<p><strong>ಬೆಂಗಳೂರು</strong>: ಹೈಕೋರ್ಟ್ನ ನಿರ್ವಹಣೆಗೆ ಮೀಸಲಾದ ಹಣದಲ್ಲಿ ರೂ20 ಲಕ್ಷವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಹೈಕೋರ್ಟ್ನ ಹಣಕಾಸು ವಿಭಾಗದ ಸಹಾಯಕ ರಿಜಿಸ್ಟಾರ್ ಜಯರಾಂ ನಾಯಕ್ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.<br /> <br /> ಹನುಮಂತನಗರ ನಿವಾಸಿಯಾದ ಜಯರಾಂ, ಹೈಕೋರ್ಟ್ನ ಹಣಕಾಸು ವಿಭಾಗದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ನ್ಯಾಯಾಲಯದ ನಿರ್ವಹಣೆಗೆ ಮೀಸಲಾದ ಹಣದಲ್ಲಿ ರೂ20 ಲಕ್ಷಬಳಸಿಕೊಂಡಿದ್ದ ಆರೋಪ ಆತನ ಮೇಲಿತ್ತು. 3 ತಿಂಗಳ ಅವಧಿಯ ಹಣಕಾಸು ವ್ಯವಹಾರದ ಲೆಕ್ಕಪತ್ರಗಳನ್ನು ಪರಿಶೀಲಿಸಿದಾಗ ಆರೋಪ ಸಾಬೀತಾಗಿದೆ.<br /> <br /> ಮೂರು ತಿಂಗಳಿಗೆ ಹೈಕೋರ್ಟ್ನ ನಿರ್ವಹಣಾ ವೆಚ್ಚ ಸುಮಾರು 30 ಲಕ್ಷದಿಂದ 40 ಲಕ್ಷ ರೂಪಾಯಿ ಅಂತರದಲ್ಲಿರುತ್ತದೆ. ಆದರೆ, ಕಳೆದ ಮೂರು ತಿಂಗಳ ದಾಖಲೆ ಪತ್ರಗಳನ್ನು ಪರಿಶೀಲಿಸಿದಾಗ ರೂ20 ಲಕ್ಷ ಹೆಚ್ಚುವರಿ ವೆಚ್ಚವಾಗಿದೆ. ಈ ಬಗ್ಗೆ ಅನುಮಾನಗೊಂಡ ಹೈಕೋರ್ಟ್ ಸಿಬ್ಬಂದಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.<br /> <br /> ನಿಯಮದ ಪ್ರಕಾರ ನ್ಯಾಯಾಲಯದ ಹಣಕಾಸು ವ್ಯವಹಾರ 25 ಸಾವಿರ ರೂಪಾಯಿಗಿಂತ ಹೆಚ್ಚಿದ್ದರೆ, ಆ ಹಣವನ್ನು ಬಿಡುಗಡೆ ಮಾಡಲು ಮುಖ್ಯ ನ್ಯಾಯಾಧೀಶರ ಅನುಮತಿ ಬೇಕು. ಅನುಮತಿ ದೊರೆತ ನಂತರ ಚೆಕ್ಗೆ ಉಪ ರಿಜಿಸ್ಟಾರ್ ಅವರ ಸಹಿ ಆಗಬೇಕು. ಈ ಪ್ರಕರಣದಲ್ಲಿ ಆರೋಪಿ ಜಯರಾಂ, `ಮುಖ್ಯ ನಾಯಾಧೀಶರು ಅನುಮತಿ ನೀಡಿದ್ದಾರೆ' ಎಂದು ಸುಳ್ಳು ಹೇಳಿ ಉಪರಿಜಿಸ್ಟಾರ್ ಸಿ.ಚಂದ್ರಶೇಖರ್ ಅವರಿಂದ ಏ.22ರಂದು ರೂ5 ಲಕ್ಷದ 4 ಚೆಕ್ಗಳಿಗೆ ಸಹಿ ಮಾಡಿಸಿಕೊಂಡಿದ್ದ. ಬಳಿಕ ಆ ಚೆಕ್ಗಳನ್ನು ಮೇ.9ರಂದು ಭಾರತೀಯ ರಿಸರ್ವ್ ಬ್ಯಾಂಕ್ಗೆ ಸಲ್ಲಿಸಿ, ರೂ20 ಲಕ್ಷ ಹಣ ಡ್ರಾ ಮಾಡಿದ್ದಾನೆ ಎಂದು ವಿಧಾನಸೌಧ ಠಾಣೆ ಪೊಲೀಸರು ಮಾಹಿತಿ ನೀಡಿದರು.<br /> <br /> `ಬ್ಯಾಂಕ್ನಿಂದ ಡ್ರಾ ಮಾಡಿಕೊಂಡ ಹಣದಲ್ಲಿ ಸಾಲಗಾರರಿಗೆ ನೀಡಬೇಕಿದ್ದ ಹಣವನ್ನು ಹಿಂತಿರುಗಿಸಿದೆ. ಜತೆಗೆ ವಿವಿಧ ಬ್ಯಾಂಕ್ಗಳಲ್ಲಿ ಅಡವಿಟ್ಟಿದ್ದ ಪತ್ನಿಯ ಚಿನ್ನಾಭರಣಗಳನ್ನು ಬಿಡಿಸಿ ಕೊಟ್ಟಿದ್ದೇನೆ' ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೈಕೋರ್ಟ್ನ ನಿರ್ವಹಣೆಗೆ ಮೀಸಲಾದ ಹಣದಲ್ಲಿ ರೂ20 ಲಕ್ಷವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಹೈಕೋರ್ಟ್ನ ಹಣಕಾಸು ವಿಭಾಗದ ಸಹಾಯಕ ರಿಜಿಸ್ಟಾರ್ ಜಯರಾಂ ನಾಯಕ್ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.<br /> <br /> ಹನುಮಂತನಗರ ನಿವಾಸಿಯಾದ ಜಯರಾಂ, ಹೈಕೋರ್ಟ್ನ ಹಣಕಾಸು ವಿಭಾಗದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ನ್ಯಾಯಾಲಯದ ನಿರ್ವಹಣೆಗೆ ಮೀಸಲಾದ ಹಣದಲ್ಲಿ ರೂ20 ಲಕ್ಷಬಳಸಿಕೊಂಡಿದ್ದ ಆರೋಪ ಆತನ ಮೇಲಿತ್ತು. 3 ತಿಂಗಳ ಅವಧಿಯ ಹಣಕಾಸು ವ್ಯವಹಾರದ ಲೆಕ್ಕಪತ್ರಗಳನ್ನು ಪರಿಶೀಲಿಸಿದಾಗ ಆರೋಪ ಸಾಬೀತಾಗಿದೆ.<br /> <br /> ಮೂರು ತಿಂಗಳಿಗೆ ಹೈಕೋರ್ಟ್ನ ನಿರ್ವಹಣಾ ವೆಚ್ಚ ಸುಮಾರು 30 ಲಕ್ಷದಿಂದ 40 ಲಕ್ಷ ರೂಪಾಯಿ ಅಂತರದಲ್ಲಿರುತ್ತದೆ. ಆದರೆ, ಕಳೆದ ಮೂರು ತಿಂಗಳ ದಾಖಲೆ ಪತ್ರಗಳನ್ನು ಪರಿಶೀಲಿಸಿದಾಗ ರೂ20 ಲಕ್ಷ ಹೆಚ್ಚುವರಿ ವೆಚ್ಚವಾಗಿದೆ. ಈ ಬಗ್ಗೆ ಅನುಮಾನಗೊಂಡ ಹೈಕೋರ್ಟ್ ಸಿಬ್ಬಂದಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.<br /> <br /> ನಿಯಮದ ಪ್ರಕಾರ ನ್ಯಾಯಾಲಯದ ಹಣಕಾಸು ವ್ಯವಹಾರ 25 ಸಾವಿರ ರೂಪಾಯಿಗಿಂತ ಹೆಚ್ಚಿದ್ದರೆ, ಆ ಹಣವನ್ನು ಬಿಡುಗಡೆ ಮಾಡಲು ಮುಖ್ಯ ನ್ಯಾಯಾಧೀಶರ ಅನುಮತಿ ಬೇಕು. ಅನುಮತಿ ದೊರೆತ ನಂತರ ಚೆಕ್ಗೆ ಉಪ ರಿಜಿಸ್ಟಾರ್ ಅವರ ಸಹಿ ಆಗಬೇಕು. ಈ ಪ್ರಕರಣದಲ್ಲಿ ಆರೋಪಿ ಜಯರಾಂ, `ಮುಖ್ಯ ನಾಯಾಧೀಶರು ಅನುಮತಿ ನೀಡಿದ್ದಾರೆ' ಎಂದು ಸುಳ್ಳು ಹೇಳಿ ಉಪರಿಜಿಸ್ಟಾರ್ ಸಿ.ಚಂದ್ರಶೇಖರ್ ಅವರಿಂದ ಏ.22ರಂದು ರೂ5 ಲಕ್ಷದ 4 ಚೆಕ್ಗಳಿಗೆ ಸಹಿ ಮಾಡಿಸಿಕೊಂಡಿದ್ದ. ಬಳಿಕ ಆ ಚೆಕ್ಗಳನ್ನು ಮೇ.9ರಂದು ಭಾರತೀಯ ರಿಸರ್ವ್ ಬ್ಯಾಂಕ್ಗೆ ಸಲ್ಲಿಸಿ, ರೂ20 ಲಕ್ಷ ಹಣ ಡ್ರಾ ಮಾಡಿದ್ದಾನೆ ಎಂದು ವಿಧಾನಸೌಧ ಠಾಣೆ ಪೊಲೀಸರು ಮಾಹಿತಿ ನೀಡಿದರು.<br /> <br /> `ಬ್ಯಾಂಕ್ನಿಂದ ಡ್ರಾ ಮಾಡಿಕೊಂಡ ಹಣದಲ್ಲಿ ಸಾಲಗಾರರಿಗೆ ನೀಡಬೇಕಿದ್ದ ಹಣವನ್ನು ಹಿಂತಿರುಗಿಸಿದೆ. ಜತೆಗೆ ವಿವಿಧ ಬ್ಯಾಂಕ್ಗಳಲ್ಲಿ ಅಡವಿಟ್ಟಿದ್ದ ಪತ್ನಿಯ ಚಿನ್ನಾಭರಣಗಳನ್ನು ಬಿಡಿಸಿ ಕೊಟ್ಟಿದ್ದೇನೆ' ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>