<p><strong>ಬೆಂಗಳೂರು:</strong> 2010-11ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿಗೆ ಹೈಕೋರ್ಟ್ ತಡೆ ನೀಡಿ ಮಂಗಳವಾರ ಆದೇಶಿಸಿದೆ.ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಉಪೇಂದ್ರ ಅಭಿನಯದ `ಸೂಪರ್~ ಚಿತ್ರವನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ನಟಿ, ನಿರ್ಮಾಪಕಿ ಪ್ರಿಯಾ ಹಾಸನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಈ ಆದೇಶ ಹೊರಡಿಸಿದ್ದಾರೆ.<br /> <br /> ನಿಯಮಗಳನ್ನು ಗಾಳಿಗೆ ತೂರಿ `ಸೂಪರ್~ ಚಿತ್ರವನ್ನು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎನ್ನುವುದು ಅವರ ಆರೋಪ. <br /> <br /> <strong>ಅರ್ಜಿದಾರರ ದೂರೇನು?:</strong> ತಾವು ನಿರ್ದೇಶಿಸಿ, ನಟಿಸಿರುವ `ಬಿಂದಾಸ್ ಹುಡುಗಿ~ ಚಿತ್ರವನ್ನು ಆಯ್ಕೆ ಸಮಿತಿಯು ಕಡೆಗಣಿಸಿದೆ ಎನ್ನುವುದು ಪ್ರಿಯಾ ಅವರ ದೂರು. `ಸೂಪರ್~ ಚಿತ್ರದ ಛಾಯಾಗ್ರಾಹಕ ಅಶೋಕ ಕಶ್ಯಪ್ ಅವರು ಆಯ್ಕೆ ಸಮಿತಿಯಲ್ಲಿ ಇದ್ದರು. ಅದೇ ಚಿತ್ರಕ್ಕೆ ಪ್ರಶಸ್ತಿ ಬಂದಿದೆ. ಇದು ಸ್ವಜನ ಪಕ್ಷಪಾತ ಎಂದು ಅವರು ಆರೋಪಿಸಿದ್ದಾರೆ.<br /> <br /> ಬಿಂದಾಸ್ ಹುಡುಗಿ ಚಿತ್ರದ ಸಾಹಸ ದೃಶ್ಯಗಳಲ್ಲಿ `ಡ್ಯೂಪ್~ ನೆರವಿಲ್ಲದೆ ಚಿತ್ರದ ನಾಯಕ, ನಾಯಕಿಯರೇ ಪಾಲ್ಗೊಂಡಿದ್ದಾರೆ. `ನಾನೇ ಖುದ್ದಾಗಿ ಧ್ವನಿ ನೀಡಿದ್ದೇನೆ. ಸೂಪರ್ಗೆ ಹೋಲಿಸಿದರೆ ಎಲ್ಲ ದೃಷ್ಟಿಯಿಂದಲೂ ಒಳ್ಳೆಯ ಚಿತ್ರ. ಆದರೆ ಪ್ರಶಸ್ತಿಗೆ ಆಯ್ಕೆ ಆಗಿಲ್ಲ~ ಎಂದು ಅವರು ತಿಳಿಸಿದ್ದಾರೆ. ಇದನ್ನು ಮಾನ್ಯ ಮಾಡಿದ ನ್ಯಾಯಮೂರ್ತಿಗಳು, ಕೋರ್ಟ್ನ ಮುಂದಿನ ಆದೇಶದವರೆಗೆ ಪಟ್ಟಿಗೆ ತಡೆ ನೀಡಿದರು. ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 2010-11ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿಗೆ ಹೈಕೋರ್ಟ್ ತಡೆ ನೀಡಿ ಮಂಗಳವಾರ ಆದೇಶಿಸಿದೆ.ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಉಪೇಂದ್ರ ಅಭಿನಯದ `ಸೂಪರ್~ ಚಿತ್ರವನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ನಟಿ, ನಿರ್ಮಾಪಕಿ ಪ್ರಿಯಾ ಹಾಸನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಈ ಆದೇಶ ಹೊರಡಿಸಿದ್ದಾರೆ.<br /> <br /> ನಿಯಮಗಳನ್ನು ಗಾಳಿಗೆ ತೂರಿ `ಸೂಪರ್~ ಚಿತ್ರವನ್ನು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎನ್ನುವುದು ಅವರ ಆರೋಪ. <br /> <br /> <strong>ಅರ್ಜಿದಾರರ ದೂರೇನು?:</strong> ತಾವು ನಿರ್ದೇಶಿಸಿ, ನಟಿಸಿರುವ `ಬಿಂದಾಸ್ ಹುಡುಗಿ~ ಚಿತ್ರವನ್ನು ಆಯ್ಕೆ ಸಮಿತಿಯು ಕಡೆಗಣಿಸಿದೆ ಎನ್ನುವುದು ಪ್ರಿಯಾ ಅವರ ದೂರು. `ಸೂಪರ್~ ಚಿತ್ರದ ಛಾಯಾಗ್ರಾಹಕ ಅಶೋಕ ಕಶ್ಯಪ್ ಅವರು ಆಯ್ಕೆ ಸಮಿತಿಯಲ್ಲಿ ಇದ್ದರು. ಅದೇ ಚಿತ್ರಕ್ಕೆ ಪ್ರಶಸ್ತಿ ಬಂದಿದೆ. ಇದು ಸ್ವಜನ ಪಕ್ಷಪಾತ ಎಂದು ಅವರು ಆರೋಪಿಸಿದ್ದಾರೆ.<br /> <br /> ಬಿಂದಾಸ್ ಹುಡುಗಿ ಚಿತ್ರದ ಸಾಹಸ ದೃಶ್ಯಗಳಲ್ಲಿ `ಡ್ಯೂಪ್~ ನೆರವಿಲ್ಲದೆ ಚಿತ್ರದ ನಾಯಕ, ನಾಯಕಿಯರೇ ಪಾಲ್ಗೊಂಡಿದ್ದಾರೆ. `ನಾನೇ ಖುದ್ದಾಗಿ ಧ್ವನಿ ನೀಡಿದ್ದೇನೆ. ಸೂಪರ್ಗೆ ಹೋಲಿಸಿದರೆ ಎಲ್ಲ ದೃಷ್ಟಿಯಿಂದಲೂ ಒಳ್ಳೆಯ ಚಿತ್ರ. ಆದರೆ ಪ್ರಶಸ್ತಿಗೆ ಆಯ್ಕೆ ಆಗಿಲ್ಲ~ ಎಂದು ಅವರು ತಿಳಿಸಿದ್ದಾರೆ. ಇದನ್ನು ಮಾನ್ಯ ಮಾಡಿದ ನ್ಯಾಯಮೂರ್ತಿಗಳು, ಕೋರ್ಟ್ನ ಮುಂದಿನ ಆದೇಶದವರೆಗೆ ಪಟ್ಟಿಗೆ ತಡೆ ನೀಡಿದರು. ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>