<p><strong>ಬೆಂಗಳೂರು:</strong> ರಾಜ್ಯ ಸರ್ಕಾರಿ ನೌಕರರ ಸಂಘವು ಅಂತರರಾಷ್ಟ್ರೀಯ ಸಾರ್ವಜನಿಕ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಬುಧವಾರ ಮತ್ತು ಗುರುವಾರ ನಗರದ ಏಟ್ರಿಯಾ ಹೋಟೆಲ್ನಲ್ಲಿ ಏಷ್ಯಾ ಫೆಸಿಫಿಕ್ ವಲಯದ ಕಾರ್ಯಕಾರಿ ಸಭೆಯನ್ನು ಹಮ್ಮಿಕೊಂಡಿದೆ. <br /> <br /> ಅಂತರರಾಷ್ಟ್ರೀಯ ಸಾರ್ವಜನಿಕ ಸೇವಾ ಸಂಸ್ಥೆಯಲ್ಲಿ ಸದಸ್ಯತ್ವ ಪಡೆದಿರುವ ಮಲೇಷ್ಯಾ, ಸಿಂಗಪುರ, ಥ್ಯಾಯ್ಲೆಂಡ್. ಫಿಲಿಫಿನ್ಸ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ದೇಶದ ಸರ್ಕಾರಿ ನೌಕರರ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗುಣಾತ್ಮಕ ಸಾರ್ವಜನಿಕ ಸೇವೆ, ವಿಶ್ವದ ಬಡತನ ನಿರ್ಮೂಲನೆ, ಆರೋಗ್ಯ, ಪರಿಸರ ಸಂರಕ್ಷಣೆ, ವಿಷಯದ ಕುರಿತು ಚರ್ಚೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಲ್.ಬೈರಪ್ಪ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಪ್ರಸಕ್ತ ಬಜೆಟ್ನಲ್ಲಿ ಸರ್ಕಾರಿ ನೌಕರರಿಗೆ ಶೇ 22.5 ರಷ್ಟು ವೇತನ ಹೆಚ್ಚಳ ಮಾಡಿದ್ದು, ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಏಪ್ರಿಲ್ 1 ರಿಂದ ಜಾರಿಗೊಳಿಸುವುದಾಗಿ ಹೇಳಿದ್ದರು. ಆದರೆ ಈ ವರೆಗೆ ಇದು ಜಾರಿಯಾಗಿಲ್ಲ ಎಂದು ಹೇಳಿದರು.<br /> <br /> ವೇತನ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆ ವರದಿಯಲ್ಲಿರುವ ಸಾಕಷ್ಟು ನ್ಯೂನ್ಯತೆಗಳನ್ನು ಸರಿಪಡಿಸಬೇಕು. ಸರ್ಕಾರಿ ನೌಕರರಿಗೆ ನಗರ ಪರಿಹಾರ ಭತ್ಯೆಯಾಗಿ 400 ರೂಪಾಯಿ ನೀಡಲಾಗುತ್ತಿದೆ. ಬಸ್ ಪಾಸ್ ದರಕ್ಕೆ ಅನುಗುಣವಾಗಿ ಇದನ್ನು 700ರೂಪಾಯಿಗೆ ಏರಿಸಬೇಕು. <br /> <br /> ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಈಚೆಗಷ್ಟೆ ಚರ್ಚೆ ನಡೆಸಲಾಗಿದ್ದು ಈವರೆಗೆ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.ಸರ್ಕಾರ ಮುಂದಿನ ವಾರದೊಳಗೆ ನಿರ್ಧಾರ ಪ್ರಕಟಿಸದಿದ್ದರೆ, ಸಂಘದ ಕಾರ್ಯಕಾರಿ ಸಭೆ ಸೇರಿ, ಹೋರಾಟದ ರೂಪು ರೇಷೆಯ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಸರ್ಕಾರಿ ನೌಕರರ ಸಂಘವು ಅಂತರರಾಷ್ಟ್ರೀಯ ಸಾರ್ವಜನಿಕ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಬುಧವಾರ ಮತ್ತು ಗುರುವಾರ ನಗರದ ಏಟ್ರಿಯಾ ಹೋಟೆಲ್ನಲ್ಲಿ ಏಷ್ಯಾ ಫೆಸಿಫಿಕ್ ವಲಯದ ಕಾರ್ಯಕಾರಿ ಸಭೆಯನ್ನು ಹಮ್ಮಿಕೊಂಡಿದೆ. <br /> <br /> ಅಂತರರಾಷ್ಟ್ರೀಯ ಸಾರ್ವಜನಿಕ ಸೇವಾ ಸಂಸ್ಥೆಯಲ್ಲಿ ಸದಸ್ಯತ್ವ ಪಡೆದಿರುವ ಮಲೇಷ್ಯಾ, ಸಿಂಗಪುರ, ಥ್ಯಾಯ್ಲೆಂಡ್. ಫಿಲಿಫಿನ್ಸ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ದೇಶದ ಸರ್ಕಾರಿ ನೌಕರರ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗುಣಾತ್ಮಕ ಸಾರ್ವಜನಿಕ ಸೇವೆ, ವಿಶ್ವದ ಬಡತನ ನಿರ್ಮೂಲನೆ, ಆರೋಗ್ಯ, ಪರಿಸರ ಸಂರಕ್ಷಣೆ, ವಿಷಯದ ಕುರಿತು ಚರ್ಚೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಲ್.ಬೈರಪ್ಪ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಪ್ರಸಕ್ತ ಬಜೆಟ್ನಲ್ಲಿ ಸರ್ಕಾರಿ ನೌಕರರಿಗೆ ಶೇ 22.5 ರಷ್ಟು ವೇತನ ಹೆಚ್ಚಳ ಮಾಡಿದ್ದು, ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಏಪ್ರಿಲ್ 1 ರಿಂದ ಜಾರಿಗೊಳಿಸುವುದಾಗಿ ಹೇಳಿದ್ದರು. ಆದರೆ ಈ ವರೆಗೆ ಇದು ಜಾರಿಯಾಗಿಲ್ಲ ಎಂದು ಹೇಳಿದರು.<br /> <br /> ವೇತನ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆ ವರದಿಯಲ್ಲಿರುವ ಸಾಕಷ್ಟು ನ್ಯೂನ್ಯತೆಗಳನ್ನು ಸರಿಪಡಿಸಬೇಕು. ಸರ್ಕಾರಿ ನೌಕರರಿಗೆ ನಗರ ಪರಿಹಾರ ಭತ್ಯೆಯಾಗಿ 400 ರೂಪಾಯಿ ನೀಡಲಾಗುತ್ತಿದೆ. ಬಸ್ ಪಾಸ್ ದರಕ್ಕೆ ಅನುಗುಣವಾಗಿ ಇದನ್ನು 700ರೂಪಾಯಿಗೆ ಏರಿಸಬೇಕು. <br /> <br /> ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಈಚೆಗಷ್ಟೆ ಚರ್ಚೆ ನಡೆಸಲಾಗಿದ್ದು ಈವರೆಗೆ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.ಸರ್ಕಾರ ಮುಂದಿನ ವಾರದೊಳಗೆ ನಿರ್ಧಾರ ಪ್ರಕಟಿಸದಿದ್ದರೆ, ಸಂಘದ ಕಾರ್ಯಕಾರಿ ಸಭೆ ಸೇರಿ, ಹೋರಾಟದ ರೂಪು ರೇಷೆಯ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>