ ನಡೆಸಿ ಸಂಚಾರ ಸುಗಮಗೊಳಿಸಿದರು ಎಂದು ಪಾಲಿಕೆಯ ನಿಯಂತ್ರಣಾ ಕಚೇರಿಯ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>