<p><strong>ಬೆಂಗಳೂರು: </strong>ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದ ಹಿರಿಯ ಸಾಹಿತಿ ರಂ.ಶಾ. ಲೋಕಾಪುರೆ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರು ಮಹಾರಾಷ್ಟ್ರದ ಪುಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.<br /> <br /> 2016ರ ನ.1ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಲೋಕಾಪುರೆ ಅವರು ಗೈರು ಹಾಜರಾಗಿದ್ದರು. ಸಚಿವೆ ಉಮಾಶ್ರೀ ಅವರು ಪುಣೆಯಲ್ಲಿರುವ ಲೋಕಾಪುರೆ ಅವರ ಮನೆಗೆ ಶನಿವಾರ ಭೇಟಿ ನೀಡಿ ಅಭಿನಂದಿಸಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಉಮಾಶ್ರೀ, ‘ಕನ್ನಡ, ಮರಾಠಿ, ಸಂಸ್ಕೃತ ಭಾಷೆಗಳ ಮೇಲೆ ಅಪಾರ ಪಾಂಡಿತ್ಯ ಹೊಂದಿರುವ ಲೋಕಾಪುರೆ ಅವರು ಸಾಹಿತ್ಯದಲ್ಲಿ ಬಹಳ ದೊಡ್ಡ ಸಾಧನೆ ಮಾಡಿದ್ದಾರೆ. ಅತ್ಯಂತ ಬಡತನದಿಂದ ಬಂದರೂ ಸಾಹಿತ್ಯ ಶ್ರೀಮಂತಿಕೆ ಹೆಚ್ಚಿಸಿಕೊಂಡಿದ್ದಾರೆ’ ಎಂದರು.<br /> <br /> ಪ್ರಶಸ್ತಿ ಸ್ವೀಕರಿಸಿದ ಲೋಕಾಪುರೆ ಅವರು ಮಾತನಾಡಿ, ‘ಪುಣೆ, ಮುಂಬಯಿ, ಬೆಳಗಾವಿ ನಗರಗಳ ನಡುವಿನ ನಿಕಟ ಬಾಂಧವ್ಯ ನನಗೆ ಹಲವು ಭಾಷೆಗಳಲ್ಲಿ ಅಧ್ಯಯನ ಮಾಡಲು ಸಹಾಯವಾಯಿತು.<br /> <br /> ಸಂತ ಜ್ಞಾನೇಶ್ವರರ ಅನುಗ್ರಹದಿಂದ ಸಂಸ್ಕೃತ, ಕನ್ನಡ ಮತ್ತು ಮರಾಠಿ ಭಾಷೆಗಳಲ್ಲಿ ‘ಜ್ಞಾನೇಶ್ವರಿ’ ಸಾಹಿತ್ಯ ರಚನೆ ಮಾಡಿದ್ದೇನೆ. ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದಕ್ಕೆ ಕರ್ನಾಟಕ ಸರ್ಕಾರಕ್ಕೆ ವಂದನೆಗಳು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದ ಹಿರಿಯ ಸಾಹಿತಿ ರಂ.ಶಾ. ಲೋಕಾಪುರೆ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರು ಮಹಾರಾಷ್ಟ್ರದ ಪುಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.<br /> <br /> 2016ರ ನ.1ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಲೋಕಾಪುರೆ ಅವರು ಗೈರು ಹಾಜರಾಗಿದ್ದರು. ಸಚಿವೆ ಉಮಾಶ್ರೀ ಅವರು ಪುಣೆಯಲ್ಲಿರುವ ಲೋಕಾಪುರೆ ಅವರ ಮನೆಗೆ ಶನಿವಾರ ಭೇಟಿ ನೀಡಿ ಅಭಿನಂದಿಸಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಉಮಾಶ್ರೀ, ‘ಕನ್ನಡ, ಮರಾಠಿ, ಸಂಸ್ಕೃತ ಭಾಷೆಗಳ ಮೇಲೆ ಅಪಾರ ಪಾಂಡಿತ್ಯ ಹೊಂದಿರುವ ಲೋಕಾಪುರೆ ಅವರು ಸಾಹಿತ್ಯದಲ್ಲಿ ಬಹಳ ದೊಡ್ಡ ಸಾಧನೆ ಮಾಡಿದ್ದಾರೆ. ಅತ್ಯಂತ ಬಡತನದಿಂದ ಬಂದರೂ ಸಾಹಿತ್ಯ ಶ್ರೀಮಂತಿಕೆ ಹೆಚ್ಚಿಸಿಕೊಂಡಿದ್ದಾರೆ’ ಎಂದರು.<br /> <br /> ಪ್ರಶಸ್ತಿ ಸ್ವೀಕರಿಸಿದ ಲೋಕಾಪುರೆ ಅವರು ಮಾತನಾಡಿ, ‘ಪುಣೆ, ಮುಂಬಯಿ, ಬೆಳಗಾವಿ ನಗರಗಳ ನಡುವಿನ ನಿಕಟ ಬಾಂಧವ್ಯ ನನಗೆ ಹಲವು ಭಾಷೆಗಳಲ್ಲಿ ಅಧ್ಯಯನ ಮಾಡಲು ಸಹಾಯವಾಯಿತು.<br /> <br /> ಸಂತ ಜ್ಞಾನೇಶ್ವರರ ಅನುಗ್ರಹದಿಂದ ಸಂಸ್ಕೃತ, ಕನ್ನಡ ಮತ್ತು ಮರಾಠಿ ಭಾಷೆಗಳಲ್ಲಿ ‘ಜ್ಞಾನೇಶ್ವರಿ’ ಸಾಹಿತ್ಯ ರಚನೆ ಮಾಡಿದ್ದೇನೆ. ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದಕ್ಕೆ ಕರ್ನಾಟಕ ಸರ್ಕಾರಕ್ಕೆ ವಂದನೆಗಳು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>