<p><strong>ಮಹದೇವಪುರ:</strong> ಕ್ಷೇತ್ರದ ವರ್ತೂರು ಗ್ರಾಮದ ಬಳಿ ಕೆರೆ ನೀರಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶಿಥಿಲಾವಸ್ಥೆಯಲ್ಲಿದೆ. ಸೇತುವೆಯ ಎರಡು ಬದಿಯ ತಡೆಗೋಡೆ ಬಿರುಕು ಬಿಟ್ಟಿದ್ದು ಈಗಲೋ ಆಗಲೋ ಮುರಿದು ಬೀಳುವ ಸ್ಥಿತಿಯಲ್ಲಿದೆ.<br /> <br /> ಅಲ್ಲದೆ, ಸೇತುವೆಯ ಮೇಲಿನ ಪಾದಚಾರಿ ಮಾರ್ಗವೂ ಕುಸಿದು ಬಿದ್ದಿದೆ. ಇದರಿಂದಾಗಿ ಸಾರ್ವಜನಿಕರು ಸರಾಗವಾಗಿ ಓಡಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ.ಆರೇಳು ವರ್ಷಗಳ ಹಿಂದೆಯೇ ನಿರ್ಮಾಣಗೊಂಡ ಈ ಸೇತುವೆಯು ಸುಸಜ್ಜಿತವಾಗಿಲ್ಲ ಎನ್ನುವುದು ಸ್ಥಳೀಯರ ಅಭಿಪ್ರಾಯ.<br /> <br /> ಈ ಸೇತುವೆಯ ಪಕ್ಕದಲ್ಲಿಯೇ ಮೈಸೂರು ಮಹಾರಾಜರ ಕಾಲಾವಧಿಯಲ್ಲಿ ನಿರ್ಮಾಣಗೊಂಡಿದ್ದ ಹಳೆ ಸೇತುವೆಯೂ ಇದೆ. ಕೆಲ ವರ್ಷಗಳ ಹಿಂದೆ ಅದು ಶಿಥಿಲಗೊಂಡು ಕುಸಿದು ಬೀಳುತ್ತಿದ್ದಂತೆಯೇ ಈ ಸೇತುವೆಯನ್ನು ನಿರ್ಮಾಣ ಮಾಡಲಾಯಿತು. ಆದರೆ, ಸೇತುವೆಯ ಕಾಮಗಾರಿ ಕಳಪೆಯಾದ ಹಿನ್ನೆಲೆಯಲ್ಲಿ ಸೇತುವೆ ಇದೀಗ ಅಲ್ಲಲ್ಲಿ ಕುಸಿದು ಬೀಳುತ್ತಿದೆ ಎಂದು ಸ್ಥಳೀಯರು ದೂರುತ್ತಾರೆ.<br /> <br /> ಇದಕ್ಕೂ ಮುನ್ನ ಸೇತುವೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿಯೇ ಪಾದಚಾರಿ ಮಾರ್ಗ ಕುಸಿದು ಬಿದ್ದಿತ್ತು. ಆದರೂ, ಗುತ್ತಿಗೆದಾರರು ಅದನ್ನು ಸರಿಪಡಿಸುವ ಬಗ್ಗೆ ಕಿಂಚಿತ್ತೂ ಗಮನಹರಿಸಲಿಲ್ಲ. ಹಾಗಾಗಿಯೇ ಸೇತುವೆ ಹಂತ- ಹಂತವಾಗಿ ಕುಸಿದು ಬೀಳುತ್ತಿದೆ ಎನ್ನಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇವಪುರ:</strong> ಕ್ಷೇತ್ರದ ವರ್ತೂರು ಗ್ರಾಮದ ಬಳಿ ಕೆರೆ ನೀರಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶಿಥಿಲಾವಸ್ಥೆಯಲ್ಲಿದೆ. ಸೇತುವೆಯ ಎರಡು ಬದಿಯ ತಡೆಗೋಡೆ ಬಿರುಕು ಬಿಟ್ಟಿದ್ದು ಈಗಲೋ ಆಗಲೋ ಮುರಿದು ಬೀಳುವ ಸ್ಥಿತಿಯಲ್ಲಿದೆ.<br /> <br /> ಅಲ್ಲದೆ, ಸೇತುವೆಯ ಮೇಲಿನ ಪಾದಚಾರಿ ಮಾರ್ಗವೂ ಕುಸಿದು ಬಿದ್ದಿದೆ. ಇದರಿಂದಾಗಿ ಸಾರ್ವಜನಿಕರು ಸರಾಗವಾಗಿ ಓಡಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ.ಆರೇಳು ವರ್ಷಗಳ ಹಿಂದೆಯೇ ನಿರ್ಮಾಣಗೊಂಡ ಈ ಸೇತುವೆಯು ಸುಸಜ್ಜಿತವಾಗಿಲ್ಲ ಎನ್ನುವುದು ಸ್ಥಳೀಯರ ಅಭಿಪ್ರಾಯ.<br /> <br /> ಈ ಸೇತುವೆಯ ಪಕ್ಕದಲ್ಲಿಯೇ ಮೈಸೂರು ಮಹಾರಾಜರ ಕಾಲಾವಧಿಯಲ್ಲಿ ನಿರ್ಮಾಣಗೊಂಡಿದ್ದ ಹಳೆ ಸೇತುವೆಯೂ ಇದೆ. ಕೆಲ ವರ್ಷಗಳ ಹಿಂದೆ ಅದು ಶಿಥಿಲಗೊಂಡು ಕುಸಿದು ಬೀಳುತ್ತಿದ್ದಂತೆಯೇ ಈ ಸೇತುವೆಯನ್ನು ನಿರ್ಮಾಣ ಮಾಡಲಾಯಿತು. ಆದರೆ, ಸೇತುವೆಯ ಕಾಮಗಾರಿ ಕಳಪೆಯಾದ ಹಿನ್ನೆಲೆಯಲ್ಲಿ ಸೇತುವೆ ಇದೀಗ ಅಲ್ಲಲ್ಲಿ ಕುಸಿದು ಬೀಳುತ್ತಿದೆ ಎಂದು ಸ್ಥಳೀಯರು ದೂರುತ್ತಾರೆ.<br /> <br /> ಇದಕ್ಕೂ ಮುನ್ನ ಸೇತುವೆಯನ್ನು ಉದ್ಘಾಟಿಸಿದ ಸಂದರ್ಭದಲ್ಲಿಯೇ ಪಾದಚಾರಿ ಮಾರ್ಗ ಕುಸಿದು ಬಿದ್ದಿತ್ತು. ಆದರೂ, ಗುತ್ತಿಗೆದಾರರು ಅದನ್ನು ಸರಿಪಡಿಸುವ ಬಗ್ಗೆ ಕಿಂಚಿತ್ತೂ ಗಮನಹರಿಸಲಿಲ್ಲ. ಹಾಗಾಗಿಯೇ ಸೇತುವೆ ಹಂತ- ಹಂತವಾಗಿ ಕುಸಿದು ಬೀಳುತ್ತಿದೆ ಎನ್ನಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>