ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ‘ಈ ಕಾಯಿಲೆಗೆ ರಾಜ್ಯದಲ್ಲಿ ಮಾನಸ ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಇಎನ್ಟಿ ಸೆಂಟರ್ ಚಿಕಿತ್ಸೆಯನ್ನು ಪರಿಚಯಿಸಿತ್ತು. ಇದಕ್ಕೆ ಸುಮಾರು ₹ 7 ಲಕ್ಷ ವೆಚ್ಚವಾಗುತ್ತಿತ್ತು. ಆರೋಗ್ಯ ಸಚಿವನಾಗಿದ್ದಾಗ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡುವ ಯೋಜನೆ ಆರಂಭಿಸಲಾಗಿತ್ತು. 75 ಮಕ್ಕಳಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿರುವ ವೈದ್ಯರ ಪ್ರಯತ್ನ ಶ್ಲಾಘನೀಯ’ ಎಂದರು.