<p><strong>ಬೆಂಗಳೂರು:</strong> ಸೂರ್ಯನಗರದ ಎಲ್ಲ ಹಂತಗಳ ಬಡಾವಣೆ ಮತ್ತು ಆನೇಕಲ್ ಪಟ್ಟಣಕ್ಕೆ ಕಾವೇರಿ ನೀರು ಸರಬರಾಜು ಮಾಡಲು 800 ಕೋಟಿ ರೂಪಾಯಿ ಮೊತ್ತದ ಯೋಜನೆ ಸಿದ್ಧ ಆಗಿದೆ ಎಂದು ವಸತಿ ಸಚಿವ ಅಂಬರೀಷ್ ಸೋಮವಾರ ಇಲ್ಲಿ ತಿಳಿಸಿದರು.<br /> <br /> ಶಿಂಷಾ ನದಿಯಿಂದ ಚನ್ನಪಟ್ಟಣದ ಇಗ್ಗಲೂರು ಅಣೆಕಟ್ಟೆಗೆ ನೀರು ಸರಬರಾಜು ಮಾಡಲಾಗುವುದು. ಅಲ್ಲಿಂದ 64 ಕಿ.ಮೀ ದೂರದ ಸೂರ್ಯನಗರ, ಆನೇಕಲ್ ಪಟ್ಟಣ ಮತ್ತು ಮಾರ್ಗಮಧ್ಯದ ಹಳ್ಳಿಗಳಿಗೆ ಕುಡಿಯುವ ನೀರು ಪಂಪ್ ಮಾಡಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.<br /> <br /> ವಾರ್ಷಿಕ ಎರಡು ಟಿ.ಎಂ.ಸಿ ಅಡಿ ನೀರು ಬೇಕಾಗುತ್ತದೆ. ಈ ಸಂಬಂಧ ಕಾವೇರಿ ನದಿ ನೀರು ಪ್ರಾಧಿಕಾರದಿಂದ ನೀರು ಹಂಚಿಕೆಗೆ ತಾತ್ವಿಕ ಅನುಮೋದನೆ ಪಡೆಯಬೇಕಾಗಿದೆ ಎಂದು ಅವರು ಹೇಳಿದರು.<br /> <br /> ಈ ಯೋಜನೆಯನ್ನು ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ವತಿಯಿಂದಲೇ ಕೈಗೆತ್ತಿಕೊಳ್ಳಲಾಗುವುದು. ಯೋಜನಾ ವರದಿ ಕೂಡ ಸಿದ್ಧ ಆಗಿದೆ ಎಂದು ಅವರು ವಿವರಿಸಿದರು.<br /> <br /> <strong>ಆಶ್ರಯ ಮನೆ:</strong> ಆಶ್ರಯ ಯೋಜನೆಯಡಿ ಕೈಗೆತ್ತಿಕೊಂಡಿರುವ ಮನೆ ನಿರ್ಮಾಣ ಯೋಜನೆಯನ್ನು ಈ ವರ್ಷ ಪೂರ್ಣಗೊಳಿಸಲಾಗುವುದು. ಈ ವರ್ಷ ಹೆಚ್ಚುವರಿಯಾಗಿ ಎರಡು ಲಕ್ಷ ಮನೆ ನಿರ್ಮಿಸುವ ಉದ್ದೇಶ ಇದ್ದು, ಆದಷ್ಟು ಬೇಗ ಫಲಾನುಭವಿಗಳನ್ನು ಗುರುತಿಸಲಾಗುವುದು ಎಂದು ಹೇಳಿದರು.<br /> <br /> <strong>ಮಂಡ್ಯದಲ್ಲಿ ಮೇಲ್ಸೇತುವೆ</strong><br /> ಸಂಚಾರ ದಟ್ಟಣೆ ಹೆಚ್ಚು ಇರುವ ಕಾರಣ ಮಂಡ್ಯ ನಗರದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಏಳು ಕಿ.ಮೀ ಉದ್ದದ ರಸ್ತೆ ಮೇಲ್ಸೇತುವೆ ನಿರ್ಮಿಸುವ ಉದ್ದೇಶ ಇದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವಸತಿ ಸಚಿವ ಅಂಬರೀಷ್ ಸೋಮವಾರ ಇಲ್ಲಿ ತಿಳಿಸಿದರು.</p>.<p>ಉಮ್ಮಡಹಳ್ಳಿ ಗೇಟ್ನಿಂದ ಸಿದ್ಧಯ್ಯನ ಕೊಪ್ಪಲುವರೆಗೆ ಮೇಲ್ಸೇತುವೆ ನಿರ್ಮಿಸುವ ಉದ್ದೇಶ ಇದೆ. ಇದಕ್ಕೆ ಸುಮಾರು 317 ಕೋಟಿ ರೂಪಾಯಿ ವೆಚ್ಚ ಆಗಲಿದ್ದು, ಬಜೆಟ್ನಲ್ಲಿ ಹಣ ಒದಗಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಕೋರಿರುವುದಾಗಿ ಅವರು ಹೇಳಿದರು.<br /> ಮಂಡ್ಯದಲ್ಲಿ ವರ್ತುಲ ರಸ್ತೆ ಅಥವಾ ಬೈಪಾಸ್ ರಸ್ತೆ ನಿರ್ಮಿಸುವ ಚಿಂತನೆ ಇತ್ತು.</p>.<p>ಆದರೆ, ಆ ಭಾಗದಲ್ಲಿ ನೀರಾವರಿ ಜಮೀನು ಇರುವ ಕಾರಣ ಭೂಸ್ವಾಧೀನ ಸಮಸ್ಯೆ ಆಗುತ್ತದೆ. ಈ ಕಾರಣಕ್ಕೆ ಈಗಿರುವ ರಸ್ತೆ ಮೇಲೆಯೇ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.<br /> <br /> ಬೆಂಗಳೂರು- ಮೈಸೂರು ನಡುವೆ ವಾಹನ ದಟ್ಟಣೆ ಹೆಚ್ಚಾಗಿದೆ. ಕೆಲವೊಮ್ಮೆ ಮಂಡ್ಯ ನಗರ ದಾಟುವುದಕ್ಕೆ ಒಂದು ಗಂಟೆ ಆಗುತ್ತದೆ. ಹೀಗಾಗಿ ಸುಗಮ ಸಂಚಾರಕ್ಕೆ ಮೇಲ್ಸೇತುವೆ ಒಂದೇ ಪರಿಹಾರ. ಈ ವಿಷಯ ಮುಖ್ಯಮಂತ್ರಿಗೂ ಗೊತ್ತಿದೆ ಎಂದು ಹೇಳಿದರು.<br /> <br /> ಬೆಂಗಳೂರು- ಮೈಸೂರು ನಡುವಿನ ಹೆದ್ದಾರಿಯಲ್ಲಿ ಬರುವ ರಾಮನಗರ, ಚನ್ನಪಟ್ಟಣದಲ್ಲೂ ಮೇಲ್ಸೇತುವೆ ನಿರ್ಮಿಸುವ ಅಗತ್ಯ ಇದೆ. ಆ ಬಗ್ಗೆ ಮುಖ್ಯಮಂತ್ರಿ ಪರಿಶೀಲಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೂರ್ಯನಗರದ ಎಲ್ಲ ಹಂತಗಳ ಬಡಾವಣೆ ಮತ್ತು ಆನೇಕಲ್ ಪಟ್ಟಣಕ್ಕೆ ಕಾವೇರಿ ನೀರು ಸರಬರಾಜು ಮಾಡಲು 800 ಕೋಟಿ ರೂಪಾಯಿ ಮೊತ್ತದ ಯೋಜನೆ ಸಿದ್ಧ ಆಗಿದೆ ಎಂದು ವಸತಿ ಸಚಿವ ಅಂಬರೀಷ್ ಸೋಮವಾರ ಇಲ್ಲಿ ತಿಳಿಸಿದರು.<br /> <br /> ಶಿಂಷಾ ನದಿಯಿಂದ ಚನ್ನಪಟ್ಟಣದ ಇಗ್ಗಲೂರು ಅಣೆಕಟ್ಟೆಗೆ ನೀರು ಸರಬರಾಜು ಮಾಡಲಾಗುವುದು. ಅಲ್ಲಿಂದ 64 ಕಿ.ಮೀ ದೂರದ ಸೂರ್ಯನಗರ, ಆನೇಕಲ್ ಪಟ್ಟಣ ಮತ್ತು ಮಾರ್ಗಮಧ್ಯದ ಹಳ್ಳಿಗಳಿಗೆ ಕುಡಿಯುವ ನೀರು ಪಂಪ್ ಮಾಡಲಾಗುವುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.<br /> <br /> ವಾರ್ಷಿಕ ಎರಡು ಟಿ.ಎಂ.ಸಿ ಅಡಿ ನೀರು ಬೇಕಾಗುತ್ತದೆ. ಈ ಸಂಬಂಧ ಕಾವೇರಿ ನದಿ ನೀರು ಪ್ರಾಧಿಕಾರದಿಂದ ನೀರು ಹಂಚಿಕೆಗೆ ತಾತ್ವಿಕ ಅನುಮೋದನೆ ಪಡೆಯಬೇಕಾಗಿದೆ ಎಂದು ಅವರು ಹೇಳಿದರು.<br /> <br /> ಈ ಯೋಜನೆಯನ್ನು ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ವತಿಯಿಂದಲೇ ಕೈಗೆತ್ತಿಕೊಳ್ಳಲಾಗುವುದು. ಯೋಜನಾ ವರದಿ ಕೂಡ ಸಿದ್ಧ ಆಗಿದೆ ಎಂದು ಅವರು ವಿವರಿಸಿದರು.<br /> <br /> <strong>ಆಶ್ರಯ ಮನೆ:</strong> ಆಶ್ರಯ ಯೋಜನೆಯಡಿ ಕೈಗೆತ್ತಿಕೊಂಡಿರುವ ಮನೆ ನಿರ್ಮಾಣ ಯೋಜನೆಯನ್ನು ಈ ವರ್ಷ ಪೂರ್ಣಗೊಳಿಸಲಾಗುವುದು. ಈ ವರ್ಷ ಹೆಚ್ಚುವರಿಯಾಗಿ ಎರಡು ಲಕ್ಷ ಮನೆ ನಿರ್ಮಿಸುವ ಉದ್ದೇಶ ಇದ್ದು, ಆದಷ್ಟು ಬೇಗ ಫಲಾನುಭವಿಗಳನ್ನು ಗುರುತಿಸಲಾಗುವುದು ಎಂದು ಹೇಳಿದರು.<br /> <br /> <strong>ಮಂಡ್ಯದಲ್ಲಿ ಮೇಲ್ಸೇತುವೆ</strong><br /> ಸಂಚಾರ ದಟ್ಟಣೆ ಹೆಚ್ಚು ಇರುವ ಕಾರಣ ಮಂಡ್ಯ ನಗರದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಏಳು ಕಿ.ಮೀ ಉದ್ದದ ರಸ್ತೆ ಮೇಲ್ಸೇತುವೆ ನಿರ್ಮಿಸುವ ಉದ್ದೇಶ ಇದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವಸತಿ ಸಚಿವ ಅಂಬರೀಷ್ ಸೋಮವಾರ ಇಲ್ಲಿ ತಿಳಿಸಿದರು.</p>.<p>ಉಮ್ಮಡಹಳ್ಳಿ ಗೇಟ್ನಿಂದ ಸಿದ್ಧಯ್ಯನ ಕೊಪ್ಪಲುವರೆಗೆ ಮೇಲ್ಸೇತುವೆ ನಿರ್ಮಿಸುವ ಉದ್ದೇಶ ಇದೆ. ಇದಕ್ಕೆ ಸುಮಾರು 317 ಕೋಟಿ ರೂಪಾಯಿ ವೆಚ್ಚ ಆಗಲಿದ್ದು, ಬಜೆಟ್ನಲ್ಲಿ ಹಣ ಒದಗಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಕೋರಿರುವುದಾಗಿ ಅವರು ಹೇಳಿದರು.<br /> ಮಂಡ್ಯದಲ್ಲಿ ವರ್ತುಲ ರಸ್ತೆ ಅಥವಾ ಬೈಪಾಸ್ ರಸ್ತೆ ನಿರ್ಮಿಸುವ ಚಿಂತನೆ ಇತ್ತು.</p>.<p>ಆದರೆ, ಆ ಭಾಗದಲ್ಲಿ ನೀರಾವರಿ ಜಮೀನು ಇರುವ ಕಾರಣ ಭೂಸ್ವಾಧೀನ ಸಮಸ್ಯೆ ಆಗುತ್ತದೆ. ಈ ಕಾರಣಕ್ಕೆ ಈಗಿರುವ ರಸ್ತೆ ಮೇಲೆಯೇ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.<br /> <br /> ಬೆಂಗಳೂರು- ಮೈಸೂರು ನಡುವೆ ವಾಹನ ದಟ್ಟಣೆ ಹೆಚ್ಚಾಗಿದೆ. ಕೆಲವೊಮ್ಮೆ ಮಂಡ್ಯ ನಗರ ದಾಟುವುದಕ್ಕೆ ಒಂದು ಗಂಟೆ ಆಗುತ್ತದೆ. ಹೀಗಾಗಿ ಸುಗಮ ಸಂಚಾರಕ್ಕೆ ಮೇಲ್ಸೇತುವೆ ಒಂದೇ ಪರಿಹಾರ. ಈ ವಿಷಯ ಮುಖ್ಯಮಂತ್ರಿಗೂ ಗೊತ್ತಿದೆ ಎಂದು ಹೇಳಿದರು.<br /> <br /> ಬೆಂಗಳೂರು- ಮೈಸೂರು ನಡುವಿನ ಹೆದ್ದಾರಿಯಲ್ಲಿ ಬರುವ ರಾಮನಗರ, ಚನ್ನಪಟ್ಟಣದಲ್ಲೂ ಮೇಲ್ಸೇತುವೆ ನಿರ್ಮಿಸುವ ಅಗತ್ಯ ಇದೆ. ಆ ಬಗ್ಗೆ ಮುಖ್ಯಮಂತ್ರಿ ಪರಿಶೀಲಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>