<p><strong>ಬೆಂಗಳೂರು: </strong>ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಶಾಸಕರ ಸ್ಥಾನಮಾನ, ಕಾರಿನ ಮೇಲೆ ಕೆಂಪುದೀಪ ಬಳಕೆ ಇತ್ಯಾದಿ ಶಿಷ್ಟಾಚಾರಗಳಿಗೆ ಸಂಬಂಧಿಸಿದ ಪರಿಷ್ಕೃತ ಆದೇಶವನ್ನು ಈ ಅಧಿವೇಶನ ಮುಗಿಯುವುದರ ಒಳಗಾಗಿ ಹೊರಡಿಸಿ ಸದನದಲ್ಲಿ ಪ್ರಕಟಿಸಬೇಕು ಎಂದು ಸ್ಪೀಕರ್ ಕೆ.ಜಿ.ಬೋಪಯ್ಯ ಸರ್ಕಾರಕ್ಕೆ ಸೂಚಿಸಿದರು.<br /> <br /> ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಸಿ.ಪಾಟೀಲ, ಎಂ.ನಾರಾಯಣಸ್ವಾಮಿ, ಡಾ.ಎಚ್.ಸಿ.ಮಹದೇವಪ್ಪ ಮೊದಲಾದವರು ಮಾಡಿದ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಅವರು ನೀಡಿದ ಉತ್ತರ ಸದಸ್ಯರಿಗೆ ತೃಪ್ತಿ ತರಲಿಲ್ಲ.<br /> <br /> ಆಗ ಮಧ್ಯಪ್ರವೇಶಿಸಿದ ಬೋಪಯ್ಯ, ಶಿಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು. ಬಿ.ಸಿ.ಪಾಟೀಲ ಅವರಿಗೆ ಹಕ್ಕುಚ್ಯುತಿಯಾಗಿರುವ ಪ್ರಕರಣದಲ್ಲಿ ನ್ಯಾಯಾಂಗದ ವಿಚಾರವೂ ಸೇರಿರುವುದರಿಂದ ಪರಿಶೀಲನೆ ನಡೆಸಿ ಸೂಕ್ತ ಆದೇಶ ಹೊರಡಿಸಲಾಗುವುದು ಎಂದರು.<br /> <br /> ಹಿರೇಕೆರೂರಿನಲ್ಲಿ 17ರಂದು ನಡೆದ ವಕೀಲರ ಭವನ ಮತ್ತು `ರೆಕಾರ್ಡ್ಸ್ ರೂಮ್~ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸ್ಥಳೀಯ ವಕೀಲರ ಸಂಘದ ಅಧ್ಯಕ್ಷರು ವಹಿಸಿದ್ದರು. ಶಾಸಕರಿಗೆ ಅಧ್ಯಕ್ಷತೆ ವಹಿಸಲು ಅವಕಾಶ ನೀಡದೆ ಅಗೌರವ ತೋರಲಾಗಿದೆ. ಆದ್ದರಿಂದ ಈ ವಿಷಯವನ್ನು ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.<br /> <br /> ಸಿದ್ದರಾಮಯ್ಯ ಮಾತನಾಡಿ, `ಮೈಸೂರಿನಲ್ಲಿ ನಡೆದ `ಸವಲತ್ತುಗಳ ಸಂತೆ~ ಕಾರ್ಯಕ್ರಮದಲ್ಲಿ ನನ್ನ ಕ್ಷೇತ್ರದವರಿಗೂ ಸೌಲಭ್ಯಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ನನ್ನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಅವರ ಮೂಗಿನ ನೇರಕ್ಕೆ ಎಲ್ಲವೂ ನಡೆಯುತ್ತಿದೆ~ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಶಾಸಕರ ಸ್ಥಾನಮಾನ, ಕಾರಿನ ಮೇಲೆ ಕೆಂಪುದೀಪ ಬಳಕೆ ಇತ್ಯಾದಿ ಶಿಷ್ಟಾಚಾರಗಳಿಗೆ ಸಂಬಂಧಿಸಿದ ಪರಿಷ್ಕೃತ ಆದೇಶವನ್ನು ಈ ಅಧಿವೇಶನ ಮುಗಿಯುವುದರ ಒಳಗಾಗಿ ಹೊರಡಿಸಿ ಸದನದಲ್ಲಿ ಪ್ರಕಟಿಸಬೇಕು ಎಂದು ಸ್ಪೀಕರ್ ಕೆ.ಜಿ.ಬೋಪಯ್ಯ ಸರ್ಕಾರಕ್ಕೆ ಸೂಚಿಸಿದರು.<br /> <br /> ವಿಧಾನಸಭೆಯಲ್ಲಿ ಸೋಮವಾರ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಸಿ.ಪಾಟೀಲ, ಎಂ.ನಾರಾಯಣಸ್ವಾಮಿ, ಡಾ.ಎಚ್.ಸಿ.ಮಹದೇವಪ್ಪ ಮೊದಲಾದವರು ಮಾಡಿದ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕಾನೂನು ಸಚಿವ ಎಸ್.ಸುರೇಶ್ಕುಮಾರ್ ಅವರು ನೀಡಿದ ಉತ್ತರ ಸದಸ್ಯರಿಗೆ ತೃಪ್ತಿ ತರಲಿಲ್ಲ.<br /> <br /> ಆಗ ಮಧ್ಯಪ್ರವೇಶಿಸಿದ ಬೋಪಯ್ಯ, ಶಿಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು. ಬಿ.ಸಿ.ಪಾಟೀಲ ಅವರಿಗೆ ಹಕ್ಕುಚ್ಯುತಿಯಾಗಿರುವ ಪ್ರಕರಣದಲ್ಲಿ ನ್ಯಾಯಾಂಗದ ವಿಚಾರವೂ ಸೇರಿರುವುದರಿಂದ ಪರಿಶೀಲನೆ ನಡೆಸಿ ಸೂಕ್ತ ಆದೇಶ ಹೊರಡಿಸಲಾಗುವುದು ಎಂದರು.<br /> <br /> ಹಿರೇಕೆರೂರಿನಲ್ಲಿ 17ರಂದು ನಡೆದ ವಕೀಲರ ಭವನ ಮತ್ತು `ರೆಕಾರ್ಡ್ಸ್ ರೂಮ್~ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸ್ಥಳೀಯ ವಕೀಲರ ಸಂಘದ ಅಧ್ಯಕ್ಷರು ವಹಿಸಿದ್ದರು. ಶಾಸಕರಿಗೆ ಅಧ್ಯಕ್ಷತೆ ವಹಿಸಲು ಅವಕಾಶ ನೀಡದೆ ಅಗೌರವ ತೋರಲಾಗಿದೆ. ಆದ್ದರಿಂದ ಈ ವಿಷಯವನ್ನು ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.<br /> <br /> ಸಿದ್ದರಾಮಯ್ಯ ಮಾತನಾಡಿ, `ಮೈಸೂರಿನಲ್ಲಿ ನಡೆದ `ಸವಲತ್ತುಗಳ ಸಂತೆ~ ಕಾರ್ಯಕ್ರಮದಲ್ಲಿ ನನ್ನ ಕ್ಷೇತ್ರದವರಿಗೂ ಸೌಲಭ್ಯಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ನನ್ನನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಅವರ ಮೂಗಿನ ನೇರಕ್ಕೆ ಎಲ್ಲವೂ ನಡೆಯುತ್ತಿದೆ~ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>