<p><strong>ಬೆಂಗಳೂರು:</strong> ಚೆಕ್ ಪುಸ್ತಕ, ಉತ್ತರ ಪತ್ರಿಕೆಗಳು, ಪ್ರಶ್ನೆಪತ್ರಿಕೆಗಳು, ರಸೀದಿ ಪುಸ್ತಕಗಳು, ಪರ್ಮಿಟ್ ಪುಸ್ತಕ, ಬಜೆಟ್ ಪುಸ್ತಕ ಇತ್ಯಾದಿ ಗೌಪ್ಯ ವರದಿಗಳ ಪ್ರಕಟಣೆಗಾಗಿ ರಾಜ್ಯದಲ್ಲಿ ಮೊದಲ ಬಾರಿಗೆ `ಸರ್ಕಾರಿ ಭದ್ರತಾ ಮುದ್ರಣಾಲಯ~ ಆರಂಭಿಸಲಾಗಿದೆ.<br /> <br /> ಪ್ರಸ್ತುತ ಕೇಂದ್ರ ಸರ್ಕಾರದ ಭದ್ರತಾ ಮುದ್ರಣಾಲಯ ಬಿಟ್ಟರೆ, ರಾಜ್ಯಗಳ ಮಟ್ಟದಲ್ಲಿ ಭದ್ರತಾ ಮುದ್ರಣಾಲಯ ಇಲ್ಲ. ಇದರ ಅಗತ್ಯ ಮನಗಂಡಿರುವ ರಾಜ್ಯ ಸರ್ಕಾರ, ನಗರದ ಪೀಣ್ಯ ದಲ್ಲಿರುವ ಸರ್ಕಾರಿ ಮುದ್ರಣಾಲಯದ ಆವರಣದಲ್ಲಿಯೇ ಪ್ರತ್ಯೇಕವಾದ `ಭದ್ರತಾ ಮುದ್ರಣಾಲಯ~ ಪ್ರಾರಂಭಿಸಿದೆ. <br /> <br /> ಗುರುವಾರ ಇದರ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಗೌಪ್ಯತೆ ಕಾಪಾಡುವುದು ಬಹಳ ಮುಖ್ಯ. <br /> <br /> ಆಯ-ವ್ಯಯದಲ್ಲಿನ ಅಂಶಗಳು ಮುದ್ರಣಾಲಯ ಸಿಬ್ಬಂದಿಗೆ ಗೊತ್ತಿರುತ್ತದೆ. ಬಜೆಟ್ ಮಂಡನೆಗೂ ಮೊದಲೇ ಆ ಅಂಶಗಳು ಬಹಿರಂಗವಾದರೆ ಅನಾಹುತ ವಾಗುತ್ತದೆ. ಆದ್ದರಿಂದ ರಹಸ್ಯ ಪಾಲನೆ ಮುಖ್ಯವಾದುದು ಎಂದರು.<br /> <br /> ಪ್ರಶ್ನೆಪತ್ರಿಕೆಗಳು ಬಹಿರಂಗವಾದರೆ ಕಷ್ಟಪಟ್ಟು ಓದುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಆ ದೃಷ್ಟಿಯಿಂದ ಗೌಪ್ಯತೆ ಮಹತ್ವದ್ದಾಗಿದೆ. ರಾಜ್ಯದ ಮುದ್ರಣಾಲಯ ದೇಶಕ್ಕೆ ಮಾದರಿಯಾಗಿದೆ. ಇದೇ ರೀತಿ ಉತ್ತಮ ಕೆಲಸವನ್ನು ಮುಂದುವರಿಸಿಕೊಂಡು ಹೋಗಿ ಎಂದು ಸಲಹೆ ಮಾಡಿದರು.<br /> <br /> ನೌಕರರ ಸಣ್ಣಪುಟ್ಟ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ನಿಟ್ಟಿನಲ್ಲಿ ಕ್ರಮಕೈಗೊಂಡರೆ, ಅದಕ್ಕೆ ಬೇಕಾದ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.<br /> <br /> `ಇಡೀ ದೇಶ ಇತ್ತ ನೋಡುತ್ತಿದೆ. ಖಾಸಗಿಯವರ ಸ್ಪರ್ಧೆಯನ್ನು ಎದುರಿಸುವ ಮೂಲಕ ಅತ್ಯುತ್ತಮ ಸೇವೆ ನೀಡಬೇಕು. ನಾಲ್ಕು ವರ್ಷಗಳಲ್ಲಿ ಸಾಕಷ್ಟು ಸುಧಾರಣೆಗಳು ಆಗಿವೆ. ಮುಂದೆಯೂ ಇದೇ ರೀತಿ ಉತ್ತಮವಾಗಿ ಕಾರ್ಯನಿರ್ವಹಿಸಿ~ ಎಂದು ಸಚಿವ ಶಿಕ್ಷಣ ಸಚಿವ ಕಾಗೇರಿ ಕಿವಿಮಾತು ಹೇಳಿದರು.<br /> <br /> ಸದ್ಯ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಭದ್ರತಾ ಮುದ್ರಣಾಲಯ ಆರಂಭಿಸಲಾಗಿದೆ. ಮುಂದೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಆಧುನೀಕರಣಗೊಳಿಸಲಾಗುವುದು. ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಬೇರೆ ರಾಜ್ಯಗಳಿಂದ ಮುದ್ರಣ ಕಾರ್ಯಕ್ಕೆ ಬೇಡಿಕೆ ಬರುತ್ತದೆ ಎಂದರು.<br /> <br /> ಶಾಸಕ ಎಂ.ಶ್ರೀನಿವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಸ್.ಮುನಿರಾಜು, ಪಾಲಿಕೆ ಸದಸ್ಯೆ ಆಶಾ ಸುರೇಶ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯ ನಿರ್ದೇಶಕ ಎಂ.ರವಿಶಂಕರ್ ಉಪಸ್ಥಿತರಿದ್ದರು.</p>.<p><strong>ದಿನಗೂಲಿ ನೌಕರರ ಸಮಸ್ಯೆ: ಶೀಘ್ರ ಪರಿಹಾರ</strong><br /> ಸರ್ಕಾರಿ ಮುದ್ರಣಾಲಯ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಿನಗೂಲಿ ನೌಕರರ ಸಮಸ್ಯೆಯನ್ನು ಬಗೆಹರಿಸುವ ಕುರಿತು ಚಿಂತನೆ ನಡೆದಿದೆ. ಶೀಘ್ರದಲ್ಲೇ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು. <br /> <br /> ಇದು ಮುದ್ರಣಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ 392 ದಿನಗೂಲಿ ನೌಕರರ ಸಮಸ್ಯೆ ಮಾತ್ರ ಅಲ್ಲ. ಇಡೀ ರಾಜ್ಯದಲ್ಲಿ ದಿನಗೂಲಿ ನೌಕರರು ಇದ್ದಾರೆ ಎಂದರು. <br /> <br /> ಇದಕ್ಕೂ ಮೊದಲು ಸರ್ಕಾರಿ ಕೇಂದ್ರ ಮುದ್ರಣಾಲಯ ನೌಕರರ ಸಂಘದ ಉಪಾಧ್ಯಕ್ಷ ಕೇಶವಮೂರ್ತಿ ಮೊದಲಾದವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ದಿನಗೂಲಿ ನೌಕರರ ಸೇವೆ ಕಾಯಂಗೊಳಿಸುವಂತೆ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚೆಕ್ ಪುಸ್ತಕ, ಉತ್ತರ ಪತ್ರಿಕೆಗಳು, ಪ್ರಶ್ನೆಪತ್ರಿಕೆಗಳು, ರಸೀದಿ ಪುಸ್ತಕಗಳು, ಪರ್ಮಿಟ್ ಪುಸ್ತಕ, ಬಜೆಟ್ ಪುಸ್ತಕ ಇತ್ಯಾದಿ ಗೌಪ್ಯ ವರದಿಗಳ ಪ್ರಕಟಣೆಗಾಗಿ ರಾಜ್ಯದಲ್ಲಿ ಮೊದಲ ಬಾರಿಗೆ `ಸರ್ಕಾರಿ ಭದ್ರತಾ ಮುದ್ರಣಾಲಯ~ ಆರಂಭಿಸಲಾಗಿದೆ.<br /> <br /> ಪ್ರಸ್ತುತ ಕೇಂದ್ರ ಸರ್ಕಾರದ ಭದ್ರತಾ ಮುದ್ರಣಾಲಯ ಬಿಟ್ಟರೆ, ರಾಜ್ಯಗಳ ಮಟ್ಟದಲ್ಲಿ ಭದ್ರತಾ ಮುದ್ರಣಾಲಯ ಇಲ್ಲ. ಇದರ ಅಗತ್ಯ ಮನಗಂಡಿರುವ ರಾಜ್ಯ ಸರ್ಕಾರ, ನಗರದ ಪೀಣ್ಯ ದಲ್ಲಿರುವ ಸರ್ಕಾರಿ ಮುದ್ರಣಾಲಯದ ಆವರಣದಲ್ಲಿಯೇ ಪ್ರತ್ಯೇಕವಾದ `ಭದ್ರತಾ ಮುದ್ರಣಾಲಯ~ ಪ್ರಾರಂಭಿಸಿದೆ. <br /> <br /> ಗುರುವಾರ ಇದರ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಗೌಪ್ಯತೆ ಕಾಪಾಡುವುದು ಬಹಳ ಮುಖ್ಯ. <br /> <br /> ಆಯ-ವ್ಯಯದಲ್ಲಿನ ಅಂಶಗಳು ಮುದ್ರಣಾಲಯ ಸಿಬ್ಬಂದಿಗೆ ಗೊತ್ತಿರುತ್ತದೆ. ಬಜೆಟ್ ಮಂಡನೆಗೂ ಮೊದಲೇ ಆ ಅಂಶಗಳು ಬಹಿರಂಗವಾದರೆ ಅನಾಹುತ ವಾಗುತ್ತದೆ. ಆದ್ದರಿಂದ ರಹಸ್ಯ ಪಾಲನೆ ಮುಖ್ಯವಾದುದು ಎಂದರು.<br /> <br /> ಪ್ರಶ್ನೆಪತ್ರಿಕೆಗಳು ಬಹಿರಂಗವಾದರೆ ಕಷ್ಟಪಟ್ಟು ಓದುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಆ ದೃಷ್ಟಿಯಿಂದ ಗೌಪ್ಯತೆ ಮಹತ್ವದ್ದಾಗಿದೆ. ರಾಜ್ಯದ ಮುದ್ರಣಾಲಯ ದೇಶಕ್ಕೆ ಮಾದರಿಯಾಗಿದೆ. ಇದೇ ರೀತಿ ಉತ್ತಮ ಕೆಲಸವನ್ನು ಮುಂದುವರಿಸಿಕೊಂಡು ಹೋಗಿ ಎಂದು ಸಲಹೆ ಮಾಡಿದರು.<br /> <br /> ನೌಕರರ ಸಣ್ಣಪುಟ್ಟ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ನಿಟ್ಟಿನಲ್ಲಿ ಕ್ರಮಕೈಗೊಂಡರೆ, ಅದಕ್ಕೆ ಬೇಕಾದ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.<br /> <br /> `ಇಡೀ ದೇಶ ಇತ್ತ ನೋಡುತ್ತಿದೆ. ಖಾಸಗಿಯವರ ಸ್ಪರ್ಧೆಯನ್ನು ಎದುರಿಸುವ ಮೂಲಕ ಅತ್ಯುತ್ತಮ ಸೇವೆ ನೀಡಬೇಕು. ನಾಲ್ಕು ವರ್ಷಗಳಲ್ಲಿ ಸಾಕಷ್ಟು ಸುಧಾರಣೆಗಳು ಆಗಿವೆ. ಮುಂದೆಯೂ ಇದೇ ರೀತಿ ಉತ್ತಮವಾಗಿ ಕಾರ್ಯನಿರ್ವಹಿಸಿ~ ಎಂದು ಸಚಿವ ಶಿಕ್ಷಣ ಸಚಿವ ಕಾಗೇರಿ ಕಿವಿಮಾತು ಹೇಳಿದರು.<br /> <br /> ಸದ್ಯ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಭದ್ರತಾ ಮುದ್ರಣಾಲಯ ಆರಂಭಿಸಲಾಗಿದೆ. ಮುಂದೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಆಧುನೀಕರಣಗೊಳಿಸಲಾಗುವುದು. ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಬೇರೆ ರಾಜ್ಯಗಳಿಂದ ಮುದ್ರಣ ಕಾರ್ಯಕ್ಕೆ ಬೇಡಿಕೆ ಬರುತ್ತದೆ ಎಂದರು.<br /> <br /> ಶಾಸಕ ಎಂ.ಶ್ರೀನಿವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಸ್.ಮುನಿರಾಜು, ಪಾಲಿಕೆ ಸದಸ್ಯೆ ಆಶಾ ಸುರೇಶ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯ ನಿರ್ದೇಶಕ ಎಂ.ರವಿಶಂಕರ್ ಉಪಸ್ಥಿತರಿದ್ದರು.</p>.<p><strong>ದಿನಗೂಲಿ ನೌಕರರ ಸಮಸ್ಯೆ: ಶೀಘ್ರ ಪರಿಹಾರ</strong><br /> ಸರ್ಕಾರಿ ಮುದ್ರಣಾಲಯ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಿನಗೂಲಿ ನೌಕರರ ಸಮಸ್ಯೆಯನ್ನು ಬಗೆಹರಿಸುವ ಕುರಿತು ಚಿಂತನೆ ನಡೆದಿದೆ. ಶೀಘ್ರದಲ್ಲೇ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದರು. <br /> <br /> ಇದು ಮುದ್ರಣಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ 392 ದಿನಗೂಲಿ ನೌಕರರ ಸಮಸ್ಯೆ ಮಾತ್ರ ಅಲ್ಲ. ಇಡೀ ರಾಜ್ಯದಲ್ಲಿ ದಿನಗೂಲಿ ನೌಕರರು ಇದ್ದಾರೆ ಎಂದರು. <br /> <br /> ಇದಕ್ಕೂ ಮೊದಲು ಸರ್ಕಾರಿ ಕೇಂದ್ರ ಮುದ್ರಣಾಲಯ ನೌಕರರ ಸಂಘದ ಉಪಾಧ್ಯಕ್ಷ ಕೇಶವಮೂರ್ತಿ ಮೊದಲಾದವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ದಿನಗೂಲಿ ನೌಕರರ ಸೇವೆ ಕಾಯಂಗೊಳಿಸುವಂತೆ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>