ಬೆಂಗಳೂರು: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿಧಾನಸಭೆ ವಿರೋಧ ನಾಯಕ ಸಿದ್ದರಾಮಯ್ಯ ಅವರು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ರಾಜ್ಯಕ್ಕೆ ಭಾನುವಾರ ರಾತ್ರಿ ವಾಪಸಾಗುವರು.
ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಅವರು ವಾಪಸಾಗುತ್ತಿದ್ದಾರೆ. ನಿಗದಿತ ಕಾರ್ಯಕ್ರಮದ ಪ್ರಕಾರ ಅವರು ಇದೇ 28ರ ರಾತ್ರಿ ನಗರಕ್ಕೆ ಬರಬೇಕಿತ್ತು.
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ಗೊಂದಲಗಳಿರುವ ಕಾರಣ ಅವರನ್ನು ವಾಪಸಾಗುವಂತೆ ಸೂಚಿಸಿದ್ದು, ವಿಧಾನಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.