<p><strong>ಬೆಂಗಳೂರು:</strong> ನಗರದಲ್ಲಿ ಸಂಚಾರ ದಟ್ಟಣೆ ಇರುವ ರಸ್ತೆಗಳ ಬಗ್ಗೆ ಸಾರ್ವಜನಿಕರ ಮೊಬೈಲ್ ಫೋನ್ಗಳಿಗೆ ಉಚಿತವಾಗಿ ಸಂದೇಶ (ಎಸ್ಎಂಎಸ್) ರವಾನಿಸುವ ಯೋಜನೆಯನ್ನು ನಗರ ಸಂಚಾರ ಪೊಲೀಸರು ಜಾರಿಗೊಳಿಸಿದ್ದಾರೆ.<br /> <br /> `ಈ ಯೋಜನೆ ಅನ್ವಯ, ಹೆಚ್ಚು ವಾಹನ ದಟ್ಟಣೆ ಇರುವ ರಸ್ತೆಗಳು ಹಾಗೂ ಸ್ಥಳಗಳ ಬಗ್ಗೆ ಸಾರ್ವಜನಿಕರ ಮೊಬೈಲ್ ಫೋನ್ಗಳಿಗೆ ಆಗಾಗ್ಗೆ ಎಸ್ಎಂಎಸ್ ಕಳುಹಿಸಲಾಗುತ್ತದೆ. <br /> <br /> ಇದರಿಂದ ಸಾರ್ವಜನಿಕರು ವಾಹನ ದಟ್ಟಣೆಯಲ್ಲಿ ಸಿಲುಕಿ ತೊಂದರೆ ಅನುಭವಿಸುವುದು ತಪ್ಪಲಿದೆ~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ.ಸಲೀಂ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಈ ಸೇವೆಯನ್ನು ಪಡೆದುಕೊಳ್ಳಲು ಬಯಸುವ ಸಾರ್ವಜನಿಕರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಬೇಕು. ಸಾರ್ವಜನಿಕರು ಮೊಬೈಲ್ನಲ್ಲಿ ಒಐಘೆ ಆ ಎಂದು ಟೈಪ್ ಮಾಡಿ 092195 92195 ಸಂಖ್ಯೆಗೆ ಎಸ್ಎಂಎಸ್ ಕಳುಹಿಸಬೇಕು. ಈಗಾಗಲೇ ಈ ಯೋಜನೆ ಜಾರಿಯಲ್ಲಿದ್ದು, ಸುಮಾರು 18 ಸಾವಿರ ಮಂದಿ ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.<br /> <br /> ಈಗಾಗಲೇ ಮೊಬೈಲ್ ಸಂಖ್ಯೆ ನೋಂದಾಯಿಸಿ ಸೇವೆಯ ಉಪಯೋಗ ಪಡೆಯುತ್ತಿರುವ 18 ಸಾವಿರ ಮಂದಿಯೂ ಈ ಹೊಸ ಸಂಖ್ಯೆಗೆ ಎಸ್ಎಂಎಸ್ ಕಳುಹಿಸಿ ಪುನಃ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲೀಂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಸಂಚಾರ ದಟ್ಟಣೆ ಇರುವ ರಸ್ತೆಗಳ ಬಗ್ಗೆ ಸಾರ್ವಜನಿಕರ ಮೊಬೈಲ್ ಫೋನ್ಗಳಿಗೆ ಉಚಿತವಾಗಿ ಸಂದೇಶ (ಎಸ್ಎಂಎಸ್) ರವಾನಿಸುವ ಯೋಜನೆಯನ್ನು ನಗರ ಸಂಚಾರ ಪೊಲೀಸರು ಜಾರಿಗೊಳಿಸಿದ್ದಾರೆ.<br /> <br /> `ಈ ಯೋಜನೆ ಅನ್ವಯ, ಹೆಚ್ಚು ವಾಹನ ದಟ್ಟಣೆ ಇರುವ ರಸ್ತೆಗಳು ಹಾಗೂ ಸ್ಥಳಗಳ ಬಗ್ಗೆ ಸಾರ್ವಜನಿಕರ ಮೊಬೈಲ್ ಫೋನ್ಗಳಿಗೆ ಆಗಾಗ್ಗೆ ಎಸ್ಎಂಎಸ್ ಕಳುಹಿಸಲಾಗುತ್ತದೆ. <br /> <br /> ಇದರಿಂದ ಸಾರ್ವಜನಿಕರು ವಾಹನ ದಟ್ಟಣೆಯಲ್ಲಿ ಸಿಲುಕಿ ತೊಂದರೆ ಅನುಭವಿಸುವುದು ತಪ್ಪಲಿದೆ~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ.ಸಲೀಂ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಈ ಸೇವೆಯನ್ನು ಪಡೆದುಕೊಳ್ಳಲು ಬಯಸುವ ಸಾರ್ವಜನಿಕರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಬೇಕು. ಸಾರ್ವಜನಿಕರು ಮೊಬೈಲ್ನಲ್ಲಿ ಒಐಘೆ ಆ ಎಂದು ಟೈಪ್ ಮಾಡಿ 092195 92195 ಸಂಖ್ಯೆಗೆ ಎಸ್ಎಂಎಸ್ ಕಳುಹಿಸಬೇಕು. ಈಗಾಗಲೇ ಈ ಯೋಜನೆ ಜಾರಿಯಲ್ಲಿದ್ದು, ಸುಮಾರು 18 ಸಾವಿರ ಮಂದಿ ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.<br /> <br /> ಈಗಾಗಲೇ ಮೊಬೈಲ್ ಸಂಖ್ಯೆ ನೋಂದಾಯಿಸಿ ಸೇವೆಯ ಉಪಯೋಗ ಪಡೆಯುತ್ತಿರುವ 18 ಸಾವಿರ ಮಂದಿಯೂ ಈ ಹೊಸ ಸಂಖ್ಯೆಗೆ ಎಸ್ಎಂಎಸ್ ಕಳುಹಿಸಿ ಪುನಃ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲೀಂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>