ಸರ್ಕಾರದ ದರ್ಪ, ದೌರ್ಜನ್ಯಕ್ಕೆ ಲಿಂಗಾಯತ ಅಧಿಕಾರಿಗಳು ಬಲಿಪಶು ಆಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಜಾತಿ ವ್ಯಾಮೋಹದಿಂದ ಲಿಂಗಾಯತ ಅಧಿಕಾರಿಗಳು ಮೂಲೆಗುಂಪಾಗಿದ್ದಾರೆ. ಈ ಸರ್ಕಾರದ ಅವಧಿಯಲ್ಲಿ ವೀರಶೈವರು, ಲಿಂಗಾಯತರು ಸಾಕಷ್ಟು ಶೋಷಣೆಗೆ ಒಳಗಾಗಿರುವಾಗ, ಕೆಲ ಕಾವಿಧಾರಿಗಳು ಕಾಂಗ್ರೆಸ್ಗೆ ಮತ ನೀಡುವಂತೆ ಹೇಳಿಕೆ ನೀಡಿರುವುದು ಸರಿಯಲ್ಲ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.