ದೇಶದ ಯಾವುದೇ ಮೂಲೆಯಲ್ಲಿಯೂ ಅಹಿತಕರ ಘಟನೆಗಳು ಸಂಭವಿಸಿದಲ್ಲಿ, ಕೂಡಲೇ ಕೇಂದ್ರ ಸರ್ಕಾರದ ಅನುಮತಿ ಪಡೆದು ಸ್ಥಳಕ್ಕೆ ತೆರಳಿ ಕಾರ್ಯಪ್ರವೃತ್ತರಾಗುತ್ತೇವೆ. ಕುಟುಂಬ ಸದಸ್ಯರನ್ನು ತೊರೆದು ಸಿಬ್ಬಂದಿ ದೇಶದ ಭದ್ರತೆಗೆ ಒತ್ತು ಕೊಡುತ್ತಿರುವುದು ಹೆಮ್ಮೆಯ ಸಂಗತಿ' ಎಂದರು.
ನಂತರ ಮಾತನಾಡಿದ ದಕ್ಷಿಣ ವಿಭಾಗದ ಐಜಿಪಿ ಎನ್.ಆರ್.ಕೆ.ರೆಡ್ಡಿ ಮಾತನಾಡಿ, `ತರಬೇತಿ ಹಂತ ಪೂರ್ಣಗೊಳಿಸಿದ 945 ಮಂದಿ ಸಿಆರ್ಪಿಎಫ್ ಪಡೆಗೆ ಸೇರ್ಪಡೆಗೊಂಡಿದ್ದಾರೆ. ಅವರು 44 ವಾರಗಳ ಕಾಲ ಕಠಿಣ ತರಬೇತಿ ಪಡೆದಿದ್ದು, ರಾಷ್ಟ್ರದ ಶಾಂತಿ-ಸುವ್ಯವಸ್ಥೆ ಕಾಪಾಡಲು ಸನ್ನದ್ಧರಾಗಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತರಬೇತಿ ಅವಧಿಯಲ್ಲಿ ಉತ್ತಮ ಸಾಧನೆ ಮಾಡಿದ ಶಿವಕುಮಾರ್, ಸನ್ನಿಕುಮಾರ್, ಕಿಶೋರ್ಸಿಂಗ್ ಅವರಿಗೆ ಬಹುಮಾನ ಮತ್ತು ಪಾರಿತೋಷಕ ನೀಡಲಾಯಿತು.