<p><strong>ಬೆಂಗಳೂರು:</strong> `ಹೈನುಗಾರಿಕೆಯಲ್ಲಿ ಮಹಿಳೆಯರ ಪಾತ್ರ ಮಹತ್ತರ ವಾಗಿದ್ದು, ಅವರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡುವ ಮೂಲಕ ಅಭಿವೃದ್ದಿ ಹೊಂದಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲ ಹಾಲು ಉತ್ಪಾದಕರ ಸಂಘಗಳು ಶ್ರಮ ವಹಿಸಬೇಕು~ ಎಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಆರ್.ಕೆ. ರಮೇಶ್ ಶ್ಲಾಘಿಸಿದರು.<br /> <br /> ಸರ್ಜಾಪುರ ಹಾಲು ಉತ್ಪಾದಕರ ಸಹಕಾರ ಸಂಘ ಮಂಗಳವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ಆನೇಕಲ್ ತಾಲ್ಲೂಕಿನಲ್ಲಿ ಇರುವ ಒಟ್ಟು 153 ಹಾಲು ಉತ್ಪಾದಕರ ಸಂಘಗಳಲ್ಲಿ, ಸರ್ಜಾಪುರ ಹಾಲು ಉತ್ಪಾದಕರ ಒಕ್ಕೂಟವು ಸಂಘದ ಸದಸ್ಯರಿಗೆ ಉತ್ತಮ ಸೌಲಭ್ಯ ನೀಡುವಲ್ಲಿ ಮುಂದಿದೆ~ ಎಂದು ಅವರು ಹೇಳಿದರು.<br /> <br /> ಒಕ್ಕೂಟದ ಅಧ್ಯಕ್ಷ ಮುನಿರಾಜು ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಒಕ್ಕೂಟದ ಸದಸ್ಯರ ಮಕ್ಕಳು ಮತ್ತು ಪ್ರಗತಿಪರ ರೈತ ಎಸ್.ಪಿ.ಗೋಪಾಲಪ್ಪ ದಂಪತಿಯನ್ನು ಸನ್ಮಾನಿಸಲಾಯಿತು.<br /> <br /> ಸಂಘದ ಸದಸ್ಯರಾದ ನಾರಾಯಣರೆಡ್ಡಿ, ರತ್ನ ಶ್ರೀರಾಮುಲು, ಜಿ. ನಾಗರಾಜು, ಶ್ರೀಧರ, ಗೋಪಾಲರೆಡ್ಡಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಹೈನುಗಾರಿಕೆಯಲ್ಲಿ ಮಹಿಳೆಯರ ಪಾತ್ರ ಮಹತ್ತರ ವಾಗಿದ್ದು, ಅವರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡುವ ಮೂಲಕ ಅಭಿವೃದ್ದಿ ಹೊಂದಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲ ಹಾಲು ಉತ್ಪಾದಕರ ಸಂಘಗಳು ಶ್ರಮ ವಹಿಸಬೇಕು~ ಎಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಆರ್.ಕೆ. ರಮೇಶ್ ಶ್ಲಾಘಿಸಿದರು.<br /> <br /> ಸರ್ಜಾಪುರ ಹಾಲು ಉತ್ಪಾದಕರ ಸಹಕಾರ ಸಂಘ ಮಂಗಳವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ಆನೇಕಲ್ ತಾಲ್ಲೂಕಿನಲ್ಲಿ ಇರುವ ಒಟ್ಟು 153 ಹಾಲು ಉತ್ಪಾದಕರ ಸಂಘಗಳಲ್ಲಿ, ಸರ್ಜಾಪುರ ಹಾಲು ಉತ್ಪಾದಕರ ಒಕ್ಕೂಟವು ಸಂಘದ ಸದಸ್ಯರಿಗೆ ಉತ್ತಮ ಸೌಲಭ್ಯ ನೀಡುವಲ್ಲಿ ಮುಂದಿದೆ~ ಎಂದು ಅವರು ಹೇಳಿದರು.<br /> <br /> ಒಕ್ಕೂಟದ ಅಧ್ಯಕ್ಷ ಮುನಿರಾಜು ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಒಕ್ಕೂಟದ ಸದಸ್ಯರ ಮಕ್ಕಳು ಮತ್ತು ಪ್ರಗತಿಪರ ರೈತ ಎಸ್.ಪಿ.ಗೋಪಾಲಪ್ಪ ದಂಪತಿಯನ್ನು ಸನ್ಮಾನಿಸಲಾಯಿತು.<br /> <br /> ಸಂಘದ ಸದಸ್ಯರಾದ ನಾರಾಯಣರೆಡ್ಡಿ, ರತ್ನ ಶ್ರೀರಾಮುಲು, ಜಿ. ನಾಗರಾಜು, ಶ್ರೀಧರ, ಗೋಪಾಲರೆಡ್ಡಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>