ಮಳೆಗಾಲದಲ್ಲಿ ತರಕಾರಿ ಬೆಲೆ ತುಸು ಕಡಿಮೆ ಆಗುವುದು ವಾಡಿಕೆ. ಆದರೆ, ಈ ಬಾರಿ ಮಳೆಯಿಂದಾಗಿ ಸೊಪ್ಪನ್ನು ಬೆಳೆಯುವ ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯ ತಾಲ್ಲೂಕುಗಳ ಜಮೀನುಗಳಲ್ಲಿ ನೀರು ನಿಂತಿದೆ. ಅಲ್ಲಿ ಬೆಳೆದ ಕೊತ್ತಂಬರಿ, ಪಾಲಕ್, ಮೆಂತ್ಯೆ, ದಂಟು, ಪುದೀನಾ, ಸಬ್ಬಕ್ಕಿ, ಪುಂಡೆ ಸೊಪ್ಪಿನ ಫಸಲು ಹಾಳಾಗಿದೆ. ಇದರಿಂದಾಗಿ ನಗರದ ಮಾರುಕಟ್ಟೆಗಳಿಗೆ ಅವುಗಳ ಕೊರತೆ ಕಂಡುಬರುತ್ತಿದೆ.