<p>ಬೆಂಗಳೂರು: `ಜಾಗತಿಕ ತಾಪಮಾನ ತೀವ್ರವಾಗಿ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ ಹಸಿರು ವಲಯ ವೃದ್ಧಿಗೆ ತುರ್ತು ಗಮನ ನೀಡಬೇಕಿದೆ~ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನಗಳ ವಿಭಾಗದ ವಿಜ್ಞಾನಿ ಡಾ.ಹರೀಶ್ ಆರ್. ಭಟ್ ಹೇಳಿದರು.<br /> <br /> ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ಸಂಗ್ರಹಾಲಯವು ವಿಶ್ವ ಪರಿಸರ ದಿನದ ಪ್ರಯುಕ್ತ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ `ಭವಿಷ್ಯಕ್ಕಾಗಿ ಉತ್ತಮ ಪರಿಸರ~ ಎಂಬ ವಿಷಯ ಕುರಿತು ಅವರು ಮಾತನಾಡಿದರು.<br /> <br /> `ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕಿದೆ. ದೊಡ್ಡ ಪ್ರಮಾಣದಲ್ಲಿ ಸಸಿಗಳನ್ನು ಬೆಳೆಸಬೇಕು. ಅದರಲ್ಲೂ ವಿದ್ಯಾರ್ಥಿಗಳು ಹಾಗೂ ಯುವಜನತೆ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು~ ಎಂದರು.<br /> <br /> `ಸಸಿ ನೆಟ್ಟ ಬಳಿಕ ಮೂರು ವರ್ಷ ಕಾಲ ಅದನ್ನು ಪೋಷಿಸಿದರೆ ಆನಂತರ ಹತ್ತಾರು ವರ್ಷ ಯಾವುದೇ ನಿರ್ವಹಣೆಯಿಲ್ಲದಿದ್ದರೂ ಮರ ಉತ್ತಮವಾಗಿ ಬೆಳೆಯುತ್ತವೆ. ಜತೆಗೆ ಫಲವನ್ನೂ ನೀಡುತ್ತದೆ. ಪ್ರಾಣಿ, ಪಕ್ಷಿಗಳಿಗೆ ಆಶ್ರಯವೂ ದೊರೆತಂತಾಗುತ್ತದೆ~ ಎಂದು ಹೇಳಿದರು.<br /> <br /> `ಕೆಲ ದಶಕಗಳ ಹಿಂದೆ ನೀರಿನ ಬಾಟಲಿ ಹಿಡಿದು ಹೋಗುವವರನ್ನು ಅಪಹಾಸ್ಯ ಮಾಡುವಂತಾಗಿತ್ತು. ಆದರೆ ಇಂದು ಎಲ್ಲರೂ ಬಾಟಲಿ ನೀರು ಬಳಸುವ ಕಾಲ ಬಂದಿದೆ. ಅದೇ ರೀತಿ ಭವಿಷ್ಯದಲ್ಲಿ ಆರೋಗ್ಯವಂತ ವ್ಯಕ್ತಿಗಳು ಆಮ್ಲಜನಕದ ಸಿಲಿಂಡರ್ಗಳನ್ನು ಬಳಸುವ ಸ್ಥಿತಿ ಬರಬಾರದು. ಅದಕ್ಕಾಗಿ ಇಂದಿನಿಂದಲೇ ಗಿಡ- ಮರ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು~ ಎಂದರು.<br /> <br /> ಬಳಿಕ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಜಾಗತಿಕ ತಾಪಮಾನ ತೀವ್ರವಾಗಿ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ ಹಸಿರು ವಲಯ ವೃದ್ಧಿಗೆ ತುರ್ತು ಗಮನ ನೀಡಬೇಕಿದೆ~ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಪರಿಸರ ವಿಜ್ಞಾನಗಳ ವಿಭಾಗದ ವಿಜ್ಞಾನಿ ಡಾ.ಹರೀಶ್ ಆರ್. ಭಟ್ ಹೇಳಿದರು.<br /> <br /> ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ಸಂಗ್ರಹಾಲಯವು ವಿಶ್ವ ಪರಿಸರ ದಿನದ ಪ್ರಯುಕ್ತ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ `ಭವಿಷ್ಯಕ್ಕಾಗಿ ಉತ್ತಮ ಪರಿಸರ~ ಎಂಬ ವಿಷಯ ಕುರಿತು ಅವರು ಮಾತನಾಡಿದರು.<br /> <br /> `ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕಿದೆ. ದೊಡ್ಡ ಪ್ರಮಾಣದಲ್ಲಿ ಸಸಿಗಳನ್ನು ಬೆಳೆಸಬೇಕು. ಅದರಲ್ಲೂ ವಿದ್ಯಾರ್ಥಿಗಳು ಹಾಗೂ ಯುವಜನತೆ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು~ ಎಂದರು.<br /> <br /> `ಸಸಿ ನೆಟ್ಟ ಬಳಿಕ ಮೂರು ವರ್ಷ ಕಾಲ ಅದನ್ನು ಪೋಷಿಸಿದರೆ ಆನಂತರ ಹತ್ತಾರು ವರ್ಷ ಯಾವುದೇ ನಿರ್ವಹಣೆಯಿಲ್ಲದಿದ್ದರೂ ಮರ ಉತ್ತಮವಾಗಿ ಬೆಳೆಯುತ್ತವೆ. ಜತೆಗೆ ಫಲವನ್ನೂ ನೀಡುತ್ತದೆ. ಪ್ರಾಣಿ, ಪಕ್ಷಿಗಳಿಗೆ ಆಶ್ರಯವೂ ದೊರೆತಂತಾಗುತ್ತದೆ~ ಎಂದು ಹೇಳಿದರು.<br /> <br /> `ಕೆಲ ದಶಕಗಳ ಹಿಂದೆ ನೀರಿನ ಬಾಟಲಿ ಹಿಡಿದು ಹೋಗುವವರನ್ನು ಅಪಹಾಸ್ಯ ಮಾಡುವಂತಾಗಿತ್ತು. ಆದರೆ ಇಂದು ಎಲ್ಲರೂ ಬಾಟಲಿ ನೀರು ಬಳಸುವ ಕಾಲ ಬಂದಿದೆ. ಅದೇ ರೀತಿ ಭವಿಷ್ಯದಲ್ಲಿ ಆರೋಗ್ಯವಂತ ವ್ಯಕ್ತಿಗಳು ಆಮ್ಲಜನಕದ ಸಿಲಿಂಡರ್ಗಳನ್ನು ಬಳಸುವ ಸ್ಥಿತಿ ಬರಬಾರದು. ಅದಕ್ಕಾಗಿ ಇಂದಿನಿಂದಲೇ ಗಿಡ- ಮರ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು~ ಎಂದರು.<br /> <br /> ಬಳಿಕ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>