<p><strong>ಬೆಂಗಳೂರು:</strong> ‘ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರ ಹೋಬಳಿ, ಥಣಿಸಂದ್ರ ಗ್ರಾಮದ ಸರ್ವೆ ನಂ. 112 ರಲ್ಲಿನ 21 ಎಕರೆ ಸರ್ಕಾರಿ ಜಮೀನು ಸಾರ್ವಜನಿಕ ಉದ್ದೇಶಕ್ಕಾಗಿ ಬಳಕೆಯಾಗದೆ, ದುರುಪಯೋಗವಾಗುತ್ತಿರುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಕಾನೂನು ರಕ್ಷಣಾ ವೇದಿಕೆಯ ಅಧ್ಯಕ್ಷ<br /> ಎನ್.ರಾಮಾಂಜಿನಪ್ಪ ಅವರು ಒತ್ತಾಯಿಸಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಜಮೀನು ಉಚಿತ ಕಣ್ಣಿನ ಆಸ್ಪತ್ರೆ, ಅನಾಥಾಶ್ರಮ, ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡುವವರಿಗೆ ತರಬೇತಿ ಕೇಂದ್ರಗಳನ್ನು ತೆರೆಯಲು ಮಂಜೂರಾಗಿತ್ತು. ಜಮೀನು ಮಂಜೂರಾಗಿ 42 ವರ್ಷಗಳೇ ಕಳೆದಿವೆ. ಆದರೆ, ಸಾರ್ವಜನಿಕರ ಸೇವೆಗೆ ಸದ್ಬಳಕೆಯಾಗದೆ ದುರುಪಯೋಗವಾಗುತ್ತಿದೆ’ ಎಂದರು.<br /> <br /> ‘ಕೂಡಲೇ ಸರ್ಕಾರ ಈ ಜಮೀನನ್ನು ಮುಟ್ಟುಗೋಲು ಹಾಕಿಕೊಂಡು ಸರ್ಕಾರಿ ಆಸ್ಪತ್ರೆ ಹಾಗೂ ಸರ್ಕಾರಿ ಬಸ್ ನಿಲ್ದಾಣವನ್ನು ತೆರೆಯಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬೆಂಗಳೂರು ಪೂರ್ವ ತಾಲ್ಲೂಕು, ಕೆ.ಆರ್.ಪುರ ಹೋಬಳಿ, ಥಣಿಸಂದ್ರ ಗ್ರಾಮದ ಸರ್ವೆ ನಂ. 112 ರಲ್ಲಿನ 21 ಎಕರೆ ಸರ್ಕಾರಿ ಜಮೀನು ಸಾರ್ವಜನಿಕ ಉದ್ದೇಶಕ್ಕಾಗಿ ಬಳಕೆಯಾಗದೆ, ದುರುಪಯೋಗವಾಗುತ್ತಿರುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಕಾನೂನು ರಕ್ಷಣಾ ವೇದಿಕೆಯ ಅಧ್ಯಕ್ಷ<br /> ಎನ್.ರಾಮಾಂಜಿನಪ್ಪ ಅವರು ಒತ್ತಾಯಿಸಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಜಮೀನು ಉಚಿತ ಕಣ್ಣಿನ ಆಸ್ಪತ್ರೆ, ಅನಾಥಾಶ್ರಮ, ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡುವವರಿಗೆ ತರಬೇತಿ ಕೇಂದ್ರಗಳನ್ನು ತೆರೆಯಲು ಮಂಜೂರಾಗಿತ್ತು. ಜಮೀನು ಮಂಜೂರಾಗಿ 42 ವರ್ಷಗಳೇ ಕಳೆದಿವೆ. ಆದರೆ, ಸಾರ್ವಜನಿಕರ ಸೇವೆಗೆ ಸದ್ಬಳಕೆಯಾಗದೆ ದುರುಪಯೋಗವಾಗುತ್ತಿದೆ’ ಎಂದರು.<br /> <br /> ‘ಕೂಡಲೇ ಸರ್ಕಾರ ಈ ಜಮೀನನ್ನು ಮುಟ್ಟುಗೋಲು ಹಾಕಿಕೊಂಡು ಸರ್ಕಾರಿ ಆಸ್ಪತ್ರೆ ಹಾಗೂ ಸರ್ಕಾರಿ ಬಸ್ ನಿಲ್ದಾಣವನ್ನು ತೆರೆಯಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>