ಹಲವು ಆದರ್ಶ ವ್ಯಕ್ತಿಗಳ ಜಯಂತ್ಯುತ್ಸವ ಆಚರಿಸುತ್ತಿರುವಂತೆ, ರಾಮಾನುಜಾಚಾರ್ಯರ ಜಯಂತ್ಯುತ್ಸವವನ್ನು ಸರ್ಕಾರಿ ಆಚರಣೆಯಾಗಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡಿದ್ದೇವೆ. ರಾಮಾನುಜಾಚಾರ್ಯರ ಜಯಂತ್ಯುತ್ಸವದಿಂದ ಸರ್ಕಾರಕ್ಕೆ ಗೌರವ ಬರುತ್ತದೆ ಎಂದು ಮನವರಿಕೆ ಮಾಡಿದ್ದೆವು. ಆದರೆ ಈ ಬಗ್ಗೆ ಸರ್ಕಾರ ಕಿಂಚಿತ್ತೂ ಕಾಳಜಿ ವಹಿಸದಿರುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಯದುರ್ಗದ ರಾಮಮೂರ್ತಿ ಸ್ವಾಮೀಜಿ ಹಾಗೂ ಶ್ರೀವೈಷ್ಣವ ಸಮಾಜದ ಮುಖಂಡರು ಹಾಜರಿದ್ದರು.