<p><strong>ಬೆಂಗಳೂರು:</strong> ಕೆಂಗೇರಿ ಮೇಲ್ಸೇತುವೆ ಸಮೀಪದ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಲಯ (ಎಸ್ಜೆಆರ್ಸಿ) ಶಾಲೆಗೆ ಶುಕ್ರವಾರ ಮಧ್ಯಾಹ್ನ ಮಹಿಳೆಯೊಬ್ಬರಿಂದ ಬಂದ ಹುಸಿ ಬಾಂಬ್ ಕರೆ ಕೆಲ ಆತಂಕದ ವಾತಾವರಣ ನಿರ್ಮಿಸಿತು.<br /> <br /> ಮಧ್ಯಾಹ್ನ 11.45ರ ಸುಮಾರಿಗೆ ಮಹಿಳೆಯೊಬ್ಬರು ಶಾಲೆಯ ಮುಖ್ಯಸ್ಥೆ ವನಮಾಲ ಎಂಬುವರ ಕಚೇರಿಗೆ ಕರೆ ಮಾಡಿ, ಶಾಲೆಯಲ್ಲಿ ಬಾಂಬ್ ಇರುವುದಾಗಿ ಹೇಳಿದ್ದಾರೆ. ಇದರಿಂದ ಗಾಬರಿಗೊಂಡ ಮನಮಾಲ ಅವರು ಕೂಡಲೇ ಮಕ್ಕಳನ್ನು ಹೊರಗೆ ಕಳುಹಿಸಿ, ಕೆಂಗೇರಿ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.<br /> <br /> `ಮಧ್ಯಾಹ್ನ 12.10ರ ಸುಮಾರಿಗೆ ಶಾಲೆಯ ಮುಖ್ಯಸ್ಥರು ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು. ಕೂಡಲೇ, ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದ ಸಿಬ್ಬಂದಿಯೊಂದಿಗೆ ಶಾಲೆಗೆ ತೆರಳಿ ಸುಮಾರು ಒಂದು ತಾಸು ಪರಿಶೀಲನೆ ನಡೆಸಲಾಯಿತು.<br /> <br /> ಬಳಿಕ ಇದೊಂದು ಹುಸಿ ಕರೆ ಎಂದು ಗೊತ್ತಾಯಿತು. ಆ ಮಹಿಳೆ ಕಾಯಿನ್ ಬಾಕ್ಸ್ನಿಂದ ಕರೆ ಮಾಡಿದ್ದು, ಎಲ್ಲಿಂದ ಕರೆ ಮಾಡಿದ್ದರು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಈ ಸಂಬಂಧ ಅನಾಮಧೇಯ ಕರೆಯಿಂದ ಬೆದರಿಕೆ ಹಾಕಿದ (ಐಪಿಸಿ 507) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಕೆಂಗೇರಿ ಪೊಲೀಸರು ಮಾಹಿತಿ ನೀಡಿದರು.<br /> <br /> `ಶಾಲೆಯಲ್ಲಿ ಸುಮಾರು 95 ಮಕ್ಕಳಿದ್ದರು. ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ತರಗತಿಯನ್ನು ರದ್ದುಗೊಳಿಸಿ ಮಕ್ಕಳನ್ನು ಮನೆಗೆ ಕಳುಹಿಸಲಾಯಿತು. ಅಲ್ಲದೇ, ಕೆಂಗೇರಿ 80 ಅಡಿ ರಸ್ತೆಯಲ್ಲಿರುವ ಎಸ್ಜೆಆರ್ಸಿ ಶಾಲೆಗೂ ಮಧ್ಯಾಹ್ನದ ನಂತರ ರಜೆ ಘೋಷಿಸಲಾಯಿತು' ಎಂದು ವನಮಾಲ ತಿಳಿಸಿದರು.<br /> <br /> ಯುವಕ ಸಾವು: ಬಾಗಲೂರು ಕಣ್ಣೂರು ಮುಖ್ಯರಸ್ತೆಯ ತವಕಲ್ ಮಸೀದಿ ಸಮೀಪ ಗುರುವಾರ ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಮದ್ ಖುದ್ದುಸ್ (20) ಎಂಬುವರು ಸಾವನ್ನಪ್ಪಿದ್ದಾರೆ.<br /> <br /> ಹೊಸೂರು ಬಂಡೆ ನಿವಾಸಿಯಾದ ಖುದ್ದುಸ್, ಮಹಮ್ಮದ್ ಯೂಸಫ್ ಎಂಬುವರ ಮಗ. ವೆಲ್ಡರ್ ಕೆಲಸ ಮಾಡುತ್ತಿದ್ದ ಖುದ್ದುಸ್, ಕೆಲಸ ಮುಗಿಸಿಕೊಂಡು ಊಟ ಮಾಡಲು ಮಧ್ಯಾಹ್ನ 3.30ರ ಸುಮಾರಿಗೆ ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ (ಕೆಎ 28 ಎ 1904) ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಳಗೆ ಬಿದ್ದ ಅವರ ಮೇಲೆ ಕ್ಯಾಂಟರ್ನ ಚಕ್ರ ಹರಿದ ಪರಿಣಾಮ, ಖುದ್ದುಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಘಟನೆ ನಂತರ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಚಿಕ್ಕಜಾಲ ಪೊಲೀಸರು ಮಾಹಿತಿ ನೀಡಿದರು. ಗುರುತು ಪತ್ತೆ: ವಿಜಯನಗರ ಸಮೀಪದ ಹೊಸಹಳ್ಳಿ ಕಾಲೊನಿಯಲ್ಲಿ ಬುಧವಾರ ರಾತ್ರಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಕೊಲೆಯಾದ ವ್ಯಕ್ತಿಯನ್ನು ರಘು ಅಲಿಯಾಸ್ ಮೆಂಟಲ್ ರಘು (30) ಎಂದು ಗುರುತಿಸಲಾಗಿದೆ.<br /> <br /> ರಘು ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ ವಿವಿಧ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ನಾಲ್ಕೈದು ಮಂದಿ ದುಷ್ಕರ್ಮಿಗಳು, ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತೀವ್ರ ಗಾಯಗೊಂಡಿದ್ದ ರಘು, ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಂಗೇರಿ ಮೇಲ್ಸೇತುವೆ ಸಮೀಪದ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಲಯ (ಎಸ್ಜೆಆರ್ಸಿ) ಶಾಲೆಗೆ ಶುಕ್ರವಾರ ಮಧ್ಯಾಹ್ನ ಮಹಿಳೆಯೊಬ್ಬರಿಂದ ಬಂದ ಹುಸಿ ಬಾಂಬ್ ಕರೆ ಕೆಲ ಆತಂಕದ ವಾತಾವರಣ ನಿರ್ಮಿಸಿತು.<br /> <br /> ಮಧ್ಯಾಹ್ನ 11.45ರ ಸುಮಾರಿಗೆ ಮಹಿಳೆಯೊಬ್ಬರು ಶಾಲೆಯ ಮುಖ್ಯಸ್ಥೆ ವನಮಾಲ ಎಂಬುವರ ಕಚೇರಿಗೆ ಕರೆ ಮಾಡಿ, ಶಾಲೆಯಲ್ಲಿ ಬಾಂಬ್ ಇರುವುದಾಗಿ ಹೇಳಿದ್ದಾರೆ. ಇದರಿಂದ ಗಾಬರಿಗೊಂಡ ಮನಮಾಲ ಅವರು ಕೂಡಲೇ ಮಕ್ಕಳನ್ನು ಹೊರಗೆ ಕಳುಹಿಸಿ, ಕೆಂಗೇರಿ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.<br /> <br /> `ಮಧ್ಯಾಹ್ನ 12.10ರ ಸುಮಾರಿಗೆ ಶಾಲೆಯ ಮುಖ್ಯಸ್ಥರು ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು. ಕೂಡಲೇ, ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದ ಸಿಬ್ಬಂದಿಯೊಂದಿಗೆ ಶಾಲೆಗೆ ತೆರಳಿ ಸುಮಾರು ಒಂದು ತಾಸು ಪರಿಶೀಲನೆ ನಡೆಸಲಾಯಿತು.<br /> <br /> ಬಳಿಕ ಇದೊಂದು ಹುಸಿ ಕರೆ ಎಂದು ಗೊತ್ತಾಯಿತು. ಆ ಮಹಿಳೆ ಕಾಯಿನ್ ಬಾಕ್ಸ್ನಿಂದ ಕರೆ ಮಾಡಿದ್ದು, ಎಲ್ಲಿಂದ ಕರೆ ಮಾಡಿದ್ದರು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಈ ಸಂಬಂಧ ಅನಾಮಧೇಯ ಕರೆಯಿಂದ ಬೆದರಿಕೆ ಹಾಕಿದ (ಐಪಿಸಿ 507) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಕೆಂಗೇರಿ ಪೊಲೀಸರು ಮಾಹಿತಿ ನೀಡಿದರು.<br /> <br /> `ಶಾಲೆಯಲ್ಲಿ ಸುಮಾರು 95 ಮಕ್ಕಳಿದ್ದರು. ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ತರಗತಿಯನ್ನು ರದ್ದುಗೊಳಿಸಿ ಮಕ್ಕಳನ್ನು ಮನೆಗೆ ಕಳುಹಿಸಲಾಯಿತು. ಅಲ್ಲದೇ, ಕೆಂಗೇರಿ 80 ಅಡಿ ರಸ್ತೆಯಲ್ಲಿರುವ ಎಸ್ಜೆಆರ್ಸಿ ಶಾಲೆಗೂ ಮಧ್ಯಾಹ್ನದ ನಂತರ ರಜೆ ಘೋಷಿಸಲಾಯಿತು' ಎಂದು ವನಮಾಲ ತಿಳಿಸಿದರು.<br /> <br /> ಯುವಕ ಸಾವು: ಬಾಗಲೂರು ಕಣ್ಣೂರು ಮುಖ್ಯರಸ್ತೆಯ ತವಕಲ್ ಮಸೀದಿ ಸಮೀಪ ಗುರುವಾರ ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಮದ್ ಖುದ್ದುಸ್ (20) ಎಂಬುವರು ಸಾವನ್ನಪ್ಪಿದ್ದಾರೆ.<br /> <br /> ಹೊಸೂರು ಬಂಡೆ ನಿವಾಸಿಯಾದ ಖುದ್ದುಸ್, ಮಹಮ್ಮದ್ ಯೂಸಫ್ ಎಂಬುವರ ಮಗ. ವೆಲ್ಡರ್ ಕೆಲಸ ಮಾಡುತ್ತಿದ್ದ ಖುದ್ದುಸ್, ಕೆಲಸ ಮುಗಿಸಿಕೊಂಡು ಊಟ ಮಾಡಲು ಮಧ್ಯಾಹ್ನ 3.30ರ ಸುಮಾರಿಗೆ ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ (ಕೆಎ 28 ಎ 1904) ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಳಗೆ ಬಿದ್ದ ಅವರ ಮೇಲೆ ಕ್ಯಾಂಟರ್ನ ಚಕ್ರ ಹರಿದ ಪರಿಣಾಮ, ಖುದ್ದುಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಘಟನೆ ನಂತರ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಚಿಕ್ಕಜಾಲ ಪೊಲೀಸರು ಮಾಹಿತಿ ನೀಡಿದರು. ಗುರುತು ಪತ್ತೆ: ವಿಜಯನಗರ ಸಮೀಪದ ಹೊಸಹಳ್ಳಿ ಕಾಲೊನಿಯಲ್ಲಿ ಬುಧವಾರ ರಾತ್ರಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಕೊಲೆಯಾದ ವ್ಯಕ್ತಿಯನ್ನು ರಘು ಅಲಿಯಾಸ್ ಮೆಂಟಲ್ ರಘು (30) ಎಂದು ಗುರುತಿಸಲಾಗಿದೆ.<br /> <br /> ರಘು ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ ವಿವಿಧ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ನಾಲ್ಕೈದು ಮಂದಿ ದುಷ್ಕರ್ಮಿಗಳು, ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತೀವ್ರ ಗಾಯಗೊಂಡಿದ್ದ ರಘು, ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>