<p><strong>ರಾಮನಗರ:</strong> ಜನರು ಕನಸನ್ನು ನನಸು ಮಾಡಿಕೊಳ್ಳಲು ಪ್ರಯತ್ನಿಸದಿದ್ದರೆ, ಕನಸು ಕಾಣುವುದರಲ್ಲಿಯೇ ಸಮಯ ವ್ಯರ್ಥವಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಮಹಾಸ್ವಾಮಿ ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕಿನ ಚಿಕ್ಕೇನಹಳ್ಳಿಯಲ್ಲಿ ಭಾನುವಾರ ಎಎಸ್ಬಿ ಟೌನ್ಶಿಪ್ ಮುಖ್ಯದ್ವಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯಾಂತ್ರೀಕೃತ ಬದುಕಿನಲ್ಲಿ ಮನುಷ್ಯನು ಮೌಲ್ಯಗಳ ಬದಲಾಗಿ ಹಣಕ್ಕೆ ಬೆಲೆ ಕೊಡುತ್ತಿದ್ದಾನೆ. ದುಡಿದ ಹಣದಲ್ಲಿ ಸ್ವಲ್ಪವನ್ನಾದರೂ ಸಮಾಜದ ಒಳಿತಿಗೆ ವಿನಿಯೋಗಿಸಬೇಕು ಎಂದರು.<br /> <br /> ಚಿತ್ರ ನಟ ದರ್ಶನ್ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲೂ ಏಳು ಬೀಳುಗಳಿರುತ್ತವೆ. ಅವೆಲ್ಲವನ್ನೂ ಸಮರ್ಥವಾಗಿ ನಿಭಾಯಿಸಿಕೊಂಡು ಹೋಗಬೇಕು. ಯಶಸ್ಸು ಸಿಕ್ಕಾಗ ಬೀಗದೆ, ಸೋಲು, ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳಬೇಕು. ತಾಳ್ಮೆ, ಸಂಯಮ, ಶಿಸ್ತನ್ನು ರೂಢಿಸಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ ಎಂದರು. <br /> <br /> ಇದೇ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ನೇತ್ರ ತಪಾಸಣಾ ಶಿಬಿರ ಮತ್ತು ವೆಂಕಿ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಮ್ಯೂಸಿಕ್ಸ್ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.<br /> <br /> ಬಂಡೆ ಮಠದ ಸಿದ್ದಲಿಂಗಸ್ವಾಮಿಗಳು, ಚಿತ್ರ ನಟ ಪ್ರೇಮ್, ವಿಜಯ್, ಯೋಗೀಶ್, ಶ್ರಿನಗರ ಕಿಟ್ಟಿ, ಕಂಠೀರವ ಸ್ಟೂಡಿಯೋ ಅಧ್ಯಕ್ಷ ಎಂ. ರುದ್ರೇಶ್, ಸಹನಾ ಕುಮಾರಿ, ಹಿರಿಯ ಕಲಾವಿದ ಲೋಹಿತಾಶ್ವ, ಕಿರುತೆರೆ ನಿರ್ದೇಶಕ ರವಿ ಕಿರಣ್, ನಿರ್ಮಾಪಕ ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಜನರು ಕನಸನ್ನು ನನಸು ಮಾಡಿಕೊಳ್ಳಲು ಪ್ರಯತ್ನಿಸದಿದ್ದರೆ, ಕನಸು ಕಾಣುವುದರಲ್ಲಿಯೇ ಸಮಯ ವ್ಯರ್ಥವಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಮಹಾಸ್ವಾಮಿ ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕಿನ ಚಿಕ್ಕೇನಹಳ್ಳಿಯಲ್ಲಿ ಭಾನುವಾರ ಎಎಸ್ಬಿ ಟೌನ್ಶಿಪ್ ಮುಖ್ಯದ್ವಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯಾಂತ್ರೀಕೃತ ಬದುಕಿನಲ್ಲಿ ಮನುಷ್ಯನು ಮೌಲ್ಯಗಳ ಬದಲಾಗಿ ಹಣಕ್ಕೆ ಬೆಲೆ ಕೊಡುತ್ತಿದ್ದಾನೆ. ದುಡಿದ ಹಣದಲ್ಲಿ ಸ್ವಲ್ಪವನ್ನಾದರೂ ಸಮಾಜದ ಒಳಿತಿಗೆ ವಿನಿಯೋಗಿಸಬೇಕು ಎಂದರು.<br /> <br /> ಚಿತ್ರ ನಟ ದರ್ಶನ್ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲೂ ಏಳು ಬೀಳುಗಳಿರುತ್ತವೆ. ಅವೆಲ್ಲವನ್ನೂ ಸಮರ್ಥವಾಗಿ ನಿಭಾಯಿಸಿಕೊಂಡು ಹೋಗಬೇಕು. ಯಶಸ್ಸು ಸಿಕ್ಕಾಗ ಬೀಗದೆ, ಸೋಲು, ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳಬೇಕು. ತಾಳ್ಮೆ, ಸಂಯಮ, ಶಿಸ್ತನ್ನು ರೂಢಿಸಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ ಎಂದರು. <br /> <br /> ಇದೇ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ನೇತ್ರ ತಪಾಸಣಾ ಶಿಬಿರ ಮತ್ತು ವೆಂಕಿ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಮ್ಯೂಸಿಕ್ಸ್ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.<br /> <br /> ಬಂಡೆ ಮಠದ ಸಿದ್ದಲಿಂಗಸ್ವಾಮಿಗಳು, ಚಿತ್ರ ನಟ ಪ್ರೇಮ್, ವಿಜಯ್, ಯೋಗೀಶ್, ಶ್ರಿನಗರ ಕಿಟ್ಟಿ, ಕಂಠೀರವ ಸ್ಟೂಡಿಯೋ ಅಧ್ಯಕ್ಷ ಎಂ. ರುದ್ರೇಶ್, ಸಹನಾ ಕುಮಾರಿ, ಹಿರಿಯ ಕಲಾವಿದ ಲೋಹಿತಾಶ್ವ, ಕಿರುತೆರೆ ನಿರ್ದೇಶಕ ರವಿ ಕಿರಣ್, ನಿರ್ಮಾಪಕ ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>