ಬೆಂಗಳೂರು: ರಾಜಾಜಿನಗರದ ಎಂ.ಇ. ಎಸ್.ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ವತಿಯಿಂದ ಇತ್ತೀಚೆಗೆ `ಸಿರಿನುಡಿ' ಸಾಂಸ್ಕೃತಿಕ ಉತ್ಸವವನ್ನು ಆಚರಿಸಲಾಯಿತು.
ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ.ರಾಜಾರಾಮ್, ಸಂಚಾಲಕಿ ವಜ್ರೇಶ್ವರಿ ಎಸ್.ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.