<p><strong>ಬೆಂಗಳೂರು: </strong> ಮುಂಬರುವ ಹಣಕಾಸು ವರ್ಷದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ನಿಧಿಯನ್ನು ರದ್ದುಗೊಳಿಸಲು ಸರ್ಕಾರ ಚಿಂತಿಸುತ್ತಿದೆ ಎಂದು ಸಚಿವ ಆರ್. ಅಶೋಕ ಶನಿವಾರ ಇಲ್ಲಿ ಹೇಳಿದರು.<br /> <br /> ಯಡಿಯೂರು ವಾರ್ಡ್ನ ತ್ಯಾಗರಾಜನಗರ ಬಡಾವಣೆಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇತರೆ ಸದಸ್ಯರಿಂದ ಹೆಚ್ಚುವರಿ ನಿಧಿಗೆ ಬೇಡಿಕೆ ಬರುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದರು.<br /> <br /> ಪ್ರಸ್ತುತ ಮೇಯರ್ ನಿಧಿಗೆ 150 ಕೋಟಿ ಹಾಗೂ ಉಪ ಮೇಯರ್ ನಿಧಿಗೆ 25 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ. ಆದರೆ, ಬಿಬಿಎಂಪಿಯು ಸದ್ಯ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. <br /> <br /> ಇದರಿಂದ ಮುಂದಿನ ದಿನಗಳಲ್ಲಿ ಮೇಯರ್ ಹಾಗೂ ಉಪ ಮೇಯರ್ ನಿಧಿಗೆ ದೊಡ್ಡ ಪ್ರಮಾಣದ ಅನುದಾನ ನೀಡಲು ಸಾಧ್ಯವಾಗುವುದಿಲ್ಲ. ಇದಲ್ಲದೆ, ಕೆಲ ಸದಸ್ಯರಿಂದ ನಿಧಿಯಲ್ಲಿ ಬಹಳ ವ್ಯತ್ಯಾಸಗಳಾಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ನಿಧಿಯನ್ನೇ ರದ್ದುಪಡಿಸುವ ಪ್ರಸ್ತಾಪ ಸರ್ಕಾರ ಮುಂದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong> ಮುಂಬರುವ ಹಣಕಾಸು ವರ್ಷದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ನಿಧಿಯನ್ನು ರದ್ದುಗೊಳಿಸಲು ಸರ್ಕಾರ ಚಿಂತಿಸುತ್ತಿದೆ ಎಂದು ಸಚಿವ ಆರ್. ಅಶೋಕ ಶನಿವಾರ ಇಲ್ಲಿ ಹೇಳಿದರು.<br /> <br /> ಯಡಿಯೂರು ವಾರ್ಡ್ನ ತ್ಯಾಗರಾಜನಗರ ಬಡಾವಣೆಯಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇತರೆ ಸದಸ್ಯರಿಂದ ಹೆಚ್ಚುವರಿ ನಿಧಿಗೆ ಬೇಡಿಕೆ ಬರುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದರು.<br /> <br /> ಪ್ರಸ್ತುತ ಮೇಯರ್ ನಿಧಿಗೆ 150 ಕೋಟಿ ಹಾಗೂ ಉಪ ಮೇಯರ್ ನಿಧಿಗೆ 25 ಕೋಟಿ ರೂಪಾಯಿ ಮೀಸಲಿಡಲಾಗುತ್ತಿದೆ. ಆದರೆ, ಬಿಬಿಎಂಪಿಯು ಸದ್ಯ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. <br /> <br /> ಇದರಿಂದ ಮುಂದಿನ ದಿನಗಳಲ್ಲಿ ಮೇಯರ್ ಹಾಗೂ ಉಪ ಮೇಯರ್ ನಿಧಿಗೆ ದೊಡ್ಡ ಪ್ರಮಾಣದ ಅನುದಾನ ನೀಡಲು ಸಾಧ್ಯವಾಗುವುದಿಲ್ಲ. ಇದಲ್ಲದೆ, ಕೆಲ ಸದಸ್ಯರಿಂದ ನಿಧಿಯಲ್ಲಿ ಬಹಳ ವ್ಯತ್ಯಾಸಗಳಾಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ನಿಧಿಯನ್ನೇ ರದ್ದುಪಡಿಸುವ ಪ್ರಸ್ತಾಪ ಸರ್ಕಾರ ಮುಂದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>