<p><strong>ಬೆಂಗಳೂರು:</strong> ಬಿಬಿಎಂಪಿ ಬಿಜೆಪಿ ಸದಸ್ಯೆ ಆರ್.ಮಂಜುಳಾದೇವಿ ಅವರ ಪತಿ ಶ್ರೀನಿವಾಸ್ ಕೊಲೆ ಪ್ರಕರಣದ ಐದು ಮಂದಿ ಆರೋಪಿಗಳನ್ನು ಬಂಧಿಸಿರುವ ನಗರ ಪೊಲೀಸರು, ಕೊಲೆಯ ಹಿಂದಿನ ನಿರ್ದಿಷ್ಟ ಉದ್ದೇಶವನ್ನು ಮಾತ್ರ ಬಹಿರಂಗಪಡಿಸಿಲ್ಲ.<br /> <br /> ಮುನಿಯಪ್ಪ ಲೇಔಟ್ನ ಪ್ರತಾಪ್ (33), ಹರೀಶ್ (26), ಮೋಹನ ಅಲಿಯಾಸ್ ಗಾಜಲು (25), ದೇವಸಂದ್ರದ ನವೀನ್ಕುಮಾರ್ ಅಲಿಯಾಸ್ ಅಪ್ಪು (25) ಮತ್ತು ನದೀಮ್ ಅಲಿಯಾಸ್ ಸಾಸ (22) ಬಂಧಿತರು.<br /> <br /> ‘ಆರೋಪಿಗಳು ಹಳೇ ವೈಷಮ್ಯ ಹಾಗೂ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರನ್ನು ಕೊಲೆ ಮಾಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧಿಸಿದ ನಂತರವಷ್ಟೆ ಹೆಚ್ಚಿನ ಮಾಹಿತಿ ಸಿಗಲಿದೆ’ ಎಂದು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ತಿಳಿಸಿದರು.<br /> <br /> ಸ್ಥಳೀಯ ಕಾಂಗ್ರೆಸ್ ಶಾಸಕರ ಆಪ್ತನೊಬ್ಬ ಸುಪಾರಿ ಕೊಟ್ಟು ಈ ಕೊಲೆ ಮಾಡಿಸಿರುವ ಬಗ್ಗೆ ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಆದರೆ, ಕೊಲೆ ಹಿಂದಿನ ಉದ್ದೇಶಬಹಿರಂಗಪಡಿಸಲು ಔರಾದಕರ್ ನಿರಾಕರಿಸಿದ್ದಾರೆ. ‘ಇನ್ನು ಆರೋಪಿಗಳ ವಿಚಾರಣೆ ಬಾಕಿ ಇದ್ದು, ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.<br /> <br /> ‘ಪ್ರಕರಣದ ಬಗ್ಗೆ ಕೆಲ ಸೂಕ್ಷ್ಮ ಮಾಹಿತಿಗಳನ್ನು ಬಹಿರಂಗಪಡಿಸದಂತೆ ಮೇಲಧಿಕಾರಿಗಳ ಆದೇಶವಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವುದರಿಂದ, ಪೊಲೀಸರು ಕೆಲವರ ಒತ್ತಡಕ್ಕೆ ಸಿಲುಕಿಕೊಂಡಿದ್ದಾರೆ. ಈ ಕಾರಣದಿಂದಾಗಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ’ ಎಂದು ಮೂಲಗಳು ತಿಳಿಸಿವೆ.<br /> <br /> ‘ಬಂಧಿತರೆಲ್ಲ 2013ರಲ್ಲಿ ಶ್ರೀನಿವಾಸ್ ಅವರ ಕೊಲೆಗೆ ಯತ್ನಿಸಿದ್ದ ದುಷ್ಕರ್ಮಿಗಳ ತಂಡದಲ್ಲಿದ್ದವರು. ಈ ತಂಡದ ಮಧುಸೂದನ್, ಅರುಣ್ ಮತ್ತು ಮೋಹನ್ ಸಹ ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಶೀಘ್ರವೇ ಅವರನ್ನೂ ಬಂಧಿಸಲಾಗುವುದು’ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.<br /> <br /> ಆರೋಪಿ ಪ್ರತಾಪ್, 2008ರಲ್ಲಿ ಹೊಸಕೋಟೆಯ ವೆಂಕಟರಾಮ್ ಎಂಬುವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಅಲ್ಲದೇ, 2012ರಲ್ಲಿ ಶ್ರೀನಿವಾಸ್ ಅವರ ಆಪ್ತ ಕೃಷ್ಣ ಎಂಬುವರ ಕೊಲೆಗೆ ಯತ್ನಿಸಿದ್ದ ಆತ, ನಂತರ 2013ರ ಏಪ್ರಿಲ್ನಲ್ಲಿ ವಿಶ್ವನಾಥ್ ಎಂಬುವರ ಕೊಲೆಗೂ ಯತ್ನಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಆರೋಪಿ ಹರೀಶ ಕೊಲೆ ಯತ್ನ, ಹಲ್ಲೆ ಹಾಗೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಕೆ.ಆರ್.ಪುರ ಠಾಣೆಯ ರೌಡಿಗಳ ಪಟ್ಟಿಯಲ್ಲಿರುವ ನವೀನ್ ವಿರುದ್ಧ ಎರಡು ಕೊಲೆ ಯತ್ನ ಪ್ರಕರಣ, ಎರಡು ಹಲ್ಲೆ, ಎರಡು ಸರ ಅಪಹರಣ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಬಿಜೆಪಿ ಸದಸ್ಯೆ ಆರ್.ಮಂಜುಳಾದೇವಿ ಅವರ ಪತಿ ಶ್ರೀನಿವಾಸ್ ಕೊಲೆ ಪ್ರಕರಣದ ಐದು ಮಂದಿ ಆರೋಪಿಗಳನ್ನು ಬಂಧಿಸಿರುವ ನಗರ ಪೊಲೀಸರು, ಕೊಲೆಯ ಹಿಂದಿನ ನಿರ್ದಿಷ್ಟ ಉದ್ದೇಶವನ್ನು ಮಾತ್ರ ಬಹಿರಂಗಪಡಿಸಿಲ್ಲ.<br /> <br /> ಮುನಿಯಪ್ಪ ಲೇಔಟ್ನ ಪ್ರತಾಪ್ (33), ಹರೀಶ್ (26), ಮೋಹನ ಅಲಿಯಾಸ್ ಗಾಜಲು (25), ದೇವಸಂದ್ರದ ನವೀನ್ಕುಮಾರ್ ಅಲಿಯಾಸ್ ಅಪ್ಪು (25) ಮತ್ತು ನದೀಮ್ ಅಲಿಯಾಸ್ ಸಾಸ (22) ಬಂಧಿತರು.<br /> <br /> ‘ಆರೋಪಿಗಳು ಹಳೇ ವೈಷಮ್ಯ ಹಾಗೂ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರನ್ನು ಕೊಲೆ ಮಾಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧಿಸಿದ ನಂತರವಷ್ಟೆ ಹೆಚ್ಚಿನ ಮಾಹಿತಿ ಸಿಗಲಿದೆ’ ಎಂದು ನಗರ ಪೊಲೀಸ್ ಕಮಿಷನರ್ ರಾಘವೇಂದ್ರ ಔರಾದಕರ್ ತಿಳಿಸಿದರು.<br /> <br /> ಸ್ಥಳೀಯ ಕಾಂಗ್ರೆಸ್ ಶಾಸಕರ ಆಪ್ತನೊಬ್ಬ ಸುಪಾರಿ ಕೊಟ್ಟು ಈ ಕೊಲೆ ಮಾಡಿಸಿರುವ ಬಗ್ಗೆ ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಆದರೆ, ಕೊಲೆ ಹಿಂದಿನ ಉದ್ದೇಶಬಹಿರಂಗಪಡಿಸಲು ಔರಾದಕರ್ ನಿರಾಕರಿಸಿದ್ದಾರೆ. ‘ಇನ್ನು ಆರೋಪಿಗಳ ವಿಚಾರಣೆ ಬಾಕಿ ಇದ್ದು, ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.<br /> <br /> ‘ಪ್ರಕರಣದ ಬಗ್ಗೆ ಕೆಲ ಸೂಕ್ಷ್ಮ ಮಾಹಿತಿಗಳನ್ನು ಬಹಿರಂಗಪಡಿಸದಂತೆ ಮೇಲಧಿಕಾರಿಗಳ ಆದೇಶವಿದೆ. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವುದರಿಂದ, ಪೊಲೀಸರು ಕೆಲವರ ಒತ್ತಡಕ್ಕೆ ಸಿಲುಕಿಕೊಂಡಿದ್ದಾರೆ. ಈ ಕಾರಣದಿಂದಾಗಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ’ ಎಂದು ಮೂಲಗಳು ತಿಳಿಸಿವೆ.<br /> <br /> ‘ಬಂಧಿತರೆಲ್ಲ 2013ರಲ್ಲಿ ಶ್ರೀನಿವಾಸ್ ಅವರ ಕೊಲೆಗೆ ಯತ್ನಿಸಿದ್ದ ದುಷ್ಕರ್ಮಿಗಳ ತಂಡದಲ್ಲಿದ್ದವರು. ಈ ತಂಡದ ಮಧುಸೂದನ್, ಅರುಣ್ ಮತ್ತು ಮೋಹನ್ ಸಹ ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಶೀಘ್ರವೇ ಅವರನ್ನೂ ಬಂಧಿಸಲಾಗುವುದು’ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.<br /> <br /> ಆರೋಪಿ ಪ್ರತಾಪ್, 2008ರಲ್ಲಿ ಹೊಸಕೋಟೆಯ ವೆಂಕಟರಾಮ್ ಎಂಬುವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಅಲ್ಲದೇ, 2012ರಲ್ಲಿ ಶ್ರೀನಿವಾಸ್ ಅವರ ಆಪ್ತ ಕೃಷ್ಣ ಎಂಬುವರ ಕೊಲೆಗೆ ಯತ್ನಿಸಿದ್ದ ಆತ, ನಂತರ 2013ರ ಏಪ್ರಿಲ್ನಲ್ಲಿ ವಿಶ್ವನಾಥ್ ಎಂಬುವರ ಕೊಲೆಗೂ ಯತ್ನಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಆರೋಪಿ ಹರೀಶ ಕೊಲೆ ಯತ್ನ, ಹಲ್ಲೆ ಹಾಗೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಕೆ.ಆರ್.ಪುರ ಠಾಣೆಯ ರೌಡಿಗಳ ಪಟ್ಟಿಯಲ್ಲಿರುವ ನವೀನ್ ವಿರುದ್ಧ ಎರಡು ಕೊಲೆ ಯತ್ನ ಪ್ರಕರಣ, ಎರಡು ಹಲ್ಲೆ, ಎರಡು ಸರ ಅಪಹರಣ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>