<p><strong>ಬೆಂಗಳೂರು: </strong>‘ಹಿಂದೂ ಧರ್ಮದಲ್ಲಿ ಹೆಣ್ಣಿಗೆ ಇನ್ನೂ ಸಮಾನತೆ ಸಿಕ್ಕಿಲ್ಲ. ಹಿಂದೂ ಧರ್ಮದ ಚೌಕಟ್ಟಿನಲ್ಲಿ ಹೆಣ್ಣನ್ನು ಕೇವಲ ಸ್ತೋತ್ರಗಳ ಹೊಗಳಿಕೆಗಷ್ಟೇ ಸೀಮಿತಗೊಳಿಸಲಾಗಿದೆ’ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಷಾದಿಸಿದರು.<br /> <br /> ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಲಿಟರಸಿ ರಾಜಭವನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣನ್ ಅವರು ಸಂಪಾದಿಸಿರುವ ‘ಪ್ರೊ.ಬಿ.ಎನ್.ಸಂಪತ್ಸ್ ಹಿಂದೂ ಲಾ’ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.<br /> <br /> ‘ವೇದ– ವೇದಾಂತಗಳಲ್ಲಿ ಹೆಣ್ಣು ಶ್ರೇಷ್ಠ ಎಂದು ಸ್ತೋತ್ರಗಳ ಮೂಲಕ ಹೊಗಳಲಾಗುತ್ತದೆ. ಆದರೆ, ಸ್ತೋತ್ರಗಳ ಆಶಯ ಅನುಷ್ಠಾನಕ್ಕೆ ಬಂದಿಲ್ಲ. ಹೆಣ್ಣು ವಿಧವೆಯಾದರೆ ಆಕೆಯನ್ನು ನಿಕೃಷ್ಟವಾಗಿ ನೋಡುವ ಪದ್ಧತಿ ಇಂದಿಗೂ ಜೀವಂತವಾಗಿದೆ’ ಎಂದು ಅವರು ಹೇಳಿದರು.<br /> ‘ಸತಿ ಪದ್ಧತಿ ನಿರ್ಮೂಲನೆಗೆ ರಾಜಾರಾಮ್ ಮೋಹನ್ ರಾಯ್ ಶ್ರಮಿಸಿದರು. ಆದರೆ, ಹೆಣ್ಣನ್ನು ದ್ವಿತೀಯ ದರ್ಜೆ ಪ್ರಜೆಯಂತೆ ನೋಡುವ ಪರಿಪಾಠ ಇಂದಿಗೂ ತಪ್ಪಿಲ್ಲ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.<br /> <br /> ‘ಪ್ರೊ.ಬಿ.ಎನ್.ಸಂಪತ್ ಅವರ ‘ಹಿಂದೂ ಲಾ’ ಪುಸ್ತಕ ಹಿಂದೂ ಧರ್ಮದ ಕಾನೂನುಗಳ ಬಗ್ಗೆ ಬೆಳಕು ಚೆಲ್ಲುತ್ತದೆ. ಅವರ ಪುಸ್ತಕವನ್ನು ಸಂಪಾದಿಸಿ, ಪ್ರಕಟಿಸಿರುವ ಬಿ.ಎನ್.ಕೃಷ್ಣನ್ ಅವರ ಕಾರ್ಯ ಅಭಿನಂದನೀಯ’ ಎಂದು ನುಡಿದರು.<br /> <br /> ರಾಜ್ಯಸಭಾ ಸದಸ್ಯ ಡಾ.ಎಂ.ರಾಮಾ ಜೋಯಿಸ್ ಮಾತನಾಡಿ, ‘ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಮೂರು ದಶಕಗಳ ಕಾಲ<br /> ಕಾನೂನು ಪ್ರಾಧ್ಯಾಪಕರಾಗಿದ್ದ ಪ್ರೊ.ಬಿ.ಎನ್.ಸಂಪತ್ ಅವರು ಹಿಂದೂ ಕಾನೂನು ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ’ ಎಂದರು.<br /> ಎರಡು ಸಂಪುಟಗಳಲ್ಲಿರುವ ಪುಸ್ತಕವನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಲಿಟರಸಿ ಹೊರತಂದಿದೆ. ಬೆಲೆ ₨ 1200.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಹಿಂದೂ ಧರ್ಮದಲ್ಲಿ ಹೆಣ್ಣಿಗೆ ಇನ್ನೂ ಸಮಾನತೆ ಸಿಕ್ಕಿಲ್ಲ. ಹಿಂದೂ ಧರ್ಮದ ಚೌಕಟ್ಟಿನಲ್ಲಿ ಹೆಣ್ಣನ್ನು ಕೇವಲ ಸ್ತೋತ್ರಗಳ ಹೊಗಳಿಕೆಗಷ್ಟೇ ಸೀಮಿತಗೊಳಿಸಲಾಗಿದೆ’ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಷಾದಿಸಿದರು.<br /> <br /> ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಲಿಟರಸಿ ರಾಜಭವನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣನ್ ಅವರು ಸಂಪಾದಿಸಿರುವ ‘ಪ್ರೊ.ಬಿ.ಎನ್.ಸಂಪತ್ಸ್ ಹಿಂದೂ ಲಾ’ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.<br /> <br /> ‘ವೇದ– ವೇದಾಂತಗಳಲ್ಲಿ ಹೆಣ್ಣು ಶ್ರೇಷ್ಠ ಎಂದು ಸ್ತೋತ್ರಗಳ ಮೂಲಕ ಹೊಗಳಲಾಗುತ್ತದೆ. ಆದರೆ, ಸ್ತೋತ್ರಗಳ ಆಶಯ ಅನುಷ್ಠಾನಕ್ಕೆ ಬಂದಿಲ್ಲ. ಹೆಣ್ಣು ವಿಧವೆಯಾದರೆ ಆಕೆಯನ್ನು ನಿಕೃಷ್ಟವಾಗಿ ನೋಡುವ ಪದ್ಧತಿ ಇಂದಿಗೂ ಜೀವಂತವಾಗಿದೆ’ ಎಂದು ಅವರು ಹೇಳಿದರು.<br /> ‘ಸತಿ ಪದ್ಧತಿ ನಿರ್ಮೂಲನೆಗೆ ರಾಜಾರಾಮ್ ಮೋಹನ್ ರಾಯ್ ಶ್ರಮಿಸಿದರು. ಆದರೆ, ಹೆಣ್ಣನ್ನು ದ್ವಿತೀಯ ದರ್ಜೆ ಪ್ರಜೆಯಂತೆ ನೋಡುವ ಪರಿಪಾಠ ಇಂದಿಗೂ ತಪ್ಪಿಲ್ಲ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.<br /> <br /> ‘ಪ್ರೊ.ಬಿ.ಎನ್.ಸಂಪತ್ ಅವರ ‘ಹಿಂದೂ ಲಾ’ ಪುಸ್ತಕ ಹಿಂದೂ ಧರ್ಮದ ಕಾನೂನುಗಳ ಬಗ್ಗೆ ಬೆಳಕು ಚೆಲ್ಲುತ್ತದೆ. ಅವರ ಪುಸ್ತಕವನ್ನು ಸಂಪಾದಿಸಿ, ಪ್ರಕಟಿಸಿರುವ ಬಿ.ಎನ್.ಕೃಷ್ಣನ್ ಅವರ ಕಾರ್ಯ ಅಭಿನಂದನೀಯ’ ಎಂದು ನುಡಿದರು.<br /> <br /> ರಾಜ್ಯಸಭಾ ಸದಸ್ಯ ಡಾ.ಎಂ.ರಾಮಾ ಜೋಯಿಸ್ ಮಾತನಾಡಿ, ‘ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಮೂರು ದಶಕಗಳ ಕಾಲ<br /> ಕಾನೂನು ಪ್ರಾಧ್ಯಾಪಕರಾಗಿದ್ದ ಪ್ರೊ.ಬಿ.ಎನ್.ಸಂಪತ್ ಅವರು ಹಿಂದೂ ಕಾನೂನು ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ’ ಎಂದರು.<br /> ಎರಡು ಸಂಪುಟಗಳಲ್ಲಿರುವ ಪುಸ್ತಕವನ್ನು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಲಿಟರಸಿ ಹೊರತಂದಿದೆ. ಬೆಲೆ ₨ 1200.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>