<p><strong>ನೆಲಮಂಗಲ:</strong> ಸಮಾಜದಲ್ಲಿ ಧರ್ಮ ಕಾರ್ಯಗಳು ಮೇಲಿಂದ ಮೇಲೆ ನಡೆದು ವಿಶ್ವದಲ್ಲಿ ಸುಖ ಶಾಂತಿಗಳು ಲಭಿಸಲಿ ಎಂದು ವಿಶ್ವ ಒಕ್ಕಲಿಗರ ಪೀಠದ ಕುಮಾರ ಚಂದ್ರಶೇಖರ ಸ್ವಾಮೀಜಿ ಹಾರೈಸಿದರು.<br /> <br /> ತಾಲ್ಲೂಕಿನ ತಡಶೀಘಟ್ಟದ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಧರ್ಮಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.<br /> <br /> ಗ್ರಾಮದ ಪಟೇಲರಾದ ಟಿ.ಎನ್.ಕೃಷ್ಣೇಗೌಡ ರಥೋತ್ಸವಕ್ಕೆ ಚಾಲನೆ ನೀಡಿದರು. ಅನುದಾನ ರಹಿತ ಶಾಲಾ ಒಕ್ಕೂಟದ ಅಧ್ಯಕ್ಷ ಟಿ.ಕೆ.ನರಸೇಗೌಡ, ಗ್ರಾ.ಪಂ. ಅಧ್ಯಕ್ಷೆ ಶಾರದಮ್ಮ ಬಾಬು, ಸದಸ್ಯರಾದ ಪುರುಷೋತ್ತಮ್, ರಾಧಾಕೃಷ್ಣ, ಮಂಗಳಾಂಬಾ, ಕೃಷ್ಣಪ್ಪ, ಲೋಕೇಶ್ ಧರ್ಮಸಭೆಯ ವೇದಿಕೆಯಲ್ಲಿದ್ದರು.<br /> <br /> ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಭಾಗವಹಿಸಿದ್ದರು. ಪ್ರಸಾದ ವ್ಯವಸ್ಥೆ, ಅರವಟಿಗೆ, ಅನ್ನಸಂತರ್ಪಣೆ ಮಾಡಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಸಮಾಜದಲ್ಲಿ ಧರ್ಮ ಕಾರ್ಯಗಳು ಮೇಲಿಂದ ಮೇಲೆ ನಡೆದು ವಿಶ್ವದಲ್ಲಿ ಸುಖ ಶಾಂತಿಗಳು ಲಭಿಸಲಿ ಎಂದು ವಿಶ್ವ ಒಕ್ಕಲಿಗರ ಪೀಠದ ಕುಮಾರ ಚಂದ್ರಶೇಖರ ಸ್ವಾಮೀಜಿ ಹಾರೈಸಿದರು.<br /> <br /> ತಾಲ್ಲೂಕಿನ ತಡಶೀಘಟ್ಟದ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಧರ್ಮಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.<br /> <br /> ಗ್ರಾಮದ ಪಟೇಲರಾದ ಟಿ.ಎನ್.ಕೃಷ್ಣೇಗೌಡ ರಥೋತ್ಸವಕ್ಕೆ ಚಾಲನೆ ನೀಡಿದರು. ಅನುದಾನ ರಹಿತ ಶಾಲಾ ಒಕ್ಕೂಟದ ಅಧ್ಯಕ್ಷ ಟಿ.ಕೆ.ನರಸೇಗೌಡ, ಗ್ರಾ.ಪಂ. ಅಧ್ಯಕ್ಷೆ ಶಾರದಮ್ಮ ಬಾಬು, ಸದಸ್ಯರಾದ ಪುರುಷೋತ್ತಮ್, ರಾಧಾಕೃಷ್ಣ, ಮಂಗಳಾಂಬಾ, ಕೃಷ್ಣಪ್ಪ, ಲೋಕೇಶ್ ಧರ್ಮಸಭೆಯ ವೇದಿಕೆಯಲ್ಲಿದ್ದರು.<br /> <br /> ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಭಾಗವಹಿಸಿದ್ದರು. ಪ್ರಸಾದ ವ್ಯವಸ್ಥೆ, ಅರವಟಿಗೆ, ಅನ್ನಸಂತರ್ಪಣೆ ಮಾಡಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>