<p><strong>ಹೊಸಕೋ</strong>ಟೆ: `ಸರ್ಕಾರಿ ಶಾಲೆಗಳಲ್ಲಿ ಸೌಕರ್ಯ ಅಭಿವೃದ್ಧಿಗೆ ದಾನಿಗಳು ಸಂಘ- ಸಂಸ್ಥೆ ನೆರವು ನೀಡಬೇಕು' ಎಂದು ಶಾಸಕ ಎನ್.ನಾಗರಾಜು ಮನವಿ ಮಾಡಿದರು.<br /> <br /> ಬೆಂಗಳೂರಿನ ಡೆಲ್ ಸಂಸ್ಥೆ ವತಿಯಿಂದ ಪಟ್ಟಣದ ಬಾಲಕರ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> `ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಹಣ ವೆಚ್ಚ ಮಾಡುತ್ತಿದ್ದರೂ ಮೂಲಸೌಕರ್ಯ ಕೊರತೆ ಸಂಪೂರ್ಣ ನೀಗಿಲ್ಲ' ಎಂದು ಆತಂಕ ವ್ಯಕ್ತಪಡಿಸಿದರು. `ಮಕ್ಕಳಿಗೆ ಆಂಗ್ಲ ಭಾಷೆ ಕಲಿಕೆ ಅವಶ್ಯಕತೆಯಿದ್ದು ಸರ್ಕಾರಿ ಶಾಲೆಗಳಲ್ಲಿ ತರಬೇತಿ ಕೊಡಬೇಕಿದೆ' ಎಂದು ಅವರು ಅಭಿಪ್ರಾಯಪಟ್ಟರು. ವಕೀಲ ಎಚ್.ವಿ. ರಾಮಚಂದ್ರಪ್ಪ, ಮುಖ್ಯ ಶಿಕ್ಷಕ ಕೆ.ರಮೇಶ್, ಡೆಲ್ ಸಂಸ್ಥೆ ಅಧಿಕಾರಿಗಳಾದ ಶ್ಯಾಮಲಾ, ಪ್ರಶಾಂತ್ ಉಪಸ್ಥಿತರಿದ್ದರು. 620 ಮಕ್ಕಳಿಗೆ ಸೌಲಭ್ಯ ವಿತರಿಸಲಾಯಿತು.<br /> <br /> <strong>ಉದ್ಘಾಟನೆ</strong>: ತಾಲ್ಲೂಕಿನ ದೇವಶೆಟ್ಟಿಹಳ್ಳಿ ಗ್ರಾಮದ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೂತನ ಗೋಪುರ, ಗಣಪತಿ, ನವಗ್ರಹಗಳ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಸಮಾರಂಭ ಶನಿವಾರ ನಡೆಯಿತು. ಶಾಸಕ ಎನ್.ನಾಗರಾಜು, ದಾನಿ ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋ</strong>ಟೆ: `ಸರ್ಕಾರಿ ಶಾಲೆಗಳಲ್ಲಿ ಸೌಕರ್ಯ ಅಭಿವೃದ್ಧಿಗೆ ದಾನಿಗಳು ಸಂಘ- ಸಂಸ್ಥೆ ನೆರವು ನೀಡಬೇಕು' ಎಂದು ಶಾಸಕ ಎನ್.ನಾಗರಾಜು ಮನವಿ ಮಾಡಿದರು.<br /> <br /> ಬೆಂಗಳೂರಿನ ಡೆಲ್ ಸಂಸ್ಥೆ ವತಿಯಿಂದ ಪಟ್ಟಣದ ಬಾಲಕರ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> `ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಹಣ ವೆಚ್ಚ ಮಾಡುತ್ತಿದ್ದರೂ ಮೂಲಸೌಕರ್ಯ ಕೊರತೆ ಸಂಪೂರ್ಣ ನೀಗಿಲ್ಲ' ಎಂದು ಆತಂಕ ವ್ಯಕ್ತಪಡಿಸಿದರು. `ಮಕ್ಕಳಿಗೆ ಆಂಗ್ಲ ಭಾಷೆ ಕಲಿಕೆ ಅವಶ್ಯಕತೆಯಿದ್ದು ಸರ್ಕಾರಿ ಶಾಲೆಗಳಲ್ಲಿ ತರಬೇತಿ ಕೊಡಬೇಕಿದೆ' ಎಂದು ಅವರು ಅಭಿಪ್ರಾಯಪಟ್ಟರು. ವಕೀಲ ಎಚ್.ವಿ. ರಾಮಚಂದ್ರಪ್ಪ, ಮುಖ್ಯ ಶಿಕ್ಷಕ ಕೆ.ರಮೇಶ್, ಡೆಲ್ ಸಂಸ್ಥೆ ಅಧಿಕಾರಿಗಳಾದ ಶ್ಯಾಮಲಾ, ಪ್ರಶಾಂತ್ ಉಪಸ್ಥಿತರಿದ್ದರು. 620 ಮಕ್ಕಳಿಗೆ ಸೌಲಭ್ಯ ವಿತರಿಸಲಾಯಿತು.<br /> <br /> <strong>ಉದ್ಘಾಟನೆ</strong>: ತಾಲ್ಲೂಕಿನ ದೇವಶೆಟ್ಟಿಹಳ್ಳಿ ಗ್ರಾಮದ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೂತನ ಗೋಪುರ, ಗಣಪತಿ, ನವಗ್ರಹಗಳ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಸಮಾರಂಭ ಶನಿವಾರ ನಡೆಯಿತು. ಶಾಸಕ ಎನ್.ನಾಗರಾಜು, ದಾನಿ ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>