<p><strong>ನೆಲಮಂಗಲ: </strong>ನ್ಯಾಯಾಧೀಶರೊಬ್ಬರ ಕಾರನ್ನು ಹಿಂದಿಕ್ಕಿ ಅಡ್ಡಲಾಗಿ ನಿಲ್ಲಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇರೆಗೆ ತುಮಕೂರು ಶಾಸಕ ಸುರೇಶ್ಗೌಡ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> ಕೆಎಸ್ಟಿಎಟಿ ನ್ಯಾಯಾಲಯದ ನ್ಯಾಯಾಧೀಶ ವಿದ್ಯಾಧರ್ ಅವರು ಕುಟುಂಬ ಸಮೇತರಾಗಿ ತುಮಕೂರು ಕಡೆಯಿಂದ ಬೆಂಗಳೂರಿಗೆ ಭಾನುವಾರ ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಸಂಜೆ 6.15 ಸುಮಾರಿನಲ್ಲಿ ನವಯುಗ ಟೋಲ್ ಬಳಿ ಟೋಲ್ ಸುಂಕ ಕಟ್ಟಲು ನಿಲ್ಲಿಸುತ್ತಿದ್ದರು. ಈ ಸಂದರ್ಭದಲ್ಲಿ ರಭಸವಾಗಿ ಬಂದ ಶಾಸಕ ಸುರೇಶ್ಗೌಡ ಅವರ ಕಾರು ನ್ಯಾಯಾಧೀಶ ವಿದ್ಯಾಧರ್ ಅವರ ಕಾರನ್ನು ಹಿಂದಿಕ್ಕಿ ಅಡ್ಡಲಾಗಿ ನಿಲ್ಲಿಸಿತು. ಕಾರನ್ನು ಹಿಂದಿಕ್ಕಿದ ಕ್ರಮವನ್ನು ನ್ಯಾಯಾಧೀಶರು ಪ್ರಶ್ನಿಸಲು ಮುಂದಾದಾಗ ಸುರೇಶ್ಗೌಡ ಮತ್ತು ಅವರ ಸಂಗಡಿಗರು ಕಾರಿನಿಂದ ಇಳಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. <br /> <br /> ಅಲ್ಲದೆ, ಹಲ್ಲೆ ನಡೆಸಲು ಮುಂದಾದರು ಎಂದು ನ್ಯಾಯಾಧೀಶ ವಿದ್ಯಾಧರ್ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಬ್ ಇನ್ಸ್ಪೆಕ್ಟರ್ ರಂಗಸ್ವಾಮಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: </strong>ನ್ಯಾಯಾಧೀಶರೊಬ್ಬರ ಕಾರನ್ನು ಹಿಂದಿಕ್ಕಿ ಅಡ್ಡಲಾಗಿ ನಿಲ್ಲಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇರೆಗೆ ತುಮಕೂರು ಶಾಸಕ ಸುರೇಶ್ಗೌಡ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> ಕೆಎಸ್ಟಿಎಟಿ ನ್ಯಾಯಾಲಯದ ನ್ಯಾಯಾಧೀಶ ವಿದ್ಯಾಧರ್ ಅವರು ಕುಟುಂಬ ಸಮೇತರಾಗಿ ತುಮಕೂರು ಕಡೆಯಿಂದ ಬೆಂಗಳೂರಿಗೆ ಭಾನುವಾರ ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಸಂಜೆ 6.15 ಸುಮಾರಿನಲ್ಲಿ ನವಯುಗ ಟೋಲ್ ಬಳಿ ಟೋಲ್ ಸುಂಕ ಕಟ್ಟಲು ನಿಲ್ಲಿಸುತ್ತಿದ್ದರು. ಈ ಸಂದರ್ಭದಲ್ಲಿ ರಭಸವಾಗಿ ಬಂದ ಶಾಸಕ ಸುರೇಶ್ಗೌಡ ಅವರ ಕಾರು ನ್ಯಾಯಾಧೀಶ ವಿದ್ಯಾಧರ್ ಅವರ ಕಾರನ್ನು ಹಿಂದಿಕ್ಕಿ ಅಡ್ಡಲಾಗಿ ನಿಲ್ಲಿಸಿತು. ಕಾರನ್ನು ಹಿಂದಿಕ್ಕಿದ ಕ್ರಮವನ್ನು ನ್ಯಾಯಾಧೀಶರು ಪ್ರಶ್ನಿಸಲು ಮುಂದಾದಾಗ ಸುರೇಶ್ಗೌಡ ಮತ್ತು ಅವರ ಸಂಗಡಿಗರು ಕಾರಿನಿಂದ ಇಳಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. <br /> <br /> ಅಲ್ಲದೆ, ಹಲ್ಲೆ ನಡೆಸಲು ಮುಂದಾದರು ಎಂದು ನ್ಯಾಯಾಧೀಶ ವಿದ್ಯಾಧರ್ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಬ್ ಇನ್ಸ್ಪೆಕ್ಟರ್ ರಂಗಸ್ವಾಮಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>