<p>ಬೆಂಗಳೂರು: ಸಿನಿಮಾ ಏಕಕಾಲಕ್ಕೆ ಉದ್ಯಮವೂ ಹೌದು, ಮಾಧ್ಯಮವೂ ಹೌದು ಎಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಹೇಳಿದರು.<br /> <br /> ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ‘ಸಿನಿಮಾ ಉದ್ಯಮ– ಮಾಧ್ಯಮ’ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> ‘ಇಂದು ಎಲ್ಲಾ ಮಾಧ್ಯಮಗಳು ಉದ್ಯಮಗಳಾಗಿ ಪರಿವರ್ತಿತವಾಗುತ್ತಿವೆ. ಈ ಸಂದರ್ಭದಲ್ಲಿ ಸಿನಿಮಾರಂಗವು ಬೌದ್ಧಿಕ ವರ್ಗವನ್ನು ಒಳಗೊಂಡೂ ಅವುಗಳ ಹಿಡಿತದಿಂದ ಬಿಡುಗಡೆ ಹೊಂದಬೇಕಾಗಿದೆ. ಸಂಪಾದನೆ ಮತ್ತು ಸಂವೇದನೆಗಳ ನಡುವೆ ಸಮನ್ವಯ ಸಾಧಿಸಬೇಕಿದೆ’ ಎಂದರು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್, ‘ಈಗಿನ ಕನ್ನಡ ಸಿನಿಮಾಗಳಲ್ಲಿ ಹಿಂಸೆಯೇ ವಿಜೃಂಭಿಸುತ್ತಿದ್ದು, ತತ್ವ–ಸಿದ್ಧಾಂತಗಳಿಲ್ಲದ ಸಿನಿಮಾಗಳು ಯುವಜನತೆ ಮೇಲೆ ದುಷ್ಪರಿಣಾಮ ಬೀರುತ್ತಿವೆ’ ಎಂದು ವಿಷಾದ ವ್ಯಕ್ತ ಪಡಿಸಿದರು.<br /> <br /> ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ.ಪೊನ್ನಪ್ಪ ಮಾತನಾಡಿ, ಸಿನಿಮಾದ ಜೀವಾಳವಾದ ಕಥೆಯೆಡೆಗೆ ನಿರ್ಮಾಪಕರ ಮತ್ತು ನಿರ್ದೇಶಕರ ಗಮನವಿಲ್ಲದಿರುವುದು ದುರಂತ ಎಂದರು.<br /> <br /> ವಿಚಾರ ಸಂಕಿರಣದಲ್ಲಿ ‘ಸುಧಾ’ ವಾರಪತ್ರಿಕೆ ಸಹಾಯಕ ಸಂಪಾದಕ ಬಿ.ಎಂ.- ಹನೀಫ್ ‘ಪ್ರಾದೇಶಿಕ ಸಿನಿಮಾಗಳ ರಾಷ್ಟ್ರೀಯ, ಅಂತರರಾಷ್ಟ್ರೀಯ ನೆಲೆ –ಬೆಲೆ’ ವಿಷಯ ಕುರಿತು ಮಾತನಾಡಿ, ಕನ್ನಡ ಸಿನಿಮಾಗಳು ದುಬಾರಿ ಮಲ್ಟಿ ಫ್ಲೆಕ್ಸ್ ಸಂಸ್ಕೃತಿಯಿಂದ ಹೊರಬರಬೇಕು ಎಂದರು.<br /> <br /> ‘ಸ್ಥಳೀಯ ಸಿನಿಮಾ: ಜಾಗತಿಕ ಪರಿಣಾಮ’ ವಿಷಯ ಕುರಿತು ಮಾತನಾಡಿದ ಕರ್ನಾಟಕ ಕಾರ್ಯನಿರತ<br /> ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಮೊದಲಿಯಾರ್, ಸ್ಥಳೀಯ ಸಿನಿಮಾಗಳು ಜಾಗತಿಕ ಮಾನ್ಯತೆ ಪಡೆಯುವಲ್ಲಿ ಪ್ರಾದೇಶಿಕ ಸಿನಿಮಾ ರಂಗದ ಪ್ರಯತ್ನ ಶೂನ್ಯ ಎಂದರು.<br /> <br /> ನಿರ್ಮಾಪಕ ಸಾ.ರಾ.ಗೋವಿಂದು, ವಾರ್ತಾ ಇಲಾಖೆ ಮಾಜಿ ನಿರ್ದೇಶಕ ಕೆ.ವಿ.ಆರ್.ಟ್ಯಾಗೂರ್, ಚಿತ್ರ ನಿರ್ದೇಶಕ ಬಿ.ಎಂ.ಗಿರಿರಾಜ್ ಮಾತನಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್.ಡಿ.ಗಂಗರಾಜು, ಚಿತ್ರ ನಿರ್ದೇಶಕ ಎಚ್.ಎನ್. ನರಹರಿರಾವ್, ವಾರ್ತಾ ಇಲಾಖೆ ಕಾರ್ಯ ದರ್ಶಿ ಕೆ.ಆರ್. ನಿರಂಜನ್, ಪತ್ರಕರ್ತ ಜೋಗಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಿನಿಮಾ ಏಕಕಾಲಕ್ಕೆ ಉದ್ಯಮವೂ ಹೌದು, ಮಾಧ್ಯಮವೂ ಹೌದು ಎಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಹೇಳಿದರು.<br /> <br /> ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ‘ಸಿನಿಮಾ ಉದ್ಯಮ– ಮಾಧ್ಯಮ’ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> ‘ಇಂದು ಎಲ್ಲಾ ಮಾಧ್ಯಮಗಳು ಉದ್ಯಮಗಳಾಗಿ ಪರಿವರ್ತಿತವಾಗುತ್ತಿವೆ. ಈ ಸಂದರ್ಭದಲ್ಲಿ ಸಿನಿಮಾರಂಗವು ಬೌದ್ಧಿಕ ವರ್ಗವನ್ನು ಒಳಗೊಂಡೂ ಅವುಗಳ ಹಿಡಿತದಿಂದ ಬಿಡುಗಡೆ ಹೊಂದಬೇಕಾಗಿದೆ. ಸಂಪಾದನೆ ಮತ್ತು ಸಂವೇದನೆಗಳ ನಡುವೆ ಸಮನ್ವಯ ಸಾಧಿಸಬೇಕಿದೆ’ ಎಂದರು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್, ‘ಈಗಿನ ಕನ್ನಡ ಸಿನಿಮಾಗಳಲ್ಲಿ ಹಿಂಸೆಯೇ ವಿಜೃಂಭಿಸುತ್ತಿದ್ದು, ತತ್ವ–ಸಿದ್ಧಾಂತಗಳಿಲ್ಲದ ಸಿನಿಮಾಗಳು ಯುವಜನತೆ ಮೇಲೆ ದುಷ್ಪರಿಣಾಮ ಬೀರುತ್ತಿವೆ’ ಎಂದು ವಿಷಾದ ವ್ಯಕ್ತ ಪಡಿಸಿದರು.<br /> <br /> ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ.ಪೊನ್ನಪ್ಪ ಮಾತನಾಡಿ, ಸಿನಿಮಾದ ಜೀವಾಳವಾದ ಕಥೆಯೆಡೆಗೆ ನಿರ್ಮಾಪಕರ ಮತ್ತು ನಿರ್ದೇಶಕರ ಗಮನವಿಲ್ಲದಿರುವುದು ದುರಂತ ಎಂದರು.<br /> <br /> ವಿಚಾರ ಸಂಕಿರಣದಲ್ಲಿ ‘ಸುಧಾ’ ವಾರಪತ್ರಿಕೆ ಸಹಾಯಕ ಸಂಪಾದಕ ಬಿ.ಎಂ.- ಹನೀಫ್ ‘ಪ್ರಾದೇಶಿಕ ಸಿನಿಮಾಗಳ ರಾಷ್ಟ್ರೀಯ, ಅಂತರರಾಷ್ಟ್ರೀಯ ನೆಲೆ –ಬೆಲೆ’ ವಿಷಯ ಕುರಿತು ಮಾತನಾಡಿ, ಕನ್ನಡ ಸಿನಿಮಾಗಳು ದುಬಾರಿ ಮಲ್ಟಿ ಫ್ಲೆಕ್ಸ್ ಸಂಸ್ಕೃತಿಯಿಂದ ಹೊರಬರಬೇಕು ಎಂದರು.<br /> <br /> ‘ಸ್ಥಳೀಯ ಸಿನಿಮಾ: ಜಾಗತಿಕ ಪರಿಣಾಮ’ ವಿಷಯ ಕುರಿತು ಮಾತನಾಡಿದ ಕರ್ನಾಟಕ ಕಾರ್ಯನಿರತ<br /> ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಮೊದಲಿಯಾರ್, ಸ್ಥಳೀಯ ಸಿನಿಮಾಗಳು ಜಾಗತಿಕ ಮಾನ್ಯತೆ ಪಡೆಯುವಲ್ಲಿ ಪ್ರಾದೇಶಿಕ ಸಿನಿಮಾ ರಂಗದ ಪ್ರಯತ್ನ ಶೂನ್ಯ ಎಂದರು.<br /> <br /> ನಿರ್ಮಾಪಕ ಸಾ.ರಾ.ಗೋವಿಂದು, ವಾರ್ತಾ ಇಲಾಖೆ ಮಾಜಿ ನಿರ್ದೇಶಕ ಕೆ.ವಿ.ಆರ್.ಟ್ಯಾಗೂರ್, ಚಿತ್ರ ನಿರ್ದೇಶಕ ಬಿ.ಎಂ.ಗಿರಿರಾಜ್ ಮಾತನಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್.ಡಿ.ಗಂಗರಾಜು, ಚಿತ್ರ ನಿರ್ದೇಶಕ ಎಚ್.ಎನ್. ನರಹರಿರಾವ್, ವಾರ್ತಾ ಇಲಾಖೆ ಕಾರ್ಯ ದರ್ಶಿ ಕೆ.ಆರ್. ನಿರಂಜನ್, ಪತ್ರಕರ್ತ ಜೋಗಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>