<p><strong>ರಾಜರಾಜೇಶ್ವರಿನಗರ</strong>: ಉತ್ತರಹಳ್ಳಿ ಸಮೀಪದ ಪೂರ್ಣಪ್ರಜ್ಞಾ ಲೇಔಟ್ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸಾರ್ವಜನಿಕ ಸೌಲಭ್ಯಕ್ಕಾಗಿ (ಸಿ.ಎ.) ಮೀಸಲಿಟ್ಟಿದ್ದ ಜಾಗದಲ್ಲಿ ಕೆಲವರು ಮಾಡಿಕೊಂಡಿದ್ದ ಒತ್ತುವರಿಯನ್ನು ಪ್ರಾಧಿಕಾರವು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿತು.<br /> <br /> 35 ಗುಂಟೆ ವಿಸ್ತೀರ್ಣದ ಸಿ.ಎ. ನಿವೇಶನದಲ್ಲಿ ಕೆಲವರು ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಮನೆ ಮತ್ತು ಅಂಗಡಿಗಳನ್ನು ಕೆಡವಿ ಹಾಕಲಾಯಿತು. ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.<br /> <br /> ಬಿಡಿಎ ಕ್ರಮವನ್ನು ಆಕ್ಷೇಪಿಸಿದ ಕೆಲ ಸ್ಥಳೀಯರು, `ಬಡವರು ವಾಸಿಸುವ ಜಾಗವನ್ನು ತೆರವುಗೊಳಿಸಲಾಗುತ್ತಿದೆ. ಆದರೆ ಉತ್ತರಹಳ್ಳಿ ಸುತ್ತಮುತ್ತ ಪ್ರಭಾವಿ ರಾಜಕಾರಣಿಗಳು, ಅಧಿಕಾರಿಗಳು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಜತೆಗೆ ಒತ್ತುವರಿ ಮಾಡಿಕೊಂಡ ಜಾಗದಲ್ಲಿ ಕಟ್ಟಡಗಳನ್ನು ನಿರ್ಮಿಸಿಕೊಂಡರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ~ ಎಂದು ದೂರಿದರು. <br /> <br /> ಸ್ಥಳೀಯ ನಿವಾಸಿ ಹನುಮನರಸಪ್ಪ ಮಾತನಾಡಿ, `ತೋಟಿ ಮನೆತನದವರಾದ ನಮಗೆ ಸರ್ಕಾರ ಜಮೀನು ಮಂಜೂರು ಮಾಡಿತ್ತು. ದಾಖಲೆ ಪತ್ರಗಳನ್ನು ತೋರಿಸಿದರೂ ಬಿಡಿಎ ಅಧಿಕಾರಿಗಳು ನೋಡಲಿಲ್ಲ. ಬಿಜೆಪಿ ಸರ್ಕಾರ ಬಂದ ಮೇಲೆ ತಲಘಟ್ಟಪುರ ಬಳಿಯ ಹೊಸಹಳ್ಳಿ ಮತ್ತಿತರ ಕಡೆ ದಲಿತರ ಜಮೀನುಗಳುನ್ನು ಕಿತ್ತುಕೊಳ್ಳುತ್ತಿದೆ~ ಎಂದು ಆರೋಪಿಸಿದರು.ಬಿಡಿಎ ಎಸ್.ಪಿ. ಎನ್.ಎನ್.ಇಂದಿರಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ</strong>: ಉತ್ತರಹಳ್ಳಿ ಸಮೀಪದ ಪೂರ್ಣಪ್ರಜ್ಞಾ ಲೇಔಟ್ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸಾರ್ವಜನಿಕ ಸೌಲಭ್ಯಕ್ಕಾಗಿ (ಸಿ.ಎ.) ಮೀಸಲಿಟ್ಟಿದ್ದ ಜಾಗದಲ್ಲಿ ಕೆಲವರು ಮಾಡಿಕೊಂಡಿದ್ದ ಒತ್ತುವರಿಯನ್ನು ಪ್ರಾಧಿಕಾರವು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿತು.<br /> <br /> 35 ಗುಂಟೆ ವಿಸ್ತೀರ್ಣದ ಸಿ.ಎ. ನಿವೇಶನದಲ್ಲಿ ಕೆಲವರು ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಮನೆ ಮತ್ತು ಅಂಗಡಿಗಳನ್ನು ಕೆಡವಿ ಹಾಕಲಾಯಿತು. ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.<br /> <br /> ಬಿಡಿಎ ಕ್ರಮವನ್ನು ಆಕ್ಷೇಪಿಸಿದ ಕೆಲ ಸ್ಥಳೀಯರು, `ಬಡವರು ವಾಸಿಸುವ ಜಾಗವನ್ನು ತೆರವುಗೊಳಿಸಲಾಗುತ್ತಿದೆ. ಆದರೆ ಉತ್ತರಹಳ್ಳಿ ಸುತ್ತಮುತ್ತ ಪ್ರಭಾವಿ ರಾಜಕಾರಣಿಗಳು, ಅಧಿಕಾರಿಗಳು ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಜತೆಗೆ ಒತ್ತುವರಿ ಮಾಡಿಕೊಂಡ ಜಾಗದಲ್ಲಿ ಕಟ್ಟಡಗಳನ್ನು ನಿರ್ಮಿಸಿಕೊಂಡರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ~ ಎಂದು ದೂರಿದರು. <br /> <br /> ಸ್ಥಳೀಯ ನಿವಾಸಿ ಹನುಮನರಸಪ್ಪ ಮಾತನಾಡಿ, `ತೋಟಿ ಮನೆತನದವರಾದ ನಮಗೆ ಸರ್ಕಾರ ಜಮೀನು ಮಂಜೂರು ಮಾಡಿತ್ತು. ದಾಖಲೆ ಪತ್ರಗಳನ್ನು ತೋರಿಸಿದರೂ ಬಿಡಿಎ ಅಧಿಕಾರಿಗಳು ನೋಡಲಿಲ್ಲ. ಬಿಜೆಪಿ ಸರ್ಕಾರ ಬಂದ ಮೇಲೆ ತಲಘಟ್ಟಪುರ ಬಳಿಯ ಹೊಸಹಳ್ಳಿ ಮತ್ತಿತರ ಕಡೆ ದಲಿತರ ಜಮೀನುಗಳುನ್ನು ಕಿತ್ತುಕೊಳ್ಳುತ್ತಿದೆ~ ಎಂದು ಆರೋಪಿಸಿದರು.ಬಿಡಿಎ ಎಸ್.ಪಿ. ಎನ್.ಎನ್.ಇಂದಿರಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>