<p><strong>ಪೀಣ್ಯ ದಾಸರಹಳ್ಳಿ:</strong> ರಸ್ತೆಯುದ್ದಕ್ಕೂ ಎದ್ದು ಕಾಣುವ ಗುಂಡಿಗಳು. ಡಾಂಬರು ಕಾಣದೇ ವರ್ಷಗಳೇ ಕಳೆದಿವೆ. ಇದು ಮಾಗಡಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ದಾಸರಹಳ್ಳಿ ರಸ್ತೆಯ ಕತೆ.<br /> <br /> ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸವಾರರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆ ಬಂದರೆ ಈ ರಸ್ತೆಯ ಪರಿಸ್ಥಿತಿ ಹೇಳಲು ಅಸಾಧ್ಯ.<br /> <br /> ರಸ್ತೆಯ ದುರಾವಸ್ಥೆಯ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ ಎಂದು ನಿವಾಸಿಯೊಬ್ಬರು ದೂರಿದರು. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸಲು ಜನಪ್ರತಿನಿಧಿಗಳಿಗೆ ಬದ್ಧತೆಯಿಲ್ಲ. ಮತ ಕೇಳಲು ಮಾತ್ರ ಬರುತ್ತಾರೆ ಎಂದು ಆಕ್ಷೇಪಿಸಿದರು.<br /> <br /> ರುಕ್ಮಿಣಿ ನಗರ, ನೆಲಗದರನಹಳ್ಳಿ, ಎಚ್ಎಂಟಿ ಲೇ ಔಟ್, ಇಂದಿರಾ ನಗರ, ತಿಗಳರ ಪಾಳ್ಯ, ಪೀಣ್ಯ ಎರಡನೇ ಹಂತ, ಬ್ಯಾಡರಹಳ್ಳಿ, ಹೇರೋಹಳ್ಳಿ, ಕಾಚೋಹಳ್ಳಿ ಮತ್ತಿತರರ ಗ್ರಾಮಸ್ಥರು ಈ ಮುಖ್ಯ ಸಂಪರ್ಕ ರಸ್ತೆಯಲ್ಲಿ ಚಲಿಸುತ್ತಾರೆ. ಆದ್ದರಿಂದ ಈ ರಸ್ತೆಯನ್ನು ದುರಸ್ಥಿಗೊಳಿಸಲು ಸರ್ಕಾರ ಮುಂದಾಗಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ರಸ್ತೆಯುದ್ದಕ್ಕೂ ಎದ್ದು ಕಾಣುವ ಗುಂಡಿಗಳು. ಡಾಂಬರು ಕಾಣದೇ ವರ್ಷಗಳೇ ಕಳೆದಿವೆ. ಇದು ಮಾಗಡಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ದಾಸರಹಳ್ಳಿ ರಸ್ತೆಯ ಕತೆ.<br /> <br /> ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸವಾರರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆ ಬಂದರೆ ಈ ರಸ್ತೆಯ ಪರಿಸ್ಥಿತಿ ಹೇಳಲು ಅಸಾಧ್ಯ.<br /> <br /> ರಸ್ತೆಯ ದುರಾವಸ್ಥೆಯ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ ಎಂದು ನಿವಾಸಿಯೊಬ್ಬರು ದೂರಿದರು. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸಲು ಜನಪ್ರತಿನಿಧಿಗಳಿಗೆ ಬದ್ಧತೆಯಿಲ್ಲ. ಮತ ಕೇಳಲು ಮಾತ್ರ ಬರುತ್ತಾರೆ ಎಂದು ಆಕ್ಷೇಪಿಸಿದರು.<br /> <br /> ರುಕ್ಮಿಣಿ ನಗರ, ನೆಲಗದರನಹಳ್ಳಿ, ಎಚ್ಎಂಟಿ ಲೇ ಔಟ್, ಇಂದಿರಾ ನಗರ, ತಿಗಳರ ಪಾಳ್ಯ, ಪೀಣ್ಯ ಎರಡನೇ ಹಂತ, ಬ್ಯಾಡರಹಳ್ಳಿ, ಹೇರೋಹಳ್ಳಿ, ಕಾಚೋಹಳ್ಳಿ ಮತ್ತಿತರರ ಗ್ರಾಮಸ್ಥರು ಈ ಮುಖ್ಯ ಸಂಪರ್ಕ ರಸ್ತೆಯಲ್ಲಿ ಚಲಿಸುತ್ತಾರೆ. ಆದ್ದರಿಂದ ಈ ರಸ್ತೆಯನ್ನು ದುರಸ್ಥಿಗೊಳಿಸಲು ಸರ್ಕಾರ ಮುಂದಾಗಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>