<p>ಚನ್ನಪಟ್ಟಣ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವೂ ಪಟ್ಟಣದ ಎಲೆಕೇರಿ ರೈಲ್ವೆಗೇಟ್ ಅಂಡರ್ಪಾಸ್ ಕಾಮಗಾರಿ ಶಂಕುಸ್ಥಾಪನೆ ನಡೆಯಿತು.<br /> <br /> ನೀತಿ ಸಂಹಿತೆ ಜಾರಿಯಾದ ಕಾರಣ ಶಂಕುಸ್ಥಾಪನೆ ನೆರವೇರಿಸುವುದಿಲ್ಲ ಎಂದೇ ಮಾತು ಆರಂಭಿಸಿದ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಭಾಷಣ ಮಾಡಿದರು.<br /> <br /> ನನ್ನ 6 ತಿಂಗಳ ಅವಧಿಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಿದ್ದೇನೆ. ನೀವು ನನ್ನ ಕೆಲಸವನ್ನು ಮೆಚ್ಚಿದ್ದರೆ ಮುಂಬರುವ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಿ’ ಎಂದು ಡಿ.ಕೆ.ಸುರೇಶ್ ಮನವಿ ಮಾಡಿದರು.<br /> <br /> ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲೇ ಸಂಸದ ಸುರೇಶ್ ಅವರು ಚುನಾವಣಾ ಭಾಷಣ ಮಾಡಿ ಮತ ಯಾಚಿಸಿದ್ದು ವಿಶೇಷವಾಗಿತ್ತು. ರಾರಾಜಿಸಿದ ಬ್ಯಾನರ್ಗಳು: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗುತ್ತದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಇತ್ತಾದರೂ, ಬೆಳಗ್ಗೆಯಿಂದಲೇ ಬೃಹತ್ ವೇದಿಕೆ ಸಿದ್ಧಪಡಿಸಿ, ಪಟ್ಟಣದ ತುಂಬೆಲ್ಲಾ ಬ್ಯಾನರ್, ಕಟೌಟ್ ಮತ್ತು ಕಾಂಗ್ರೆಸ್ ಪಕ್ಷದ ಬಾವುಟಗಳನ್ನು ಹಾರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವೂ ಪಟ್ಟಣದ ಎಲೆಕೇರಿ ರೈಲ್ವೆಗೇಟ್ ಅಂಡರ್ಪಾಸ್ ಕಾಮಗಾರಿ ಶಂಕುಸ್ಥಾಪನೆ ನಡೆಯಿತು.<br /> <br /> ನೀತಿ ಸಂಹಿತೆ ಜಾರಿಯಾದ ಕಾರಣ ಶಂಕುಸ್ಥಾಪನೆ ನೆರವೇರಿಸುವುದಿಲ್ಲ ಎಂದೇ ಮಾತು ಆರಂಭಿಸಿದ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಭಾಷಣ ಮಾಡಿದರು.<br /> <br /> ನನ್ನ 6 ತಿಂಗಳ ಅವಧಿಯಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಿದ್ದೇನೆ. ನೀವು ನನ್ನ ಕೆಲಸವನ್ನು ಮೆಚ್ಚಿದ್ದರೆ ಮುಂಬರುವ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಿ’ ಎಂದು ಡಿ.ಕೆ.ಸುರೇಶ್ ಮನವಿ ಮಾಡಿದರು.<br /> <br /> ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲೇ ಸಂಸದ ಸುರೇಶ್ ಅವರು ಚುನಾವಣಾ ಭಾಷಣ ಮಾಡಿ ಮತ ಯಾಚಿಸಿದ್ದು ವಿಶೇಷವಾಗಿತ್ತು. ರಾರಾಜಿಸಿದ ಬ್ಯಾನರ್ಗಳು: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗುತ್ತದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಇತ್ತಾದರೂ, ಬೆಳಗ್ಗೆಯಿಂದಲೇ ಬೃಹತ್ ವೇದಿಕೆ ಸಿದ್ಧಪಡಿಸಿ, ಪಟ್ಟಣದ ತುಂಬೆಲ್ಲಾ ಬ್ಯಾನರ್, ಕಟೌಟ್ ಮತ್ತು ಕಾಂಗ್ರೆಸ್ ಪಕ್ಷದ ಬಾವುಟಗಳನ್ನು ಹಾರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>