<p>ಬೆಂಗಳೂರು: ಆಂಧ್ರಪ್ರದೇಶದ `ಲಕ್ಷ್ಮಿಂಪೇಟ ದಲಿತರ ಹತ್ಯಾಕಾಂಡ' ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಸಮತಾ ಸೈನಿಕ ದಳ ಮತ್ತು ಭಾರತೀಯ ರಿಪಬ್ಲಿಕ್ ಪಕ್ಷದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.<br /> <br /> `ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಲಕ್ಷ್ಮೀಪೇಟದಲ್ಲಿ 2012ರ ಜೂ.12 ರಂದು ದಲಿತರ ಮೇಲೆ ಸವರ್ಣೀಯರು ನಡೆಸಿದ ದಾಳಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದರು. ಸುಮಾರು 20 ಮಂದಿ ಕೈ-ಕಾಲುಗಳನ್ನು ಕಳೆದುಕೊಂಡು ಶಾಶ್ವತ ಅಂಗವಿಕಲರಾದರು. ಪ್ರಕರಣದ ಆರೋಪಿಗಳಿಗೆ ಈವರೆಗೂ ಶಿಕ್ಷೆಯಾಗಿಲ್ಲ' ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.<br /> <br /> `ಮಡ್ಡುವಲಸ ಎಂಬ ನೀರು ಸಂಗ್ರಹ ಯೋಜನೆಗಾಗಿ ಸರ್ಕಾರ 4,000 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡಿತ್ತು. ಆ ಯೋಜನಾ ಕಾಮಗಾರಿ ನಂತರ 250 ಎಕರೆ ಫಲವತ್ತಾದ ಭೂಮಿ ಉಳಿದಿತ್ತು. ಆ ಉಳಿಕೆ ಭೂಮಿಯನ್ನು ತಮಗೆ ಹಂಚಬೇಕು ಎಂದು ಆಗ್ರಹಿಸಿ ದಲಿತರು ಹೋರಾಟ ಆರಂಭಿಸಿದ್ದರು. ಇದೇ ಹೋರಾಟ ಅಂದಿನ ಹತ್ಯಾಕಾಂಡಕ್ಕೆ ಕಾರಣವಾಯಿತು ಎಂದರು.<br /> <br /> ಎಪಿಸಿಸಿ ಅಧ್ಯಕ್ಷ ಬೊಚ್ಚಾ ಸತ್ಯನಾರಾಯಣ ಅವರ ಸಂಬಂಧಿ ಬೊಚ್ಚಾ ವಾಸುದೇವರಾವ್ ನೇತೃತ್ವದಲ್ಲೇ ಈ ದಾಳಿ ನಡೆದಿದ್ದರಿಂದ ಆರೋಪಿಗಳಿಗೆ ಶಿಕ್ಷೆ ನೀಡಲು ಸರ್ಕಾರ ಹಿಂದೇಟು ಹಾಕುತ್ತಿದೆ' ಎಂದು ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ ವೆಂಕಟಸ್ವಾಮಿ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಆಂಧ್ರಪ್ರದೇಶದ `ಲಕ್ಷ್ಮಿಂಪೇಟ ದಲಿತರ ಹತ್ಯಾಕಾಂಡ' ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಸಮತಾ ಸೈನಿಕ ದಳ ಮತ್ತು ಭಾರತೀಯ ರಿಪಬ್ಲಿಕ್ ಪಕ್ಷದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.<br /> <br /> `ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಲಕ್ಷ್ಮೀಪೇಟದಲ್ಲಿ 2012ರ ಜೂ.12 ರಂದು ದಲಿತರ ಮೇಲೆ ಸವರ್ಣೀಯರು ನಡೆಸಿದ ದಾಳಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದರು. ಸುಮಾರು 20 ಮಂದಿ ಕೈ-ಕಾಲುಗಳನ್ನು ಕಳೆದುಕೊಂಡು ಶಾಶ್ವತ ಅಂಗವಿಕಲರಾದರು. ಪ್ರಕರಣದ ಆರೋಪಿಗಳಿಗೆ ಈವರೆಗೂ ಶಿಕ್ಷೆಯಾಗಿಲ್ಲ' ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.<br /> <br /> `ಮಡ್ಡುವಲಸ ಎಂಬ ನೀರು ಸಂಗ್ರಹ ಯೋಜನೆಗಾಗಿ ಸರ್ಕಾರ 4,000 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡಿತ್ತು. ಆ ಯೋಜನಾ ಕಾಮಗಾರಿ ನಂತರ 250 ಎಕರೆ ಫಲವತ್ತಾದ ಭೂಮಿ ಉಳಿದಿತ್ತು. ಆ ಉಳಿಕೆ ಭೂಮಿಯನ್ನು ತಮಗೆ ಹಂಚಬೇಕು ಎಂದು ಆಗ್ರಹಿಸಿ ದಲಿತರು ಹೋರಾಟ ಆರಂಭಿಸಿದ್ದರು. ಇದೇ ಹೋರಾಟ ಅಂದಿನ ಹತ್ಯಾಕಾಂಡಕ್ಕೆ ಕಾರಣವಾಯಿತು ಎಂದರು.<br /> <br /> ಎಪಿಸಿಸಿ ಅಧ್ಯಕ್ಷ ಬೊಚ್ಚಾ ಸತ್ಯನಾರಾಯಣ ಅವರ ಸಂಬಂಧಿ ಬೊಚ್ಚಾ ವಾಸುದೇವರಾವ್ ನೇತೃತ್ವದಲ್ಲೇ ಈ ದಾಳಿ ನಡೆದಿದ್ದರಿಂದ ಆರೋಪಿಗಳಿಗೆ ಶಿಕ್ಷೆ ನೀಡಲು ಸರ್ಕಾರ ಹಿಂದೇಟು ಹಾಕುತ್ತಿದೆ' ಎಂದು ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ ವೆಂಕಟಸ್ವಾಮಿ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>