<p><strong>ಬೆಂಗಳೂರು:</strong> `ತಿಪ್ಪಗೊಂಡನಹಳ್ಳಿ ಜಲಾಶಯ ಮಲಿನವಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಕೈಕಟ್ಟಿ ಕುಳಿತಿದೆ. ಸಮಸ್ಯೆ ಹೀಗೆಯೇ ಮುಂದುವರಿದರೆ ನಗರದಿಂದ ತಿಪ್ಪಗೊಂಡನಹಳ್ಳಿ ಜಲಾಶಯದವರೆಗೆ ಪಾದಯಾತ್ರೆ ನಡೆಸಲಾಗುವುದು~ ಎಂದು ಶಾಸಕ ನೆ.ಲ.ನರೇಂದ್ರಬಾಬು ಎಚ್ಚರಿಕೆ ನೀಡಿದ್ದಾರೆ.<br /> <br /> `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, `ವಿಜಯದಶಮಿ ನಂತರ ಸ್ಥಳ ಸಮೀಕ್ಷೆ ನಡೆಸಲಾಗುವುದು ಎಂದು ಬೆಂಗಳೂರು ಜಲಮಂಡಲಿ ಸಚಿವರು ತಿಳಿಸಿದ್ದರು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನೆರಡು ದಿನ ಕಳೆದು ಪಾದಯಾತ್ರೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು~ ಎಂದರು.<br /> <br /> `ತಿಪ್ಪಗೊಂಡನಹಳ್ಳಿ ಜಲಾಶಯ ಮಲಿನವಾಗಿರುವ ಬಗ್ಗೆ ಕೇಂದ್ರ ಪರಿಸರ ಸಚಿರಿಗೆ ಪತ್ರ ಬರೆದು ಮಾಹಿತಿ ನೀಡಿದ್ದೇನೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ~ ಎಂದು ತಿಳಿಸಿದರು. <br /> <br /> <strong>ಜಲಮಂಡಲಿ ಪ್ರತಿಕ್ರಿಯೆ: </strong>ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಯೊಬ್ಬರು `ಯಾವುದೇ ಜಲಾಶಯಕ್ಕೆ ಹರಿದು ಬರುವ ನೀರು ಶುದ್ಧವಾಗಿರುವುದಿಲ್ಲ. ಅದನ್ನು ಸಂಸ್ಕರಿಸಿದ ನಂತರವಷ್ಟೇ ಕುಡಿಯಲು ಯೋಗ್ಯವಾಗುತ್ತದೆ. ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಪ್ರತಿದಿನ ನೀರಿನ ಪರೀಕ್ಷೆ ನಡೆಸಲಾಗುತ್ತದೆ. ನಗರದ ಜನತೆಗೆ ಪೂರೈಸುತ್ತಿರುವ ನೀರು ಯಾವುದೇ ರೀತಿಯಲ್ಲಿ ಕಲುಷಿತವಾಗಿಲ್ಲ~ ಎಂದು ತಿಳಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ತಿಪ್ಪಗೊಂಡನಹಳ್ಳಿ ಜಲಾಶಯ ಮಲಿನವಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಕೈಕಟ್ಟಿ ಕುಳಿತಿದೆ. ಸಮಸ್ಯೆ ಹೀಗೆಯೇ ಮುಂದುವರಿದರೆ ನಗರದಿಂದ ತಿಪ್ಪಗೊಂಡನಹಳ್ಳಿ ಜಲಾಶಯದವರೆಗೆ ಪಾದಯಾತ್ರೆ ನಡೆಸಲಾಗುವುದು~ ಎಂದು ಶಾಸಕ ನೆ.ಲ.ನರೇಂದ್ರಬಾಬು ಎಚ್ಚರಿಕೆ ನೀಡಿದ್ದಾರೆ.<br /> <br /> `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, `ವಿಜಯದಶಮಿ ನಂತರ ಸ್ಥಳ ಸಮೀಕ್ಷೆ ನಡೆಸಲಾಗುವುದು ಎಂದು ಬೆಂಗಳೂರು ಜಲಮಂಡಲಿ ಸಚಿವರು ತಿಳಿಸಿದ್ದರು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನೆರಡು ದಿನ ಕಳೆದು ಪಾದಯಾತ್ರೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು~ ಎಂದರು.<br /> <br /> `ತಿಪ್ಪಗೊಂಡನಹಳ್ಳಿ ಜಲಾಶಯ ಮಲಿನವಾಗಿರುವ ಬಗ್ಗೆ ಕೇಂದ್ರ ಪರಿಸರ ಸಚಿರಿಗೆ ಪತ್ರ ಬರೆದು ಮಾಹಿತಿ ನೀಡಿದ್ದೇನೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ~ ಎಂದು ತಿಳಿಸಿದರು. <br /> <br /> <strong>ಜಲಮಂಡಲಿ ಪ್ರತಿಕ್ರಿಯೆ: </strong>ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಧಿಕಾರಿಯೊಬ್ಬರು `ಯಾವುದೇ ಜಲಾಶಯಕ್ಕೆ ಹರಿದು ಬರುವ ನೀರು ಶುದ್ಧವಾಗಿರುವುದಿಲ್ಲ. ಅದನ್ನು ಸಂಸ್ಕರಿಸಿದ ನಂತರವಷ್ಟೇ ಕುಡಿಯಲು ಯೋಗ್ಯವಾಗುತ್ತದೆ. ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಪ್ರತಿದಿನ ನೀರಿನ ಪರೀಕ್ಷೆ ನಡೆಸಲಾಗುತ್ತದೆ. ನಗರದ ಜನತೆಗೆ ಪೂರೈಸುತ್ತಿರುವ ನೀರು ಯಾವುದೇ ರೀತಿಯಲ್ಲಿ ಕಲುಷಿತವಾಗಿಲ್ಲ~ ಎಂದು ತಿಳಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>