<p>ಬೆಂಗಳೂರು: `ದೇಶದಲ್ಲಿ ಶೇ 8ರಷ್ಟು ಸಂಘಟಿತ ಕಾರ್ಮಿಕರಿದ್ದು, ಉಳಿದ ಶೇ 92 ರಷ್ಟು ಮಂದಿ ಕಾರ್ಮಿಕರು ಅಸಂಘಟಿತ ವಲಯದಲ್ಲಿದ್ದಾರೆ. ಈ ವಲಯವು ಪಿಂಚಣಿ, ಇಎಸ್ಐ ಸೇರಿದಂತೆ ಇತರೆ ಮೂಲ ಸೌಲಭ್ಯಗಳಿಂದ ವಂಚಿತಗೊಂಡಿದೆ~ ಎಂದು ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ ವಿಷಾದ ವ್ಯಕ್ತಪಡಿಸಿದರು.<br /> <br /> ರಾಷ್ಟ್ರೀಯ ಸುರಕ್ಷತಾ ಸಮಿತಿ ನಗರದ ನಿಮ್ಹಾನ್ಸ್ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಹಾಗೂ ಆರೋಗ್ಯ ಮತ್ತು ಕೆಲಸದ ಪರಿಸರ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ರಾಸಾಯಾನಿಕ ಮತ್ತು ಸ್ಟೀಲ್ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಸಮರ್ಪಕವಾಗಿ ಒದಗಿಸಬೇಕು. ಕೆಲವೊಮ್ಮೆ ಮಾಲೀಕರು ಈ ಪರಿಕರಗಳನ್ನು ದುಬಾರಿಯೆಂದು ಕಾರ್ಮಿಕರ ಆರೋಗ್ಯವನ್ನು ನಿರ್ಲಕ್ಷ್ಯಿಸಬಾರದು~ ಎಂದು ಸಲಹೆ ನೀಡಿದ ಅವರು, ` ಕಾರ್ಮಿಕರ ಕಾರ್ಯದಕ್ಷತೆಯಿಂದ ಮಾಲೀಕರು ಮತ್ತು ಕಂಪೆನಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು~ ಎಂದು ಒತ್ತಾಯಿಸಿದರು.<br /> <br /> ಇಎಸ್ಐ ನಿರ್ದೇಶಕ ರಹೀಂ ಉನ್ನಿಸಾ, ರಾಷ್ಟ್ರೀಯ ಸುರಕ್ಷತಾ ಪರಿಷತ್ ಅಧ್ಯಕ್ಷ ಎ.ಎಸ್.ಲಕ್ಷ್ಮಣ್, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸಿ.ಎಸ್.ನಾರಾಯಣಸ್ವಾಮಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ದೇಶದಲ್ಲಿ ಶೇ 8ರಷ್ಟು ಸಂಘಟಿತ ಕಾರ್ಮಿಕರಿದ್ದು, ಉಳಿದ ಶೇ 92 ರಷ್ಟು ಮಂದಿ ಕಾರ್ಮಿಕರು ಅಸಂಘಟಿತ ವಲಯದಲ್ಲಿದ್ದಾರೆ. ಈ ವಲಯವು ಪಿಂಚಣಿ, ಇಎಸ್ಐ ಸೇರಿದಂತೆ ಇತರೆ ಮೂಲ ಸೌಲಭ್ಯಗಳಿಂದ ವಂಚಿತಗೊಂಡಿದೆ~ ಎಂದು ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ ವಿಷಾದ ವ್ಯಕ್ತಪಡಿಸಿದರು.<br /> <br /> ರಾಷ್ಟ್ರೀಯ ಸುರಕ್ಷತಾ ಸಮಿತಿ ನಗರದ ನಿಮ್ಹಾನ್ಸ್ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಹಾಗೂ ಆರೋಗ್ಯ ಮತ್ತು ಕೆಲಸದ ಪರಿಸರ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ರಾಸಾಯಾನಿಕ ಮತ್ತು ಸ್ಟೀಲ್ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಸಮರ್ಪಕವಾಗಿ ಒದಗಿಸಬೇಕು. ಕೆಲವೊಮ್ಮೆ ಮಾಲೀಕರು ಈ ಪರಿಕರಗಳನ್ನು ದುಬಾರಿಯೆಂದು ಕಾರ್ಮಿಕರ ಆರೋಗ್ಯವನ್ನು ನಿರ್ಲಕ್ಷ್ಯಿಸಬಾರದು~ ಎಂದು ಸಲಹೆ ನೀಡಿದ ಅವರು, ` ಕಾರ್ಮಿಕರ ಕಾರ್ಯದಕ್ಷತೆಯಿಂದ ಮಾಲೀಕರು ಮತ್ತು ಕಂಪೆನಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು~ ಎಂದು ಒತ್ತಾಯಿಸಿದರು.<br /> <br /> ಇಎಸ್ಐ ನಿರ್ದೇಶಕ ರಹೀಂ ಉನ್ನಿಸಾ, ರಾಷ್ಟ್ರೀಯ ಸುರಕ್ಷತಾ ಪರಿಷತ್ ಅಧ್ಯಕ್ಷ ಎ.ಎಸ್.ಲಕ್ಷ್ಮಣ್, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸಿ.ಎಸ್.ನಾರಾಯಣಸ್ವಾಮಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>